Welcome to Dipavali, the festival of lights

ದೀಪಗಳ ಹಬ್ಬ ದೀಪಾವಳಿಗೆ ಸ್ವಾಗತ: ಶುರುವಾದ ಪಟಾಕಿ ವ್ಯಾಪಾರ

ದೊಡ್ಡಬಳ್ಳಾಪು: ತಾಲೂಕಿನಲ್ಲಿ ದೀಪಾವಳಿ (Dipavali) ಹಬ್ಬದ ಸಾಲಿನ ನರಕ ಚತುರ್ದಶಿ ಆಚರಿಸಲು ಸಿದ್ದತೆಗಳು ನಡೆಯುತ್ತಿವೆ. ಜನತೆ ದೀಪಾವಳಿಗಾಗಿ ಮನೆ, ವಾಣಿಜ್ಯ ಮಳಿಗೆಗಳನ್ನು ಶೂಚಿಗೊಳಿಸಿ ಹಬ್ಬ ಆಚರಣೆಗ ಸಿದ್ದರಾಗುತ್ತಿದ್ದಾರೆ.

ಈ ನಡುವೆ ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಪಟಾಕಿಗಳ ಮಾರಾಟಕ್ಕಿದ್ದ ಆತಂಕ ತುಸು ದೂರವಾಗಿದ್ದು, ಪಟಾಕಿ ವ್ಯಾಪಾರಿಗಳು ಮಾರಾಟದ ನಿರೀಕ್ಷೆಯಲ್ಲಿದ್ದಾರೆ.

ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಪಟಾಕಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇನ್ನು ದೀಪಾವಳಿಗಾಗಿ ಹಚ್ಚುವ ಪಟಾಕಿಗಳ ವ್ಯಾಪಾರಕ್ಕೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಎಂದಿನಂತೆ ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬವಾಗಿತ್ತು. ಪ್ರತಿವರ್ಷ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪಟಾಕಿಗಳ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿತ್ತು.

ಕಳೆದ ಎರಡು ವರ್ಷಗಳಿಂದ ಕೆಆರ್ಎನ್ ಲೋಕದ ಬಳಿ ಖಾಸಗಿ ಜಮೀನಿನಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ನಗರದ ಕೆಆರ್ಎನ್ ಲೋಕದ ರಸ್ತೆಯ ಕೆಸಿಪಿ ವೃತ್ತದ ಬಳಿ ಪರವಾನಗಿ ಪಡೆದ 12 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ಆರಂಭಿಸಿದ್ದಾರೆ.

ಮಾರ್ಗ ಸೂಚಿ ಅನ್ವಯ ಮಾರಾಟ

ಸುಪ್ರೀಂ ಕೋರ್ಟ್ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿಗಳನ್ನು ಅನುಸರಿಸಿ ತಯಾರಿಸಲಾಗಿರುವ ಕಂಪನಿಗಳಿಂದಲೇ ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಮಾರಾಟದ ಸ್ಥಳದಲ್ಲಿ ಬೆಂಕಿ ಆರಿಸುವ ಸಾಧನಗಳು, ನೀರಿನ ಡ್ರಮ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಆದ್ದರಿಂದ ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸಬಹುದು. ಆದರೆ ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆಯುವುದು ವಿಳಂಬವಾಗುತ್ತಿದೆ.

ಅತ್ತಿಬೆಲೆ ದುರಂತದ ಹಿನ್ನಲೆಯಲ್ಲಿ ಹೆಚ್ಚಿನ ಕಟ್ಟುಪಾಡುಗಳು ವಿಧಿಸಲಾಗಿದ್ದು, ಜಾಗ ಗುರುತಿಸುವುದು ಹಾಗೂ ಪರವಾನಗಿ ನೀಡುವುದು ವಿಳಂಬವಾಗಿದೆ. ಇದರಿಂದ ಅಂಗಡಿಗಳಿಗೆ ವ್ಯವಸ್ಥೆ ಮಾಡಿಕೊಳ್ಳಲು ತ್ರಾಸವಾಗಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ ಮುಂಚಿತವಾಗಿ ಹೇಳಿದರೆ ಅನುಕೂಲವಾಗಲಿದೆ.

ಭಾನುವಾರ ಸಂಜೆಯಿಂದ ವ್ಯಾಪಾರ ಬಿರುಸು

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪಟಾಕಿಗಳ ಸರಬರಾಜು ಕಡಿಮೆಯಿದ್ದು, ಬೆಲೆಗಳು ಹೆಚ್ಚಾಗಿವೆ. ವ್ಯಾಪಾರ ಭಾನುವಾರ ಸಂಜೆಯಿಂದ ಆರಂಭಗೊಳ್ಳುತ್ತಿದ್ದು, ನಂತರ ಬಿರುಸುಗೊಳ್ಳಲಿದೆ ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.

ಬೆಲೆ ಎರಿಕೆ ನಡುವೆ ದೀಪಾವಳಿಗೆ ಸ್ವಾಗತ

ದೀಪಾವಳಿ ಹಿನ್ನಲೆಯಲ್ಲಿ ಬಾಳೆಕಂದು ಮಾವಿನಸೊಪ್ಪು, ತರಕಾರಿಗಳ ಬೆಲೆ ಗಗನಕ್ಕೇರಿವೆ. ಆದರೆ ಶಾಮಂತಿಗೆ ಮೊದಲಾಗಿ ಬಿಡಿ ಹೂಗಳ ಬೆಲೆ ಎಂದಿನಂತಿವೆ. ದೀಪಾವಳಿಯಲ್ಲಿ ಮನೆ ಮುಂದೆ ಹಚ್ಚಿಡುವ ಹಣತೆಗಳ ಮಾರಾಟ ಭರದಿಂದ ಸಾಗಿದೆ.

ಮಾರುಕಟ್ಟೆ ಪ್ರದೇಶದಲ್ಲಿ ದೀಪಾವಳಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಂಡೊಯ್ಯುತ್ತಿರುವ ಸಾರ್ವಜನಿಕರು ಹಬ್ಬ ಆಚರಿಸಲು ಸಿದ್ದವಾಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಹಿನ್ನಡೆಯನ್ನುಂಟು ಮಾಡುತ್ತಿದೆ.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!