World Senior Citizens Day: Senior citizens are reservoirs of experience; ADC Syeda Aisha

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರು ಅನುಭವದ ಕಣಜಗಳು; ಎಡಿಸಿ ಸೈಯಿದಾ ಅಯಿಷಾ

ಬೆಂ.ಗ್ರಾಂ.ಜಿಲ್ಲೆ: ಹಿರಿಯ ನಾಗರಿಕರು (Senior citizens) ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದವನ್ನು ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ (Syeda Aisha) ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ (Senior citizens) ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ (World Senior Citizens Day) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯರ ತ್ಯಾಗ ಸೇವೆ, ಜ್ಞಾನವನ್ನು ನೆನಪಿಸುವ ಮಹತ್ತರ ದಿನವಾಗಿದೆ. ಹಿರಿಯರು ನಮ್ಮ ಭೂತಕಾಲದ ನೆನಪುಗಳು ವರ್ತಮಾನದ ಆಸ್ತಿಗಳು ಮತ್ತು ಭವಿಷ್ಯದ ಪ್ರೇರಣೆ. ಅವರು ನಮ್ಮ ಸಮಾಜದ ಬೆನ್ನೆಲುಬು ತಮ್ಮ ಜೀವನವನ್ನು ಕುಟುಂಬ,ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಅರ್ಪಿಸಿದ್ದಾರೆ. ಹಿರಿಯರು ಸಂಸ್ಕೃತಿಯ ಸಾಗರ ಅನುಭವದ ವಿಶ್ವಕೋಶ. ಅವರ ಆಶೀರ್ವಾದವಿಲ್ಲದೆ ಯಾವ ಕುಟುಂಬ ಸಮೃದ್ಧಿ ಹೊಂದಲು ಸಾಧ್ಯವಿಲ್ಲ. ನಾವು ಹಿರಿಯರನ್ನು ಕೇವಲ ಕುಟುಂಬದ ಸದಸ್ಯರಾಗಿ ಕಾಣಬಾರದು ಅವರನ್ನು ಜ್ಞಾನಿಗಳಾಗಿ ಮಾರ್ಗದರ್ಶಕರಾಗಿ ಕಾಣಬೇಕು. ಅವರ ಪ್ರೀತಿ ಸಲಹೆ ಮಾರ್ಗದರ್ಶನಗಳು ನಮ್ಮ ಬದುಕಿಗೆ ದಾರಿ ತೋರುವ ದೀಪಗಳು ಎಂದರು.

1,12,236 ಜನ ಹಿರಿಯ ನಾಗರಿಕರು ಪಿಂಚಣಿ

ಜಿಲ್ಲೆಯಲ್ಲಿ 1,12,236 ಜನ ಹಿರಿಯ ನಾಗರಿಕರು ಪಿಂಚಣಿ ತೆಗೆದುಕೊಳ್ಳುತ್ತಿದ್ದಾರೆ. ಹಿರಿಯ ನಾಗರಿಕರು ಓಡಾಡುವಾಗ ಕೆಲ ಸಂದರ್ಭದಲ್ಲಿ ಬಿದ್ದು ಪ್ರಾಣ ಹಾನಿಗಳು ಆಗಿವೆ ಕೆಲವರು ಕೈ ಕಾಲುಗಳನ್ನು ಕಳೆದು ಕೊಂಡಿದ್ದಾರೆ ಹೀಗೆ ಹಲವಾರು ರೀತಿ ಅನಾಹುತಗಳು ಆಗಿವೆ ಅದಕ್ಕಾಗಿ ಹಿರಿಯ ನಾಗರಿಕರಿಗೆ ಅನುಕೂಲವಾಗಲು ನಮ್ಮ ಊರುಗೋಲು ಎಂಬ ಕಾರ್ಯಕ್ರಮ ರೂಪಿಸಿ ಅದರಲ್ಲಿ 5000 ಹಿರಿಯ ನಾಗರಿಕರಿಗೆ ಊರಗೋಲನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ ಹಿರಿಯ ನಾಗರಿಕರು ಅನುಭವದಿಂದ ಪಾಠ ಕಲಿತಿರುತ್ತಾರೆ. ಹಿರಿಯರು ಹೇಳುವ ಕಥೆಯಲ್ಲಿ ನೈತಿಕತೆಯ ಸಾರಂಶ, ನೀತಿ ಪಾಠ ತುಂಬಿರುತ್ತದೆ. ಅವರು ಮಾನಸಿಕವಾಗಿ ಸಧೃಡರಾಗಿರುತ್ತಾರೆ. ಅವರು ವಿದ್ಯಾಭ್ಯಾಸ ಮಾಡಿರದಿದ್ದರು ಔಷಧೋಪಚಾರದ ಅರಿವಿರುತ್ತಿತ್ತು. ಅವರ ಅನುಭವದ ಸಾಮರ್ಥ್ಯ ಬಹಳ ದೊಡ್ಡದು ಹಾಗಾಗಿ ಅವರ ಮಾತನ್ನು ಕೇಳಬೇಕು. ಇಂದು ನಾನು ಅಧಿಕಾರಿಯಾಗಿ ಕೆಲಸ ನಿರ್ವಹಿಸಲು ಕಾರಣ ಹಿರಿಯರು ಎಂದು ನೆನಪಿಸಿಕೊಂಡರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನೆಲಮಂಗಲ ತಾಲ್ಲೂಕಿನ ಎಂ.ಆರ್. ರುದ್ರೇಶ್ ವಯಸ್ಸು 69 ಪೋಲಿಸ್ ಇಲಾಖೆಯಲ್ಲಿ ಎ.ಎಸ್.ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ, ಹೊಸಕೋಟೆಯ ಕೃಷ್ಣಮೂರ್ತಿ ವಯಸ್ಸು 87 ಇವರು 31 ವರ್ಷಗಳ ಕಾಲ ಅರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಿರಿಯ ಆರೋಗ್ಯ ನಿರ್ದೇಶಕರಾಗಿ ನಿವೃತ್ತಿ ಹೊಂದಿದ್ದಾರೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಚ್ ಹನುಮಂತರಾಯಪ್ಪ ವಯಸ್ಸು 90 ನಿವೃತ್ತ ಗಾಮ ಲೆಕ್ಕಾಧಿಕಾರಿಗಳು, ದೇವನಹಳ್ಳಿ ತಾಲ್ಲೂಕಿನ ರಮೇಶ್ ವಯಸ್ಸು 61 ಕಲಾವಿದರು ಇವರುಗಳಿಗೆ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ನೀಡಿದರು. ಜೊತೆಗೆ ಬ್ಯಾಪ್ಟಿಸ್ಟ್ ಆಸ್ಪತ್ರೆಯವರ ವತಿಯಿಂದ ಇಬ್ಬರು ಅಂಗವಿಕಲರಿಗೆ ಕೃತಕ ಕಾಲುಗಳನ್ನು ನೀಡಲಾಯಿತು

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರ ಮುದ್ದಣ ಎಂ, ಹಾಗೂ ಇಲಾಖೆ ಅಧಿಕಾರಿ ಜಗದೀಶ್ ಎನ್. ಎಂ, ಹಿರಿಯ ನಾಗರಿಕರ ನಿವೃತ್ತ ಸಂಘದ ಕಾರ್ಯದರ್ಶಿ ಪ್ರಭಾಕರ್ ಹಾಗೂ ಜಿಲ್ಲೆಯ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!