ದೀಪಗಳ ಹಬ್ಬ ದೀಪಾವಳಿಗೆ ಸ್ವಾಗತ: ಶುರುವಾದ ಪಟಾಕಿ ವ್ಯಾಪಾರ

Welcome to Dipavali, the festival of lights

ದೊಡ್ಡಬಳ್ಳಾಪು: ತಾಲೂಕಿನಲ್ಲಿ ದೀಪಾವಳಿ (Dipavali) ಹಬ್ಬದ ಸಾಲಿನ ನರಕ ಚತುರ್ದಶಿ ಆಚರಿಸಲು ಸಿದ್ದತೆಗಳು ನಡೆಯುತ್ತಿವೆ. ಜನತೆ ದೀಪಾವಳಿಗಾಗಿ ಮನೆ, ವಾಣಿಜ್ಯ ಮಳಿಗೆಗಳನ್ನು ಶೂಚಿಗೊಳಿಸಿ ಹಬ್ಬ ಆಚರಣೆಗ ಸಿದ್ದರಾಗುತ್ತಿದ್ದಾರೆ.

ಈ ನಡುವೆ ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಪಟಾಕಿಗಳ ಮಾರಾಟಕ್ಕಿದ್ದ ಆತಂಕ ತುಸು ದೂರವಾಗಿದ್ದು, ಪಟಾಕಿ ವ್ಯಾಪಾರಿಗಳು ಮಾರಾಟದ ನಿರೀಕ್ಷೆಯಲ್ಲಿದ್ದಾರೆ.

ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಪಟಾಕಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇನ್ನು ದೀಪಾವಳಿಗಾಗಿ ಹಚ್ಚುವ ಪಟಾಕಿಗಳ ವ್ಯಾಪಾರಕ್ಕೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಎಂದಿನಂತೆ ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬವಾಗಿತ್ತು. ಪ್ರತಿವರ್ಷ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪಟಾಕಿಗಳ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿತ್ತು.

ಕಳೆದ ಎರಡು ವರ್ಷಗಳಿಂದ ಕೆಆರ್ಎನ್ ಲೋಕದ ಬಳಿ ಖಾಸಗಿ ಜಮೀನಿನಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ನಗರದ ಕೆಆರ್ಎನ್ ಲೋಕದ ರಸ್ತೆಯ ಕೆಸಿಪಿ ವೃತ್ತದ ಬಳಿ ಪರವಾನಗಿ ಪಡೆದ 12 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ಆರಂಭಿಸಿದ್ದಾರೆ.

ಮಾರ್ಗ ಸೂಚಿ ಅನ್ವಯ ಮಾರಾಟ

ಸುಪ್ರೀಂ ಕೋರ್ಟ್ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿಗಳನ್ನು ಅನುಸರಿಸಿ ತಯಾರಿಸಲಾಗಿರುವ ಕಂಪನಿಗಳಿಂದಲೇ ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಮಾರಾಟದ ಸ್ಥಳದಲ್ಲಿ ಬೆಂಕಿ ಆರಿಸುವ ಸಾಧನಗಳು, ನೀರಿನ ಡ್ರಮ್ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಆದ್ದರಿಂದ ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸಬಹುದು. ಆದರೆ ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆಯುವುದು ವಿಳಂಬವಾಗುತ್ತಿದೆ.

ಅತ್ತಿಬೆಲೆ ದುರಂತದ ಹಿನ್ನಲೆಯಲ್ಲಿ ಹೆಚ್ಚಿನ ಕಟ್ಟುಪಾಡುಗಳು ವಿಧಿಸಲಾಗಿದ್ದು, ಜಾಗ ಗುರುತಿಸುವುದು ಹಾಗೂ ಪರವಾನಗಿ ನೀಡುವುದು ವಿಳಂಬವಾಗಿದೆ. ಇದರಿಂದ ಅಂಗಡಿಗಳಿಗೆ ವ್ಯವಸ್ಥೆ ಮಾಡಿಕೊಳ್ಳಲು ತ್ರಾಸವಾಗಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ ಮುಂಚಿತವಾಗಿ ಹೇಳಿದರೆ ಅನುಕೂಲವಾಗಲಿದೆ.

ಭಾನುವಾರ ಸಂಜೆಯಿಂದ ವ್ಯಾಪಾರ ಬಿರುಸು

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪಟಾಕಿಗಳ ಸರಬರಾಜು ಕಡಿಮೆಯಿದ್ದು, ಬೆಲೆಗಳು ಹೆಚ್ಚಾಗಿವೆ. ವ್ಯಾಪಾರ ಭಾನುವಾರ ಸಂಜೆಯಿಂದ ಆರಂಭಗೊಳ್ಳುತ್ತಿದ್ದು, ನಂತರ ಬಿರುಸುಗೊಳ್ಳಲಿದೆ ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.

ಬೆಲೆ ಎರಿಕೆ ನಡುವೆ ದೀಪಾವಳಿಗೆ ಸ್ವಾಗತ

ದೀಪಾವಳಿ ಹಿನ್ನಲೆಯಲ್ಲಿ ಬಾಳೆಕಂದು ಮಾವಿನಸೊಪ್ಪು, ತರಕಾರಿಗಳ ಬೆಲೆ ಗಗನಕ್ಕೇರಿವೆ. ಆದರೆ ಶಾಮಂತಿಗೆ ಮೊದಲಾಗಿ ಬಿಡಿ ಹೂಗಳ ಬೆಲೆ ಎಂದಿನಂತಿವೆ. ದೀಪಾವಳಿಯಲ್ಲಿ ಮನೆ ಮುಂದೆ ಹಚ್ಚಿಡುವ ಹಣತೆಗಳ ಮಾರಾಟ ಭರದಿಂದ ಸಾಗಿದೆ.

ಮಾರುಕಟ್ಟೆ ಪ್ರದೇಶದಲ್ಲಿ ದೀಪಾವಳಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಂಡೊಯ್ಯುತ್ತಿರುವ ಸಾರ್ವಜನಿಕರು ಹಬ್ಬ ಆಚರಿಸಲು ಸಿದ್ದವಾಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಹಿನ್ನಡೆಯನ್ನುಂಟು ಮಾಡುತ್ತಿದೆ.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]