Maddur riot case: B.Y. Vijayendra says the police department has completely failed

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರವು ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ ವಿಷಯದಲ್ಲಿ ತೀರ್ಮಾನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ಟೀಕಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಗಣತಿದಾರ ಶಿಕ್ಷಕವೃಂದಕ್ಕೂ ಸಮಸ್ಯೆ ಆಗುತ್ತಿದೆ. ರಜೆ ದಿನಗಳನ್ನೂ ವಿಸ್ತರಿಸಿದ್ದರಿಂದ ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಸಮಸ್ಯೆ ಆಗಲಿದೆ. ಸರಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಭಾಗದ ಮಕ್ಕಳಿಗೆ ಒಂದೊಂದು ದಿನವೂ ಅಷ್ಟೇ ಮಹತ್ವದ್ದು ಎಂದು ನುಡಿದರು. ಶಾಲೆಗೆ ರಜೆ ಘೋಷಿಸಿ ಶಾಲಾ ಮಕ್ಕಳಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮೊದಲ ಸಭೆ ಕರೆದಿದ್ದು, ಶಾಸಕರಿಗೆ ಸಭೆಯ ಕಾರ್ಯಸೂಚಿಯನ್ನೇ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜಿಬಿಎ ಅಜೆಂಡವನ್ನೂ ಕೊಡದೆ ಗೌಪ್ಯವಾಗಿ ಸಭೆ ಮಾಡುತ್ತಿದ್ದಾರೆ. ಡಿಸೆಂಬರ್‍ನಲ್ಲಿ ಚುನಾವಣೆ ನಡೆಸುವುದಾಗಿ ಹೇಳುತ್ತಾರೆ. ಎಲ್ಲಿದೆ ತಯಾರಿ? ಎಂದು ಪ್ರಶ್ನಿಸಿದರು. ಎಷ್ಟು ಅಧಿಕಾರಿಗಳು ಬೇಕು? ಮೂಲಭೂತ ಸೌಕರ್ಯಗಳು, ಯಾವುದೂ ಇಲ್ಲದೇ ರಾಜಕೀಯ ಚಟಕ್ಕೆ ಘೋಷಣೆ ಮಾಡುತ್ತಾರೆ. ಯಾವುದೇ ಯೋಜನೆ ಇಲ್ಲದೇ ಹೊರಟಿದ್ದಾರೆ ಎಂದರು.

ಗುಂಡಿಗಳ ಮಧ್ಯೆ ರಸ್ತೆ ಹುಡುಕುವ ದಾರುಣ ಪರಿಸ್ಥಿತಿ

ಬೆಂಗಳೂರಿನ ಜನತೆ ಈ ಸರಕಾರಕ್ಕೆ ಛೀ ಥೂ ಎಂದು ಉಗುಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪ್ರಧಾನಮಂತ್ರಿಯವರ ಮನೆ ಮುಂದೆ ಗುಂಡಿ ಇದೆ; ಅಲ್ಲಿ ಗುಂಡಿ ಇದೆ ಎಂದು ಲೆಕ್ಕ ಹಾಕಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಗುಂಡಿಗಳ ಮಧ್ಯೆ ರಸ್ತೆ ಹುಡುಕುವ ದಾರುಣ ಪರಿಸ್ಥಿತಿ ಬಂದಿದೆ ಎಂದು ವಿಜಯೇಂದ್ರ ಅವರು ಗಮನ ಸೆಳೆದರು.

ದೊಡ್ಡ ಮನುಷ್ಯರು ಪ್ರಧಾನಿ, ಲಂಡನ್ ಕುರಿತು ಮಾತನಾಡುತ್ತಾರೆ ಎಂದರಲ್ಲದೇ ಲಂಡನ್ ಬಗ್ಗೆ ಮಾತನಾಡಲು ನೀವು ಬೇಕೇ ಎಂದು ಪ್ರಶ್ನಿಸಿದರು. ಬೆಂಗಳೂರಿನ ಮಹಾಜನತೆ ರಾಜ್ಯ ಸರಕಾರದಿಂದ ಉತ್ತರ ಕೇಳುತ್ತಿದ್ದಾರೆ. ತುರ್ತಾಗಿ ಗುಂಡಿ ಮುಚ್ಚುವ ಕೆಲಸ ಆಗಬೇಕೆಂದು ಜನರು ಅಪೇಕ್ಷೆ ಪಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸರಕಾರದಲ್ಲಿ ಎಲ್ಲವೂ ಗೊಂದಲಮಯವಾಗಿದೆ. ಮೊದಲೇ ರೈತರು ಪರದಾಡುತ್ತಿದ್ದಾರೆ. ತೀವ್ರ ಸಂಕಷ್ಟದಲ್ಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಈ ರೀತಿ ಅತಿವೃಷ್ಟಿ ಆದರೂ ಕೃಷಿ ಸಚಿವರಿಗೆ ಅಲ್ಲಿ ಹೋಗಬೇಕೆಂದು ಅನಿಸುವುದಿಲ್ಲ.

ಕಂದಾಯ ಸಚಿವರಿಗೆ ಹೋಗಬೇಕೆಂದು ಅನಿಸುತ್ತಿಲ್ಲ; ಕಂದಾಯ, ಕೃಷಿ ಸಚಿವರಿಗೆ ಅಲ್ಲಿ ಹೋಗಲು ಸಮಯ ಇಲ್ಲವೆಂದಾದರೆ, ಅವರು ಸಚಿವರಾಗಿ ಯಾಕೆ ಇರಬೇಕು ಎಂದು ಕೇಳಿದರು. ಆ ಭಾಗದ ರೈತರಿಗೆ ಸ್ಪಂದಿಸದೇ ಇದ್ದರೆ ಈ ಸಚಿವರು ರೈತರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ತಿಳಿಸಿದರು.

ರೈತರು ಪರಿಹಾರಕ್ಕೆ ಇನ್ನೆಷ್ಟು ದಿನ ಕಾಯಬೇಕು

ನಾನು, ವಿಪಕ್ಷ ನಾಯಕರು, ಬಿಜೆಪಿ ನಿಯೋಗ ಕಲ್ಯಾಣ ಕರ್ನಾಟಕಕ್ಕೆ ಹೋಗಲಿಲ್ಲವೆಂದಾದರೆ, ಮುಖ್ಯಮಂತ್ರಿಗಳು ಇಲ್ಲೇ ಎ.ಸಿ. ಕೊಠಡಿಯಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್‍ನಲ್ಲಿ ತೀರ್ಮಾನ ಮಾಡುತ್ತಿದ್ದರು. ನಾವು ಬೀದರ್, ಗುಲ್ಬರ್ಗ, ರಾಯಚೂರು, ಯಾದಗಿರಿ ಪ್ರವಾಸ ಮಾಡಿದ್ದೇವೆ. ಅಶೋಕ್ ಅವರು, ಬೆಳಗಾವಿ, ಬಾಗಲಕೋಟೆ ಕಡೆ ಹೋದರು ಎಂದು ಗಮನ ಸೆಳೆದರು.

ವಿಪಕ್ಷದವರು ಎಲ್ಲವನ್ನೂ ಟೀಕಿಸುತ್ತಾರೆ ಎಂದು ಭಾವಿಸುವ ಅಗತ್ಯವಿಲ್ಲ; ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದು ರಾಜ್ಯ ಸರಕಾರದ ಆದ್ಯ ಕರ್ತವ್ಯ. 10 ದಿನಗಳಲ್ಲಿ ಪರಿಹಾರ ಮೊತ್ತ ಕೊಡುವುದಾಗಿ ಸಚಿವ ಕೃಷ್ಣಬೈರೇಗೌಡರು ಹೇಳಿದ್ದಾರೆ. ರೈತರು ಇನ್ನೆಷ್ಟು ದಿನ ಕಾಯಬೇಕು ಎಂದು ಪ್ರಶ್ನಿಸಿದರು.

ಮಂಡ್ಯದಲ್ಲೂ ಮೈ ಶುಗರ್ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದ ಅವರು, ಜಿಬಿಎ ಸಭೆಗೆ ಗೈರಾಗುವ ತೀರ್ಮಾನ ತೆಗೆದುಕೊಂಡಂತೆ ಕಾಣುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಮೊದಲ ಸಭೆ ಅಜೆಂಡ ಗೊತ್ತಿಲ್ಲದೇ ಹೋಗಿ ಮಾಡುವುದಾದರೂ ಏನು ಎಂದು ಮರುಪ್ರಶ್ನೆ ಹಾಕಿದರು.

ಜಿಬಿಎ ಬಗ್ಗೆ ಆಡಳಿತ ಪಕ್ಷದಲ್ಲೂ ವಿರೋಧಗಳಿವೆ. ಎಲ್ಲ ಗೊಂದಲದ ನಡುವೆ ತೇಪೆ ಹಚ್ಚುವ ಕೆಲಸ ಮಾಡಲು ಇವರು ಹೊರಟಿದ್ದಾರೆ ಎಂದರು. ರಿಯಲ್ ಎಸ್ಟೇಟ್ ಮಾಫಿಯ ಜೊತೆ ಸರಕಾರ ಸೇರಿ ಆಡಳಿತ ನಡೆಸುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಆಲ್ ಈಸ್ ನಾಟ್ ವೆಲ್

ಆಡಳಿತ ಪಕ್ಷದ ಸಚಿವರು, ಶಾಸಕರ ಪ್ರತಿಕ್ರಿಯೆಗಳನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷದಲ್ಲಿ ‘ಆಲ್ ಈಸ್ ನಾಟ್ ವೆಲ್’ ಎಂಬುದು ಸ್ಪಷ್ಟವಾಗುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ಪ್ರಾರಂಭ ಆಗಿವೆ. ಬಿಹಾರ ಚುನಾವಣೆ ಬಳಿಕ ಇದು ತಾರ್ಕಿಕ ಅಂತ್ಯಕ್ಕೆ ಹೋಗಲಿದೆ ಎಂದು ಆಡಳಿತ ಪಕ್ಷದವರೇ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!