ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ (Temples) ಬಲಿಪಾಡ್ಯಮಿ ದಿನದಂದು ಗೋಪೂಜೆ (Cow worship) ನಡೆಸಲು ಮುಜರಾಯಿ ಇಲಾಖೆ ಸೂಚನೆ ನೀಡಿದೆ.

ಮುಜರಾಯಿ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ನಡೆಸುವ ಬಗ್ಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮೌಖಿಕ ನಿರ್ದೇಶನ ನೀಡಿದ್ದಾರೆ.
ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನಮಾನ ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು, ಬಲಿಪಾಡ್ಯಮಿಯಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸು ವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. (ಸಾಮಾಜಿಕ ಜಾಲತಾಣದ ವೈರಲ್ ಫೋಟೋ ಬಳಸಲಾಗಿದೆ)