ದೊಡ್ಡಬಳ್ಳಾಪುರ: ಪತ್ರಕರ್ತರ ಸಂಘದ ಚುನಾವಣೆ.. ವೋಟ್ ಚೋರಿ ಆರೋಪ..! ದೂರು

Doddaballapura: Vote Chori allegations in the Journalists' Association elections..! Complaint

ದೊಡ್ಡಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ವೋಟ್ ಚೋರಿ (Vote Chori) ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಚುನಾವಣೆ ಆಯೋಗ ವಿರುದ್ಧ ಗಂಭೀರ ಆರೋಪ ಮಾಡಿರುವುದು ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಕಾರ್ಯನಿರತ ಪತ್ರಕರ್ತರ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪತ್ರಕರ್ತರ ಸಂಘದ ಚುನಾವಣೆಯಲ್ಲಿಯೂ (Journalists’ Association elections..!) ವೋಟ್ ಚೋರಿ ನಡೆಯುತ್ತಿದೆ ಎಂಬಂತೆ ಆರೋಪಿಸಿ ಕಾರ್ಯ ನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಚಂದ್ರಶೇಖರ ಡಿ ಚುನಾವಣೆ ಅಧಿಕಾರಿಗೆ ದೂರು ನೀಡಿದ್ದಾರೆ.

ಚಂದ್ರಶೇಖರ್.ಡಿ ನೀಡಿರುವ ದೂರಿನ ಅನ್ವಯ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷನಾದ ನನ್ನ ಗಮನಕ್ಕೆ ಬಾರದಂತೆ, ಪತ್ರಕರ್ತರಲ್ಲದ, ಕನಿಷ್ಠ ಕಾರ್ಯನಿರತ ಪತ್ರಕರ್ತರಿಗೆ ಪರಿಚಯವೂ ಇಲ್ಲದಂತಹ ಅನಾಮಿಕರು ಒಂದಿಷ್ಟು ಜನ ಅಕ್ರಮವಾಗಿ. ಪತ್ರಕರ್ತರ ಹೆಸರಿನಲ್ಲಿ ಗುರುತಿನ ಚೀಟಿಪಡೆದಿದ್ದಾರೆ.

ದೊಡ್ಡಬಳ್ಳಾಪುರ: ಪತ್ರಕರ್ತರ ಸಂಘದ ಚುನಾವಣೆ.. ವೋಟ್ ಚೋರಿ ಆರೋಪ..! ದೂರು

ಇವರುಗಳು ನವೆಂಬರ್09 ರಂದು ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಮತದಾನ ಮಾಡುವ ಉದ್ದೇಶದಿಂದ ಅಡ್ಡದಾರಿಯಲ್ಲಿ ಗುರುತಿನಚೀಟಿ ಗಿಟ್ಟಿಸಿಕೊಂಡಿರುವ ಈ ನಕಲೀಗಳು ಎಂದು ಆರೋಪಿಸಿದ್ದಾರೆ.

ಅಲ್ಲದೆ ಮತಚಲಾಯಿಸಲು ಹುನ್ನಾರ ನಡೆಸುತ್ತಿದ್ದು, ಇವರಿಗೆ ಈ ಚುನಾವಣೆಯಲ್ಲಿ ಮತಚಲಾಯಿಸಲು ಅವಕಾಶ ನೀಡದೆ ಪಾರದರ್ಶಕ ಚುನಾವಣೆ ನಡೆಸಿಕೊಡುವಂತೆ ಮನವಿ ಮಾಡಿದ್ದಾರೆ.

ಶತಮಾನದತ್ತ ದಾಪುಗಾಲಿಡುತ್ತಿರುವ ಅಂದರೆ 1932 ದಶಕಗಳ ಹಿಂದೆ ರಾಜ್ಯದ ಡಿ.ವಿ.ಗುಂಡಪ್ಪ ಅವರು ಸ್ಥಾಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ)ಗೆ ವಂಚನೆ ಮಾಡುತ್ತಿದ್ದಾರೆ.

ಪತ್ರಕರ್ತರ ಗುರುತಿನಚೀಟಿ ಪಡೆದಿರುವ ಇವರ ವಿದ್ಯಾಭ್ಯಾಸ, ಮಾದ್ಯಮ ಕ್ಷೇತ್ರದಲ್ಲಿನ ಅನುಭವ, ಇವರ ವೃತ್ತಿ? ಅಕ್ರಮವಾಗಿ ಪತ್ರಕರ್ತರ ಹೆಸರಿನಲ್ಲಿ ಗುರುತಿನ ಚೀಟಿ ಪಡೆದಿದ್ದು ಯಾವ ಕಾರಣಕ್ಕಾಗಿ? ಇವರಿಗೆ ಗುರುತಿನ ಚೀಟಿ ನೀಡಿದವರು ಯಾರು? ಇವರು ಗುರುತಿನ ಚೀಟಿಪಡೆದ ಉದ್ದೇಶವೇನು? ಎಂದು ಇವರನ್ನು ವಿಚಾರಣೆಗೆ ಒಳಪಡಿಸಿ, ಪ್ರತ್ಯಕ್ಷವಾಗಿ, ಪರೋಕ್ಷವಾಗಿ ವಂಚನೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಕೋರಿದ್ದಾರೆ.

ಅಕ್ರಮವಾಗಿ ಪಡೆದುಕೊಂಡಿರುವ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡು, ಸಾಮಾಜಿಕ ಕಾಳಜಿಯೊಂದಿಗೆ ಸೇವಾಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ನೈಜ ಕಾರ್ಯನಿರತ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]