BPL ಕಾರ್ಡ್ ರದ್ದು ಪಡಿಸಲು ಬಡವರಿಗೆ ನೋಟೀಸ್: ದೊಡ್ಡಬಳ್ಳಾಪುರದಲ್ಲಿ ಕರವೇ ಪ್ರತಿಭಟನೆ.. ಆಕ್ರೋಶ

ದೊಡ್ಡಬಳ್ಳಾಪುರ: ಬಡವರಿಗೆ ಅತ್ಯಗತ್ಯವಾಗಿರುವ ಬಿಪಿಎಲ್ (BPL) ಕಾರ್ಡ್ ಅನ್ನು ರದ್ದುಗೊಳಿಸುವ ಹುನ್ನಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ) ಬಣದಿಂದ ಇಂದು ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ನಗರ ಅಧ್ಯಕ್ಷ ಶ್ರೀನಗರ ಬಶೀರ್, ರಾಜ್ಯ ಸರ್ಕಾರ ಮತ್ತು ಆಹಾರ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸುಮಾರು 2873 ಅಂತ್ಯೋದಯ, 4470 ಎಪಿಲ್ ಕಾರ್ಡ್‌ಗಳು, 66120 ಬಿಪಿಎಲ್ ಕಾರ್ಡ್ ಇವೆ. ಆದರೆ ಏಕಾಏಕಿ ಅವೈಜ್ಞಾನಿಕವಾಗಿ ಮಾನದಂಡ ರೂಪಿಸಿ 5700 ಮಂದಿಗೆ ನೋಟಿಸ್ ನೀಡುವ ಮೂಲಕ ಪಡಿತರ ಚೀಟಿಯನ್ನು ರದ್ದು ಮಾಡುವ ಹುನ್ನಾರಕ್ಕೆ ಇಲಾಖೆ ಮುಂದಾಗಿದೆ.

ಪಡಿತರ ಚೀಟಿಗಳನ್ನು ಅನರ್ಹಗೊಳಿಸಲು ಗ್ರಾಹಕರಿಗೆ ನೋಟಿಸ್ ನೀಡುವ ಬರದಲ್ಲಿ ಕೆಲವು ಮಾನದಂಡಗಳನ್ನು ತಯಾರಿಮಾಡಿದ್ದು, ಅವು ಬಡವರ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ.

ಬಡವರು ಕೆರಳಿ ರಸ್ತೆಗಿಳಿಯುವ ಮುನ್ನ ಎಚ್ಚೆತ್ತುಕೊಳ್ಳಿ

ಇಲಾಖೆ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ಎಪಿಎಲ್ ಮಾಡುವ ಉದ್ದೇಶ ಹೊಂದಿದ್ದು, ವಾರ್ಷಿಕ ಆದಾಯ ರೂ-1,20,000/-ಗಳು, 125ಸಿಸಿ ಬೈಕ್‌ಗಳು, ಸಾವಿರ ಚದರ ಅಡಿ ಮನೆ ಇರುವ ಬಡವರಿಗೆ ನೋಟೀಸ್ ನೀಡುತ್ತಿರುವುದು ಖಂಡನೀಯ.

ಕೇವಲ 500 ರೂಗಳಿಗೆ ದಿನ ಕೂಲಿ ಮಾಡುವ ಬಡವನಿಗೆ ಒಟ್ಟುಗೂಡಿಸಿದರೆ ವಾರ್ಷಿಕ 1 ಲಕ್ಷ 80 ಸಾವಿರ ರೂ ದೊರೆಯುತ್ತದೆ. ಆದರೆ ಇಲಾಖೆ ವಾರ್ಷಿಕ 1 ಲಕ್ಷ 20 ಸಾವಿರಕ್ಕೆ ಮಾತ್ರ ಬಿಪಿಎಲ್ ಕಾರ್ಡ್ ಎಂದು ರದ್ದು ಮಾಡಲು ಮುಂದಾಗಿದೆ.

ಸಣ್ಣಪುಟ್ಟ ಅಂಗಡಿಯವರು ಸರ್ಕಾರದ ನಿಯಮಾನುಸಾರ ಆದಾಯ ತೆರಿಗೆಯಲ್ಲಿ ನೊಂದಣಿ ಮಾಡಿಸಿ, ವಹಿವಾಟು ವಿವರ ತಿಳಿಸಿದ್ದಾರೆ. ಆದರೆ ಇದೇ ಅಪರಾಧ ಎಂಬಂತೆ 1 ಲಕ್ಷ 50 ಸಾವಿರ ವಾರ್ಷಿಕ ವರಮಾನ ಇದ್ದವರಿಗೆ ನೋಟಿಸ್ ನೀಡಲಾಗಿದೆ. ಇದು ಅಧಿಕಾರಿಗಳಿಗೆ ಬಡವರ ಮೇಲಿರುವ ತಾತ್ಸಾರ ಮನೋಭಾವನೆ ತೋರಿಸುತ್ತದೆ.

ಸರ್ಕಾರ, ಇಲಾಖೆಗೆ ಈ ನಿಲುವಿನಿಂದ ಬಡವರು ಬೀದಿಗೆ ಬೀಳುತ್ತಾರೆ ಎಂಬ ಪ್ರಜ್ಞೆ ಇಲ್ಲವಾಗಿದೆಯೇ..? ಬಡವರು ಕೆರಳಿ ರಸ್ತೆಗಿಳಿಯುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ.

ಕೂಡಲೇ ಆಹಾರ ನಾಗರೀಕ ಸರಬರಾಜು ಇಲಾಖೆ ಸಚಿವರು, ಮುಖ್ಯಮಂತ್ರಿಗಳು ಮತ್ತು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಚರ್ಚಿಸಿ, ನೋಟೀಸ್ ನೀಡಿರುವುದನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್ಎಲ್ಎನ್ ವೇಣು, ಉಪಾಧ್ಯಕ್ಷರು ಜೋಗಳ್ಳಿ ಅಮ್ಮು, ಕಾರ್ಯದರ್ಶಿ ಮುಕ್ಕೇನಳ್ಳಿ ರವಿ, ನಗರ ಅಧ್ಯಕ್ಷ ಶ್ರೀನಗರ ಬಶೀರ್, ಉಪಾಧ್ಯಕ್ಷ ಮಂಜಣ್ಣ, ಕಾರ್ಯದರ್ಶಿ ಸಿರಾಜ್, ರಾಮ ಮಡಿವಾಳ.

ಬೆಂಗಳೂರು ನಗರ ವಿದ್ಯಾರ್ಥಿ ಘಟಕ ಹೇಮಂತ್, ಜೋಗಳ್ಳಿ ಶಾಖೆ ಮುನಿ ಕೃಷ್ಣಪ್ಪ, ಕೋಡಿಹಳ್ಳಿ ಶಾಖೆ ಅಧ್ಯಕ್ಷ ರವಿ, ಉಪಾಧ್ಯಕ್ಷ ಮುನಿಂದ್ರ, ಕಾರ್ಯದರ್ಶಿ ಶಶಿಕುಮಾರ್, ಖಜಾಂಚಿ ಮನು, ಸೂರಿ, ದಯಾನಂದ್, ನೂರಲ್, ವಾಸಿಂ, ಹರಿಕ್ ಪಾಶ, ಹಮಾಮ್ ಮಂಜುನಾಥ್ ಮತ್ತಿತರರಿದ್ದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]