ಮಂಗಳೂರು: ಕ್ಯಾಬ್ ಚಾಲಕನಿಗೆ ಭಯೋತ್ಪಾದಕ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ (Actor Jayakrishnan) ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ.
ಅ.9 ರಂದು ಈ ಮೂವರು ಪಿಕಪ್ ಮೂಲಕ ಮಂಗಳೂರಿನ ಬಿಜೈಗೆ ಕ್ಯಾಬ್ ಬುಕ್ ಮಾಡಿದ್ದರು. ಅಹ್ಮದ್ ಶಫೀಕ್ ಎಂಬವರು ಕರೆ ಮಾಡಿ ವಿಚಾರಿಸಿದ್ದರು. ಈ ವೇಳೆ ಹಿಂದಿ, ಮಲಯಾಳಂ ಭಾಷೆಯಲ್ಲಿ ಮಾತನಾಡಿದ ಆರೋಪಿಗಳು, ನೀನು ಮುಸ್ಲಿಂ ತೀವ್ರವಾದಿ ಟೆರರಿಸ್ಟ್ ಎಂದು ಅವಾಚ್ಯವಾಗಿ ಬೈದಿದ್ದಾರೆ ಎಂದು ಈ ಬಗ್ಗೆ ಕ್ಯಾಬ್ ಚಾಲಕ ಅಹ್ಮದ್ ಶಫೀಕ್, ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀರು ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಬಿಎನ್ಎಸ್ 352, 353(2) ದಾಖಲಾಗಿದೆ. ಕೇರಳದ ಪ್ರಸಿದ್ಧ ನಟನಿಗೆ ಪೊಲೀಸರು ಗ್ರಿಲ್ ಮಾಡಿದ್ದಾರೆ.
ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ನಟನ ವಾಯ್ಸ್ ಸ್ಯಾಂಪಲ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ.