D.K. Shivakumar should not become a villain in Bengaluru: Opposition Leader R. Ashoka

ಡಿ.ಕೆ. ಶಿವಕುಮಾರ್‌ ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ: ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಪಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D.K. Shivakumar) ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆದರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ಬಂದಿದೆ ಎಂದು ಹೇಳಿದ್ದಾರೆ. ನವೆಂಬರ್‌ ಕ್ರಾಂತಿಯ ಸಮಯದಲ್ಲೇ ಈ ರೀತಿ ಮಾತಾಡುತ್ತಿದ್ದಾರೆ. ಅವರಿಗೆ ಯಾರು ಫೋನ್‌ ಮಾಡಿದ್ದರು ಎಂಬುದನ್ನು ವಿವರವಾಗಿ ತಿಳಿಸಲಿ.

ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಉದ್ದೇಶದಿಂದ ಅವರು ಪಕ್ಷದ ಹಿರಿಯರಿಗೆ ಧಮಕಿ ಹಾಗೂ ಸವಾಲು ಹಾಕುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಸಮಯದಲ್ಲೇ ಈ ಹೇಳಿಕೆ ನೀಡಿದ್ದಾರೆ. ಅವರು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ. ಅವರನ್ನು ಸಿಎಂ ಮಾಡಲಿ ಎಂದೇ ಈ ರೀತಿಯ ಸಂದೇಶ ನೀಡಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್‌ಗೆ ಹಾಸನಾಂಬೆ ಹೂ

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹಾಸನಾಂಬೆ ಎರಡು ಹೂ ನೀಡಿದ್ದಾಳೆ. ಆ ಹೂವನ್ನು ಪಡೆದು ಜೇಬಿನಲ್ಲಿಟ್ಟುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ದೇವಿ ವರ ಕೊಟ್ಟಿಲ್ಲ. ಈ ಹೂವಿನ ಮಹಾತ್ಮೆ ನವೆಂಬರ್‌ ಕ್ರಾಂತಿಯಲ್ಲಿ ತಿಳಿದುಬರಲಿದೆ. ಇವರಿಬ್ಬರೂ ಹಾಸನಾಂಬೆಗೆ ಪರೀಕ್ಷೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಜನರಿಗೆ 30 ಸಾವಿರ ಉದ್ಯೋಗ ನೀಡುವ ಉದ್ಯಮ ಆಂಧ್ರಪ್ರದೇಶದ ಪಾಲಾಗಿದೆ. ಇವರು ಕೇವಲ ಆರ್‌ಎಸ್‌ಎಸ್‌ ಬಗ್ಗೆ ಮಾತಾಡಿಕೊಂಡು ಕಾಲಹರಣ ಮಾಡಿದ್ದಾರೆ. ಆ ಕಂಪನಿ ಬೆಂಗಳೂರಿಗೆ ಬಂದಿದ್ದರೆ ಖಜಾನೆಗೆ ಆದಾಯ ಬರುತ್ತಿತ್ತು.

ಕಂಪನಿಗಳೆಲ್ಲ ಬಿಟ್ಟುಹೋದರೆ ಕಾಂಗ್ರೆಸ್‌ ಪಕ್ಷ ಏಕೆ ಅಧಿಕಾರದಲ್ಲಿ ಇರಬೇಕು? ನಗರದ ಕಸ, ರಸ್ತೆ ಗುಂಡಿ ನೋಡಿದರೆ ಯಾವ ಕಂಪನಿಗಳೂ ಇಲ್ಲಿ ಇರಲು ಇಷ್ಟಪಡುವುದಿಲ್ಲ. ಸಚಿವ ಪ್ರಿಯಾಂಕ್‌ ಖರ್ಗೆಗೆ ಸಿಎಂ ಸಿದ್ದರಾಮಯ್ಯ ಹೇಳಿ ಪತ್ರ ಬರೆಸಿದ್ದಾರೆ ಎಂದರು.

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಲ್ಲಿ ಭಾಗವಹಿಸಬಾರದು ಎಂದರೆ, ನಾನು ಕೂಡ ಸರ್ಕಾರ ನೌಕರನೇ ಆಗಿದ್ದೇನೆ ಎನ್ನಬಹುದು. ನನ್ನಂತಹ ಅನೇಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸರ್ಕಾರಕ್ಕೆ ಏನೂ ಮಾಡಲು ಸಾಧ್ಯವಿಲ್ಲ.

ಕನ್ಹೇರಿ ಸ್ವಾಮೀಜಿ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ತಪ್ಪು. ಇನ್ನು ಎಲ್ಲ ಸ್ವಾಮೀಜಿಗಳ ವಿರುದ್ಧವೂ ಇದೇ ರೀತಿ ಕ್ರಮ ಕೈಗೊಳ್ಳುತ್ತಾರೆ. ಪಾಕಿಸ್ತಾನದಿಂದಲೂ ಬಂದವರು ಇಲ್ಲಿ ಕಾರ್ಯಕ್ರಮ ಮಾಡಬಹುದು. ಹಿಂದೂಗಳನ್ನು ಕಂಡರೆ ಇವರಿಗೆ ಆಗಲ್ಲ ಎಂದರು.

ಜಾತಿ ಸಮೀಕ್ಷೆಯಲ್ಲಿ ಜನರ ಎಲ್ಲ ಮಾಹಿತಿ ಪಡೆಯಲಾಗುತ್ತಿದೆ. ಒಂದು ವೇಳೆ ಜನರ ಬ್ಯಾಂಕ್‌ ಖಾತೆಯಿಂದ ಹಣ ಹೋದರೆ ಅದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ವೈಯಕ್ತಿಕ ಮಾಹಿತಿಗಳನ್ನು ಯಾರೂ ನೀಡಬಾರದು.

ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸುತ್ತಿದ್ದಾರೆ. 15 ದಿನಕ್ಕೆ ಸಮೀಕ್ಷೆ ಆಗಲ್ಲ ಎಂಬುದು ಸರ್ಕಾರಕ್ಕೆ ತಿಳಿದಿರಬೇಕಿತ್ತು. ಇದರಿಂದ ಶಾಲಾ ಮಕ್ಕಳ ವ್ಯಾಸಂಗ ಹಾಳಾಗಿದೆ ಎಂದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!