SABARIMALA: ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ: Video ನೋಡಿ

Sabarimala: President visited Ayyappa during Irumudi

ಶಬರಿಮಲೆ: ಕೇರಳದ (Kerala) ಪ್ರಸಿದ್ಧ ಶಬರಿಮಲೆಗೆ (Sabarimala) ರಾಷ್ಟ್ರಪತಿ ದೌಪದಿ ಮುರ್ಮು (Droupadi Murmu) ಅವರು ಇಂದು (ಅ.22) ಭೇಟಿ ನೀಡಿ, ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ಈ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಪ್ರಾರ್ಥನೆ ಸಲ್ಲಿಸಲು ಭೇಟಿ ನೀಡಿದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದೌಪದಿ ಮುರ್ಮು ಪಾತ್ರರಾಗಿದ್ದಾರೆ.

ಈ ಹಿಂದೆ ಅಂದರೆ 1970 ರಲ್ಲಿ ಮಾಜಿ ರಾಷ್ಟ್ರಪತಿ ವಿವಿ. ಗಿರಿ ಅವರು ಶಬರಿಮಲೆಗೆ ಭೇಟಿ ನೀಡಿದ್ದರು.

ಇನ್ನು ದೇಗುಲ ಪ್ರವೇಶಕ್ಕೂ ಮುನ್ನ ಮುರ್ಮು ಅವರು ಪಂಪಾದಲ್ಲಿ ಸಾಂಕೇತಿಕವಾಗಿ ಕೈಕಾಲುಗಳನ್ನು ತೊಳೆದು, ನಂತರ ಧಾರ್ಮಿಕ ಸ್ನಾನದೊಂದಿಗೆ ವಿಧ್ಯುಕ್ತ ಇರುಮುಡಿ ತಯಾರಿಸಲಾಯಿತು.

ಸಂಪ್ರದಾಯದ ಪ್ರಕಾರ ಭಗವಾನ್ ಅಯ್ಯಪ್ಪನಿಗೆ ಭಕ್ತರು ಹೊತ್ತೊಯ್ಯುವ ಪವಿತ್ರ ಕಾಣಿಕೆಗಳ ಕಟ್ಟಾದ ಇರುಮುಡಿ ಕಟ್ಟನ್ನು ಸಹ ಕೊಂಡೊಯ್ಯದರು.

ಪವಿತ್ರವಾದ 18 ಮೆಟ್ಟಿಲುಗಳನ್ನು ಏರಿದ ನಂತರ, ರಾಷ್ಟ್ರಪತಿಯನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಇದಾದ ಬಳಿಕ ರಾಷ್ಟ್ರಪತಿಗಳು ಮಾಲಿಕಪುರಂ ಮಂದಿರಕ್ಕೂ ಭೇಟಿ ನೀಡಿದರು.

ರಾಷ್ಟ್ರಪತಿಗಳು ವಿಶೇಷ ವಾಹನದ ಮೂಲಕ 15 ನಿಮಿಷಗಳಲ್ಲಿ ಶಬರಿಮಲೆ ತಲುಪಿದರು. ತಮ್ಮ ಅಂಗರಕ್ಷಕರ ಜೊತೆಗೂಡಿ, ಸಾಂಪ್ರದಾಯಿಕ ಇರುಮುಡಿಯನ್ನು ಹೊತ್ತುಕೊಂಡು ಬೆಟ್ಟವನ್ನು ಹತ್ತಿದರು. ಭಗವಾನ್ ಅಯ್ಯಪ್ಪನ ಪೂಜೆಯ ಸಮಯದಲ್ಲಿ ದೇವಸ್ವಂ ಸಚಿವ ವಿ.ಎನ್‌. ವಾಸವನ್ ಅವರ ಹಿಂದೆಯೇ ಇದ್ದರು.

ದೇವಾಲಯದಲ್ಲಿ ತಂತ್ರಿ ಕಂದರ್ ಮಹೇಶ್ ಮೋಹನರ್ ಬ್ರೌಪದಿ ಮುರ್ಮು ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು.

ದರ್ಶನ ಮುಗಿಸಿದ ನಂತರ, ರಾಷ್ಟ್ರಪತಿಗಳು ದೇವಸ್ವಂ ಅತಿಥಿ ಗೃಹದಲ್ಲಿ ಊಟ ಮತ್ತು ವಿಶ್ರಾಂತಿ ಪಡೆಯಲಿದ್ದಾರೆ. ದೇವಸ್ವಂ ಮಂಡಳಿಯು ಅವರಿಗೆ ಮರದ ಅಯ್ಯಪ್ಪ ಮೂರ್ತಿಯನ್ನು ವಿಧ್ಯುಕ್ತ ಉಡುಗೊರೆಯಾಗಿ ನೀಡಲಿದೆ.

ಇಂದಿನ ಕಾರ್ಯಕ್ರಮ

ರಾಷ್ಟ್ರಪತಿಯವರು ಗುರುವಾರ (ಅ.23) ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ ಆರ್ ನಾರಾಯಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ವರ್ಕಳದ ಶಿವಗಿರಿ ಮಠದಲ್ಲಿ ಶ್ರೀನಾರಾಯಣ ಗುರುಗಳ ಮಹಾಸಮಾಧಿ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕೊಟ್ಟಾಯಂ ಜಿಲ್ಲೆಯ ಪಾಲಾದ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಅಕ್ಟೋಬರ್ 24 ರಂದು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ದೆಹಲಿಗೆ ಹಿಂದಿರುಗಲಿದ್ದಾರೆ.

ತಪ್ಪಿದ ಪ್ರಮಾದ

ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಬಂದಳಿದ ಹೆಲಿಕಾಪ್ಟರ್ ಚಕ್ರ ಹೆಲಿಪ್ಯಾಡ್‌ನ ಕಾಂಕ್ರಿಟ್‌ನಲ್ಲಿ

ಹೂತುಹೋಗಿರುವ ಘಟನೆ ನಡೆದಿತ್ತು. ಕೇರಳದ ಪ್ರಮದಂನಲ್ಲಿ ಹೊಸದಾಗಿ ಕಾಂಕ್ರಿಟ್ ಹಾಕಿದ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರಪತಿಯವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಬಳಿಕ ಘಟನೆ ನಡೆದಿತ್ತು.

ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೆಲಿಕಾಪ್ಟ‌ರ್ ಅನ್ನು ಮೇಲಕ್ಕೆ ತಳ್ಳಿ, ಸುರಕ್ಷಿತವಾಗಿ ರಾಷ್ಟ್ರಪತಿಯವರನ್ನು ಕೆಳಗೆ ಇಳಿಸಿದರು.

ರಾಜಕೀಯ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="121399"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]