ಇತಿಹಾಸ ಸೃಷ್ಟಿಸಿರುವ ಕಾವೇರಿ ಆರತಿ ನಿಲ್ಲೋದಿಲ್ಲ; ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್

The history-making Cauvery Aarti will not stop; DCM D.K. Shivakumar

ಬೆಂಗಳೂರು: ಇದೇ‌ ಮೊದಲ ಬಾರಿಗೆ ವಾರಣಾಸಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಮಂಡ್ಯ ಜಿಲ್ಲೆ ಕೆ ಆರ್ ಎಸ್ ನಲ್ಲಿ ಐತಿಹಾಸಿಕ ಕಾವೇರಿ ಆರತಿಯನ್ನು (Cauvery Aarti) ಅಭೂತಪೂರ್ಣವಾಗಿ ನೆರವೇರಿಸಿದ ಪಂಡಿತ, ಪುರೋಹಿತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸನ್ಮಾನಿಸಿದರು.

ಇತಿಹಾಸ ಸೃಷ್ಟಿಸಿರುವ ಕಾವೇರಿ ಆರತಿ ನಿಲ್ಲೋದಿಲ್ಲ; ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ಜಿಲ್ಲೆ ಕೆಆರ್ ಎಸ್ ನ ಬೃಂದಾವನ ಉದ್ಯಾನದಲ್ಲಿ ಸತತ 5 ದಿನಗಳ ಕಾಲ ಕಾವೇರಿ ಆರತಿಯಲ್ಲಿ ಪಾಲ್ಗೊಂಡ 55 ಮಂದಿ ಅರ್ಚಕರನ್ನು ಶಿವಕುಮಾರ್ ಅವರು ಕುಮಾರಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಸರಕಾರಿ ನಿವಾಸದಲ್ಲಿ ಶುಕ್ರವಾರ ಫಲ, ತಾಂಬೂಲ, ವಸ್ತ್ರ ನೀಡಿ ಸಾಂಪ್ರದಾಯಿಕವಾಗಿ ಅಭಿನಂದಿಸಿದರು.

ತಮ್ಮನ್ನು ಸನ್ಮಾನಿಸಿ ಸತ್ಸಂಪ್ರದಾಯ ಮೆರೆದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕಾವೇರಿ ಆರತಿ ಪ್ರಧಾನ ಅರ್ಚಕ ವಿಜಯಕುಮಾರ್ ಪಂಡಿತ್ ಅವರು ಆಶೀರ್ವದಿಸಿದರು.

ಕಾವೇರಿ ಆರತಿ ನಿಲ್ಲುವುದಿಲ್ಲ

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು,”ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರೆಸುತ್ತೇವೆ.‌ ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ.‌ ನಾವೆಲ್ಲರೂ ‌ಸೇರಿ ಪ್ರಾರ್ಥನೆ ಸಲ್ಲಿಸೋಣ.‌ ಆರತಿಗಾಗಿ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ‌‌ ಮಾಡೋಣ‌” ಎಂದರು.

“ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಬೇಕು. ನಾನು ಅಥವಾ ಇನ್ಯಾರೋ ಪುರೋಹಿತರಾಗಲು ಸಾಧ್ಯವಿಲ್ಲ. ನೀವೇ ಆ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ‌ಬೆಳಿಗ್ಗೆ ಹೊತ್ತು ಭಕ್ತಾಧಿಗಳು ಕಾವೇರಿಗೆ ಪೂಜೆ ಸಲ್ಲಿಸುವ ರೀತಿಯಲ್ಲೂ ವ್ಯವಸ್ಥೆ ಮಾಡಲಾಗುವುದು. ವಾರ ಪೂರ್ತಿ ಆರತಿ ಕಾರ್ಯಕ್ರಮ ನಡೆಯಬೇಕು ಎಂಬುದು ನನ್ನ ಆಸೆಯಾಗಿದೆ” ಎಂದರು.

“ಕಾವೇರಿ ಆರತಿ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಜೀವನದಿ ಕಾವೇರಿಗೆ ಪೂಜೆ ಸಲ್ಲಿಸುವ ಭಾಗ್ಯ ನಮಗೆ ಹಾಗೂ ನಿಮಗೆ ಸಿಕ್ಕಿದೆ. ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸಲು ಕೆಲವರು ಅಡಚಣೆ ಮಾಡುತ್ತಿದ್ದಾರೆ. ಅಡಚಣೆ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ” ಎಂದರು.

“ಕಾವೇರಿ ಆರತಿ ಅತ್ಯುತ್ತಮವಾಗಿ ನೆರವೇರಿದೆ. ಮುಂದಕ್ಕೆ ಯಾವ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು, ಏನೇನು ತಪ್ಪುಗಳಾಗಿವೆ ಎಂಬುದನ್ನು ಗಮನಿಸಬೇಕು. ಇನ್ನೂ ಯಾವ ರೀತಿಯ ಧಾರ್ಮಿಕ ಕೆಲಸಗಳು ನೆರವೇರಬೇಕು ಎಂಬುದನ್ನು ಗಮನಿಸಬೇಕು. ಭಕ್ತಿ ಪ್ರಧಾನವಾಗಿ ಜನರ ಮನಸ್ಸಿಗೆ ಮುಟ್ಟುವಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು” ಎಂದರು.

“ವಾರಣಾಸಿಯ ಗಂಗಾ ಆರತಿಗೆ ಕಡಿಮೆಯಿಲ್ಲದಂತೆ ಇಲ್ಲೂ ಆರತಿ ನೆರವೇರಿದೆ. ದಕ್ಷಿಣ ಭಾರತದಲ್ಲಿ ಪದ್ಧತಿಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಕಾವೇರಿ ಮಾತೆ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಸ್ಥಳೀಯ ಪುರೋಹಿತರು ತಮ್ಮ ಪಾಂಡಿತ್ಯ ಬಳಸಿಕೊಂಡು ಇನ್ನೂ ಯಾವ ರೀತಿಯ ಪೂಜಾ ಕೈಂಕರ್ಯಗಳನ್ನು ನೆರವೇರಿಸಬಹುದು ಎಂದು ಪರಿಶೀಲನೆ ನಡೆಸಿ” ಎಂದರು.

“ಊರಲ್ಲಿರುವ ಎಲ್ಲಾ ಎತ್ತುಗಳು ಬಸವ ಆಗಲು ಸಾಧ್ಯವಿಲ್ಲ. ಆದ ಕಾರಣಕ್ಕೆ ಉತ್ತಮ ಅಧಿಕಾರಿಯಾದ ರಾಮ ಪ್ರಸಾತ್ ಮೋಹನ್ ಅವರಿಗೆ ಇದರ ಜವಾಬ್ದಾರಿ ನೀಡಲಾಯಿತು. ಇವರ ಜೊತೆಗೆ ಸ್ಥಳೀಯ ಅಧಿಕಾರಿಗಳು ಕೈ ಜೋಡಿಸಿ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಕಾವೇರಿ ಮಾತೆಯ ಆಶೀರ್ವಾದ ಸದಾ ಎಲ್ಲರ ಮೇಲಿರಲಿ. ಪ್ರತಿವರ್ಷ ಉತ್ತಮ ಮಳೆ, ಬೆಳೆ ಬರಲಿ” ಎಂದು ಪ್ರಾರ್ಥಿಸಿದರು.

“ಕೊಡಗಿನಲ್ಲಿ ಹುಟ್ಟಿ ಅರಬ್ಬೀ ಸಮುದ್ರ ಸೇರುವ ತನಕ ಸುಮಾರು ಎರಡುವರೆ ಕೋಟಿ ಜನರ ಜೀವನಾಡಿಯಾಗಿ ಕಾವೇರಿ ಹರಿಯುತ್ತದೆ. ಕೃಷಿ, ಕೈಗಾರಿಕೆ ಸೇರಿದಂತೆ ಪ್ರತಿಯೊಂದಕ್ಕೂ ಕಾವೇರಿಯೇ ಆಧಾರ” ಎಂದರು.

ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನದಲ್ಲಿ ಈ ಬಾರಿ ಐದು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮವನ್ನು ನಡೆಸಲಾಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮ್ಮಿಲನವಾಗಿದ್ದ ಈ ಕಾವೇರಿ ಆರತಿ ರಾಜ್ಯದಲ್ಲಿ ಐತಿಹಾಸಿಕ ಸುಸಂಪ್ರದಾಯಕ್ಕೆ ನಾಂದಿಯಾಡಿತು. ಭಕ್ತಿ, ಸಂಸ್ಕೃತಿ, ಕಲೆ, ಸಂಗೀತ ಹಾಗೂ ವರ್ಣರಂಜಿತ ದೀಪಾಲಂಕಾರ ಪ್ರವಾಸಿಗರ ಮನಸ್ಸನ್ನು ಸೂರೆಗೊಂಡಿತು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]