MLA Munirathna Hydrama at DCM DK Shivakumar's program..!

ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮ..!

ಬೆಂಗಳೂರು: ನಗರದ ಉದ್ಯಾನವನಗಳಲ್ಲಿ ನಾಗರೀಕರು ಹಾಗೂ ವಾಯು ವಿಹಾರಿಗಳ ಧ್ವನಿ ಆಲಿಸಲು ವಿನೂತನವಾಗಿ ರೂಪಿಸಿರುವ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರು ಭಾನುವಾರ ಬೆಳಗ್ಗೆ ಜೆಪಿ ಪಾರ್ಕ್ ಉದ್ಯಾನದಲ್ಲಿ ಜನಸಾಮಾನ್ಯರ ಜತೆ ಹೆಜ್ಜೆ ಹಾಕಿದರು.

ಅವರ ಅಹವಾಲು ಆಲಿಸಿದರು, ಸಲಹೆಗಳನ್ನು ಪಡೆದರು. ಸಂವಾದ ನಡೆಸಿದರು, ಸಮಸ್ಯೆಗಳ ಪರಿಹಾರದ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಶಾಸಕ ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲವೆಂದು ಹೈಡ್ರಾಮ ಸೃಷ್ಡಿಸಿದ ಕಾರಣ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು.

ಜನರ ಜೊತೆ ಕುಳಿತ್ತಿದ್ದ ಮುನಿರತ್ನ (Munirathna) ಅವರನ್ನು ಶಾಸಕ ಬನ್ನಿ ಎಂದರು, ಈ ವೇಳೆ ಮುನಿರತ್ನ ಗಮನಿಸದೆ ಇದ್ದಾಗ ಕರಿ ಟೋಪಿ ಶಾಸಕರೇ ಬನ್ನಿ ಮೇಲೆ, ಇದೇನು ಹೊಸದಾಗಿ ಕರಿ ಟೋಪಿ ಎಂದು ಡಿಕೆ ಕಿಚಾಯಿಸಿದರು.

ಮುನಿರತ್ನ ಧನ್ಯವಾದ

ಡಿಕೆ ಶಿವಕುಮಾರ್ ಅವರ ಕರೆಯ ಹಿನ್ನೆಲೆಯಲ್ಲಿ ವೇದಿಕೆಗೆ ಬಂದ ಮುನಿರತ್ನ ಮೈಕ್ ಕೊಡಿ ಕೊಡಿ ಕೇಳಿದ್ದಾರೆ. ಆದರೆ ಇದಕ್ಕೆ ಈಗ ಆಗಲ್ಲ ಆಮೇಲೆ ಕೊಡ್ತೀನಿ ಹೋಗಿ ಕೂತುಕೊಳ್ಳಿ ಎಂದು ಹೇಳಿದರು‌

ಪಟ್ಟು ಬಿಡದ ಮುನಿರತ್ನ ಡಿಕೆ ಶಿವಕುಮಾರ್ ಕೈಯಿಂದ ಮೈಕ್ ಪಡೆದು ವೇದಿಕೆಗೆ ಆಹ್ವಾನಿಸಿದಕ್ಕೆ ಧನ್ಯವಾದ ಅರ್ಪಿಸಿದರು‌.

ಮುನಿರತ್ನ ಆಕ್ರೋಶ

ಬಳಿಕ ಅಧಿಕಾರಿಗಳು ಸ್ವಾಗತ ಕೋರುವ ವೇಳೆ ರೊಚ್ಚಿಗೆದ್ದ ಮುನಿರತ್ನ ಅವರು ಶಾಸಕರಿಗೆ, ಸಂಸದರಿಗೆ ಆಹ್ವಾನ ನೀಡಿಲ್ಲ. ಇದು ಕಾಂಗ್ರೆಸ್ ಕಾರ್ಯಕ್ರಮವಲ್ಲ, ಸರ್ಕಾರಿ ಕಾರ್ಯಕ್ರಮ ಎಂದು ಜೋರಾಗಿ ಹೇಳಿದರು.

ಈ ವೇಳೆ ಮುನಿರತ್ನ ಹಾಗೂ ಕಾರ್ಯಕರ್ತರ ನಡುವೆ ವೇದಿಕೆ ಮೇಲೆಯೇ ತಳ್ಳಾಟ ನೂಕಾಟ ನಡೆದಿದ್ದು ಮೈಕ್ ಕಿತ್ತು ಕಳಿಹಿಸಿ ಅವನನ್ನು ಎಂದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೂಡಲೇ ಮೈಕ್ ಆಫ್ ಮಾಡಿ ಮುನಿರತ್ನ ಕೈಯಿಂದ ಮೈಕ್ ಕಿತ್ತುಕೊಳ್ಳಲು ಪೊಲೀಸರ ಮುಂದಾಗಿದ್ದಾರೆ.

ಆದರೂ ಮೈಕ್ ಅನ್ನು ಕೊಡಲು ಹಿಂದೇಟು ಹಾಕಿದ್ದಾರೆ. ಕೊನೆಯಲ್ಲಿ ಹೇಗೋ ಹರಸಾಹಸ ಪಟ್ಟು ಮೈಕ್ ಅನ್ನು ಕಿತ್ತುಕೊಂಡು ವೇದಿಕೆ ಮೇಲಿಂದಲೇ ಎತ್ತಿಕೊಂಡು ಹೋಗಿ ಪಾರ್ಕ್ ನ ಹೊರಗಡೆ ಬಿಟ್ಟಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರೇಪಿಸ್ಟ್ ಮುನಿ ಎಂದು ಕೂಗಿದರು.

ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಮುನಿರತ್ನ ಜೆಪಿ ಪಾರ್ಕ್ ಗೇಟ್ ಬಳಿ ಧರಣಿ ಕುಳಿತರು‌. ಅಲ್ಲದೇ ನನ್ನ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿದ್ದಾರೆ. ಆರ್ ಎಸ್ ಎಸ್ ವೇಷಕ್ಕೆ ಗೌರವ ಕೊಟ್ಟಿಲ್ಲ. ಶಾಸಕನಿಗೆ ಹೇಗೆ ಮರ್ಯಾದೆ ಕೊಡಬೇಕು ಡಿಕೆ ಶಿವಕುಮಾರ್ಗೆ ಗೊತ್ತಿಲ್ವಾ?, ಒಂದು ಹೆಣ್ಣಿಗಾಗಿ ನನ್ನ ಕ್ಷೇತ್ರದಲ್ಲಿ ಹೈಡ್ರಾಮ ಸೃಷ್ಟಿಸುತ್ತಿದ್ದಾರೆ ಎಂದು ಮುನಿರತ್ನ ಆಕ್ರೋಶ ಹೊರಹಾಕಿದ್ದಾರೆ.

ಸೂಕ್ತ ಸಮಯದಲ್ಲಿ ಉತ್ತರ ನೀಡಲು ಜನರಿಗೆ ಕರೆ: ಡಿಸಿಎಂ ಕರೆ

“ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಅವರು ಮಾತನಾಡಿದರು.

ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

“ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮವನ್ನು ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೂ ತಲೆಕೆಡಿಸಿಕೊಳ್ಳಬೇಡಿ. ಇಂತಹವರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ನಿಮ್ಮ ಮನಸ್ಸಿಗೆ ಬಹಳ ನೋವಾಗುತ್ತಿದೆ ಎಂದು ನನಗೆ ಚನ್ನಾಗಿ ಗೊತ್ತಿದೆ. ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಉತ್ತರ ನೀಡಿ” ಎಂದು ಹೇಳಿದರು.

“ಇಂತಹ ಪ್ರತಿನಿಧಿಯನ್ನು (ಮುನಿರತ್ನಂ ನಾಯ್ಡು) ಇಟ್ಟುಕೊಳ್ಳುವುದೋ, ಬೇಡವೋ ಎಂಬುದನ್ನು ಜನ ತೀರ್ಮಾನ ಮಾಡಬೇಕು. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನಪ್ರತಿನಿಧಿಗಳಿಗೆ ಏನು ಗೌರವ ನೀಡಬೇಕು ಎನ್ನುವ ಅರಿವು ನನಗಿದೆ. ರಾಜಕಾರಣದಲ್ಲಿ ಸೋಲು, ಗೆಲುವು ಇದ್ದೇ ಇರುತ್ತದೆ ಯಾವುದೂ ಶಾಶ್ವತವಲ್ಲ” ಎಂದು ತಿಳಿಸಿದರು.

ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ಮಾಜಿ ಕಾರ್ಪೊರೇಟರ್ ನಂಜುಂಡಪ್ಪ, ಅಪರ ಆಯುಕ್ತರಾದ ಲತಾ, ಜಂಟಿ ಆಯುಕ್ತರಾದ ಮೊಮಿನ್‌, ಬಿ‌.ಎಸ್.ಡಬ್ಲ್ಯೂ.ಎಂ.ಎಲ್ ನ ಸಿಇಒ ಕರೀಗೌಡ ಮತ್ತಿತರರು ಉಪಸ್ಥಿತರಿದ್ದರು.DCM

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!