ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ (Maharishi Valmiki) ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ರಾಮಾಯಣ ಮಹಾಕಾವ್ಯ ಒಂದು ಭಾವನಾಪ್ರಧಾನ ಕೃತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತೀಯ ಭಾಷೆಗಳಿಗೆ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯ ಉಂಟು ಮಾಡಿದ ಪ್ರೇರಣೆ ಮತ್ತು ಪ್ರಭಾವ ಅನನ್ಯವಾದುದು. ಹೀಗಾಗಿ ವಾಲ್ಮೀಕಿಯನ್ನು ಭಾರತದ ಆದಿ ಕವಿ ಎಂದು ಕರೆಯಲಾಗುತ್ತಿದೆ.
ರಾಮಾಯಣ ಕಾವ್ಯ ಓದು ನಿರಂತರವಾಗಿದೆ.
ಭಾರತ ದೇಶದ ನದಿ, ವನ, ಪರ್ವತಗಳ ವರ್ಣನೆ ಪರಿಸರವನ್ನು ಪರಿಚಯಿಸುತ್ತದೆ. ವಿವಿಧಗಳು ಪಾತ್ರಗಳು ಮತ್ತು ಸನ್ನಿವೇಶಗಳು ಭಾರತದ ಸಾಮಾಜಿಕ, ರಾಜಕೀಯ ವ್ಯವಸ್ಥೆಯನ್ನು ವಿಶ್ಲೇಷಣೆ ಮಾಡುತ್ತವೆ ಎಂದರು.
ಮಹರ್ಷಿ ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಮಹರ್ಷಿ ವಾಲ್ಮೀಕಿಯನ್ನು ರಾಮನಿಗೆ ಸಮಕಾಲೀನರೆಂದು ಪರಿಗಣಿಸಲಾಗಿದೆ. ರಾಮನಿಂದ ಸೀತೆಯು ಬಹಿಷ್ಕೃತಗೊಂಡಾಗ ಸೀತೆಗೆ ಆಶ್ರಯ ನೀಡುವವರು ಮಹರ್ಷಿ ವಾಲ್ಮೀಕಿ ಆಗಿದ್ದಾರೆ. ಶತಶತಮಾನಗಳಿಂದ ಭಾರತೀಯರ ಮನ್ನಣೆಗೆ ಪಾತ್ರವಾಗಿರುವ ವಾಲ್ಮೀಕಿ ರಾಮಾಯಣ ಮಹಾಕಾವ್ಯ ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ವಾಲ್ಮೀಕಿಯ ವಿದ್ವತ್ತಿಗೆ ಜನಮನ್ನಣೆ ದೊರೆತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಆದಿಕವಿ ವಾಲ್ಮೀಕಿಯ ರಾಮಾಯಣವು ಭಾರತ ದೇಶದ ಸಾಮಾಜಿಕ, ರಾಜಕೀಯ, ಭೌಗೋಳಿಕ ಚಿತ್ರಣ, ಆದರ್ಶ, ನೈತಿಕತೆ, ಧರ್ಮಗಳ ಸೂಕ್ಷ್ಮತೆ, ಪರಿಸರ ಪ್ರಜ್ಞೆ ಮುಂತಾದ ಹಲವಾರು ವಿಚಾರಧಾರೆಗಳನ್ನು ಒಳಗೊಂಡಿದೆ. ವಾಲ್ಮೀಕಿಯ ಸೃಜನಶೀಲತೆ ಮತ್ತು ಕಲಾತ್ಮಕತೆಯ ಪ್ರಭಾವದಿಂದಾಗಿ ಭಾರತೀಯ ಭಾಷೆಗಳಲ್ಲಿ ರಾಮಾಯಣ ಕೃತಿಗಳು ರಚನೆಗೊಂಡಿವೆ ಎಂದರು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಜಿಲ್ಲಾ ಅಧ್ಯಕ್ಷ ಮುನಿಪಾಪಣ್ಣ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು.
ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಘಟಕದ ಕಾರ್ಯದರ್ಶಿ ಅಂಜನಮೂರ್ತಿ, ಪ್ರತಿನಿಧಿಗಳಾದ ನಾಗರತ್ನಮ್ಮ, ರಾಧಮಣಿ, ಸಫೀರ್, ಇಸ್ತೂರು ಕೋದಂಡರಾಮ ಭಜನಾ ಮಂಡಲಿಯ ರಂಗಸ್ವಾಮಯ್ಯ, ರಂಗಭೂಮಿ ಕಲಾವಿದ ಸಂಘದ ಜಿಲ್ಲಾ ಕಾರ್ಯದರ್ಶಿ ಪುಟ್ಟಸಿದ್ದಯ್ಯ, ಗೆಜ್ಜಗದಹಳ್ಳಿ ಮುನಿರಾಜು,
ಲಾವಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ನಿವೃತ್ತ ಮುಖ್ಯಶಿಕ್ಷಕ ಜಿ.ಎಸ್.ಚೌಧರಿ, ಶಿಕ್ಷಕರ ಸಂಘಟನೆಯ ಕೆ.ಆರ್.ಜಯರಾಮ್, ಸಹ ಶಿಕ್ಷಕರುಗಳಾದ ಕೋದಂಡರಾಮ್, ಗಣೇಶ್.
ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಕವಿ ಮಹಾದೇವಪ್ಪ, ದುರ್ಗಾಶ್ರೀಕಾಂತ್ ಮುಂತಾದವರು ಭಾಗವಹಿಸಿದ್ದರು