Doddaballapura TAPMCS elections: Alliance confusion for BJP-JDS..!

ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆ: ಕಮಲ-ದಳಕ್ಕೆ ಮೈತ್ರಿ ಗೊಂದಲ..!

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ(TAPMCS) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವದಿ ಮುಕ್ತಾಯವಾಗಿದೆ. ನವೆಂಬರ್ 2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣ ದಿನಾಂಕ ನಿಗದಿಯಾಗಿದೆ. ಆದರೆ ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ.

ಈ ಹಿನ್ನೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು ‘ಬಿ’ ತರಗತಿಯಿಂದ(ಷೇರುದಾರರು) 6,557 ಜನ ಮತದಾರರು ಇದ್ದಾರೆ. ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳಿಂದ ‘ಎ’ ತರಗತಿಗೆ 20 ಜನ ಮತದಾನ ಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದಾರೆ.

13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ನಲ್ಲಿ ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ,1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ. ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದೆ.

ಸಹಕಾರಿ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ನಡೆಯುವುದಿಲ್ಲ. ಆದರೂ ಸಹ ಮೂರು ರಾಜಕೀಯ ಪಕ್ಷಗಳಿಗು ಟಿಎಪಿಎಂಸಿಎಸ್ ಆಡಳಿತದ ಚುಕ್ಕಾಣಿ ನಮ್ಮ ಪಕ್ಷದವರ ಕೈಯಲ್ಲೇ ಇರಬೇಕು ಎನ್ನುವ ಪ್ರತಿಷ್ಟೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.

ಸಂಘದ ಅಧಿಕಾರವದಿ ಮುಕ್ತಾಯವಾಗುತ್ತಿದಂತೆ ಅರ್ಹ ಹಾಗೂ ಸಮರ್ಥ ಅರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಮೊದಲ ಸುತ್ತಿನ ಪೂರ್ವಭಾವಿ ಸಭೆಗಳನ್ನು ನಡೆಸಿ ಆಕಾಂಕ್ಷಿಗಳ ಪಟ್ಟಿಯನ್ನು ಪಡೆದಿದ್ದಾರೆ.

ಪ್ರಸ್ತುತ ‘ಎ’ ತರಗತಿಯಿಂದ ನಿರ್ದೇಶಕರಾಗಿದ್ದ ಎಂ.ಗೋವಿಂದರಾಜು, ಎಂ.ವೆಂಕಟೇಶ್, ಡಿ.ಸಿದ್ದರಾಮಯ್ಯ ಅವರು ‘ಎ’ತರಗತಿಗೆ ಸ್ಪರ್ಧಿಸಲು ಪ್ರತಿನಿಧಿಗಳಾಗಿ ಆಯ್ಕೆಯಾಗಿ ಬಂದಿದ್ದು ಟಿಎಪಿಎಂಸಿಎಸ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಅರ್ಹತೆ ಪಡೆದಿದ್ದಾರೆ.

ಬಿಜೆಪಿಗೆ ಪ್ರತಿಷ್ಠೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬಿಜೆಪಿ ಶಾಸಕರು ಅಧಿಕಾರದಲ್ಲಿ ಇರುವ ಹಿನ್ನೆಲೆಯಲ್ಲಿ ಟಿಎಪಿಎಂಸಿಎಸ್ನಲ್ಲಿ ಹೆಚ್ಚಿನ ನಿರ್ದೇಶಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವ ಪ್ರತಿಷ್ಠೆಯಾಗಿದೆ.

ಸೋಮವಾರ ಕಾಂಗ್ರೆಸ್ ಪಟ್ಟಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಹೆಚ್ಚಿನ ಸ್ಥಾನಗಳಲ್ಲಿ ಆಯ್ಕೆಯಾಗುವ ಮೂಲಕ ಪಕ್ಷ ಸಂಘಟನೆಗೆ ಈ ಚುನಾವಣೆಯನ್ನು ದಿಕ್ಸೂಚಿಯಾಗಿಸಿಕೊಳ್ಳುವ ತವಕ ಕಾಂಗ್ರೆಸ್ಗಿದ್ದು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿಸಿದ್ದು, ಅಂತಿಮವಾಗಿ ಪರಿಶೀಲಿಸಿ ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್‌ಗೆ ಮೈತ್ರಿ ಗೊಂದಲ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರ ನೇತೃತ್ವದಲ್ಲಿ ಹಲವು ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ. ಆದರೆ ಇತ್ತೀಚೆಗೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಪಂಚಾಯಿತಿಯಿಂದ ಶಾಸಕ ಸ್ಥಾನದವರೆಗೆ ಜೆಡಿಎಸ್- ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಡೆ ಬಿದ್ದಿದೆ ಎನ್ನಲಾಗುತ್ತಿದೆ.

ಜೆಡಿಎಸ್ ಪಕ್ಷದ ಕೆಲ ಮುಖಂಡರು ಬಿಜೆಪಿಯೊಂದಿಗಿನ ಎನ್ಡಿಎ ಮೈತ್ರಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎನ್ನುವವಾದ ಹಾಗೂ ಕೆಲವರು ಕಾಂಗ್ರೆಸ್ ಅಥವಾ ಸ್ವತಂತ್ರವಾಗಿಯೇ ಸ್ಪರ್ಧಿಸಿದರೆ ಆಕಾಂಕ್ಷಿಗಳಿಗೆ ಹೆಚ್ಚಿನ ಸ್ಥಾನ ದೊರೆಯಲಿವೆ, ಪಕ್ಷ ಸಂಘಟನೆಗು ಸಹಕಾರಿಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!