Eco-friendly Diwali - Awareness rally by MSV Public School

ದೊಡ್ಡಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ – MSV ಪಬ್ಲಿಕ್ ಶಾಲೆಯಿಂದ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ಬೆಳಕಿನ ಹಬ್ಬವಾದ ದೀಪಾವಳಿಯನ್ನು ಪರಿಸರಸ್ನೇಹಿಯಾಗಿ (Eco-friendly Deepavali) ಆಚರಿಸುವಂತೆ ಕರೆ ನೀಡಿ, ತಾಲೂಕಿನ ಪ್ರತಿಷ್ಠಿತ ಎಂ.ಎಸ್.ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ “ಪರಿಸರ ಸ್ನೇಹಿ ದೀಪಾವಳಿ – ಜಾಗೃತಿ ಜಾಥಾ” ನಡೆಸಿದರು.

ಶಾಲೆಯ ಅಧ್ಯಕ್ಷ ಸುಬ್ರಮಣ್ಯ ಜಾಗೃತಿ ಜಾಥಾಗೆ ಚಾಲನೆ ನೀಡಿದ ಬಳಿಕ ಮಾತನಾಡಿ, “ದೀಪಾವಳಿ ಬೆಳಕಿನ ಹಬ್ಬ. ಕತ್ತಲೆಯ ಮೇಲೆ ಬೆಳಕಿನ ವಿಜಯ, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು ಸಂಕೇತಿಸುತ್ತದೆ.

ಇದು ಹಿಂದೂ, ಜೈನ್, ಸಿಖ್ ಮತ್ತು ಬೌದ್ಧ ಧರ್ಮಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ. ಆದರೂ ಪ್ರತಿಯೊಂದು ಧರ್ಮದಲ್ಲೂ ವಿಭಿನ್ನ ಕಥೆಗಳನ್ನು ಒಳಗೊಂಡಿದೆ. ಈ ಹಬ್ಬದಂದು ಮನೆಗಳನ್ನು ದೀಪಗಳು ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಹೊಸ ಬಟ್ಟೆಗಳನ್ನು ಧರಿಸಲಾಗುತ್ತದೆ ಮತ್ತು ಸಿಹಿ ತಿಂಡಿಗಳನ್ನು ಹಂಚಿಕೊಳ್ಳಲಾಗುತ್ತದೆ.

“ದೀಪಾವಳಿ” ಎಂಬ ಸಂಸ್ಕೃತ ಪದವು ದೀಪ ಮತ್ತು ಅವಳಿ ಎಂಬ ಪದಗಳಿಂದ ಬಂದಿದೆ. ಇದರರ್ಥ “ದೀಪಗಳ ಸಾಲು”. ಇದು ವಿಕ್ರಮಶಕದ ವರ್ಷದ ಕೊನೆಯಲ್ಲಿ ಆಚರಿಸಲಾಗುವ ಕಾರಣ, ಉತ್ತರ ಭಾರತದಲ್ಲಿ ಇದನ್ನು ಹೊಸ ವರ್ಷದ ಹಬ್ಬವಾಗಿಯೂ ಆಚರಿಸುತ್ತಾರೆ” ಎಂದು ತಿಳಿಸಿದರು.

ಪ್ರಾಂಶುಪಾಲರಾದ ರೆಮ್ಯ ಬಿ ವಿ ಮಾತನಾಡಿ, “ದೀಪಾವಳಿ ಹಬ್ಬದ ಪ್ರಯುಕ್ತ ಜನರು ದೀಪಗಳನ್ನು ಹಚ್ಚಿ ಆಚರಿಸಬೇಕು. ಪಟಾಕಿಗಳನ್ನು ಹಚ್ಚಬಾರದು ಎಂಬ ಸಂದೇಶವನ್ನು ಸಾರುವ ಸಲುವಾಗಿ ನಮ್ಮ ಶಾಲೆಯ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಜಾಥಾವನ್ನು ಹಮ್ಮಿಕೊಂಡಿದ್ದು, ಜನತೆ ಇದಕ್ಕೆ ಸ್ಪಂದಿಸಿ ಪರಿಸರ ಸ್ನೇಹಿ ದೀಪಾವಳಿಯ ಆಚರಣೆ ಮಾಡಬೇಕೆಂದು” ತಿಳಿಸಿದರು.

ಎಂ ಎಸ್‌ವಿ ಪಬ್ಲಿಕ್ ಶಾಲೆಯಿಂದ ಆರಂಭವಾದ ಜಾಗೃತಿ ಜಾಥಾ, ಮಾರ್ಕೆಟ್ ಸ್ಕೂಲ್ ಮಾರ್ಗದಲ್ಲಿ ತಾಲ್ಲೂಕು ಕಛೇರಿಯವರೆಗೂ ಸಾಗಿ, ಮಕ್ಕಳು ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದರು.

ಪಟಾಕಿ ಹಚ್ಚುವುದರಿಂದ ಆಗುವ ಅನಾಹುತಗಳ ಬಗ್ಗೆ ವಿವರಿಸಿದರು. ಬಹುಮುಖ್ಯವಾಗಿ ಪಶುಪಕ್ಷಿ ಸಂಕುಲಕ್ಕೆ ಮಾರಕವಾದ ಪಟಾಕಿಗಳನ್ನು ತ್ಯಜಿಸಿ, ಹಣತೆಯ ಬೆಳಕಿನಿಂದ ನಮ್ಮ ಮನೆ ಮನಗಳನ್ನು ಬೆಳಗೋಣ ಎಂಬ ಸಂದೇಶವನ್ನು ನೀಡಿದರು.

ತಾಲೂಕು ಕಚೇರಿ ಬಳಿ ಶಿಕ್ಷಕರು ಮಕ್ಕಳಿಗೆ ಪ್ರತಿಜ್ಞಾ ವಚನ ಬೋಧಿಸಿದರು.

ಈ ವೇಳೆ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿಯ ಆಚರಣೆಯ ಮಹತ್ವದ ಕುರಿತಾದ ಕರಪತ್ರಗಳನ್ನು ವಿತರಿಸಿಲಾಯಿತು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!