Illegal Bangladeshi immigrants in Doddaballapur..?

ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು..? ಸೋಶಿಯಲ್ ಮೀಡಿಯಾದಲ್ಲಿ ಗಂಭೀರ ಚರ್ಚೆ

ದೊಡ್ಡಬಳ್ಳಾಪುರ: ಅಕ್ರಮ ಬಾಂಗ್ಲಾ ವಲಸಿಗರು (Illegal Bangladeshi immigrants) ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ವಾಸಿಸುತ್ತಿದ್ದಾರೆ ಎಂಬ ಆರೋಪ ಅಗ್ಗಾಗ್ಗೆ ವರದಿಯಾಗುತ್ತಿದ್ದು, ರಾಷ್ಟ್ರೀಯ ಭದ್ರತೆಗೆ ಒಂದು ಅಪಾಯ ಎಂದು ಪರಿಗಣಿಸಲಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ತಾಲ್ಲೂಕಿಗೂ ಈ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಾಗಿ ನುಸುಳಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣಯ್ಯ (ರಾಂ ಕಿಟ್ಟಿ) ಅವರು ಫೇಸ್‌ಬುಕ್‌ ಖಾತೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ವ್ಯಾಪಕವಾಗಿ ಹರಡಿಕೊಂಡಿದ್ದಾರೆ. ಇದು ಮುಂದೆ ಅತೀ ದೊಡ್ಡ ಸಮಸ್ಯೆಯಾದಿತು ಎಂದು ಕಳವಳ ವ್ಯಕ್ತಪಡಿಸಿ, ಬರೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು..? ಸೋಶಿಯಲ್ ಮೀಡಿಯಾದಲ್ಲಿ ಗಂಭೀರ ಚರ್ಚೆ

ಇದಕ್ಕೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ದೊಡ್ಡಬಳ್ಳಾಪುರ ನಗರದ ಕಾಲೇಜು ರಸ್ತೆಗಳಲ್ಲಿ, ಹೋಟೆಲ್ ಬಳಿ, ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಕೈಗಾರಿಕಾ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿರುತ್ತಾರೆ. ಇದರಿಂದ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಅಲ್ಲದೆ ಪೊಲೀಸ್ ಇಲಾಖೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ‌.

ಮೂಲಗಳ ಮಾಹಿತಿಯಂತೆ ಈ ಅಕ್ರಮ ವಲಸಿಗರು ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳ ನಕಲಿ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಬಳಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಒಂದು ಅಪಾಯವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.

ಆತಂಕಕಾರಿ

ಇನ್ನೂ ಈ ಕುರಿತಂತೆ ರಾಮಕೃಷ್ಣಯ್ಯ (ರಾಂ ಕಿಟ್ಟಿ) ಅವರು ಪ್ರತಿಕ್ರಿಯೆ ನೀಡಿದ್ದು, ದೊಡ್ಡಬಳ್ಳಾಪುರದ ನಗರದ ಕೊಂಗಾಡಿಯಪ್ಪ ರಸ್ತೆಯಲ್ಲಿ ಹೋಟೆಲ್ ತೆರಳಿದ್ದ ವೇಳೆ ಗುಂಪಾಗಿ ಗುಂಪಾಗಿ ಯುವಕರು ಇರುವುದು ನೋಡಿ ಆಶ್ಚರ್ಯವಾಯಿತು. ನಾ ದೊಡ್ಡಬಳ್ಳಾಪುರದಲ್ಲಿ ಇದ್ದೀನಾ..? ಅಥವಾ ಯಾವುದಾದರೂ ಬೇರೆ ದೇಶದಲ್ಲಿ ಇದ್ದೀನಾ..? ಎಂಬಂತೆ.

ಮೂರ್ ನಾಲ್ಕು ಯುವಕರ ಪ್ರಶ್ನೆ ಮಾಡಿದಾಗ ಅವರಲ್ಲಿ ಒಬ್ಬೊಬ್ಬರು, ಒಂದ್ ಒಂದು ರಾಜ್ಯದ ಹೆಸರು ಹೇಳಿದ್ದು ಅನುಮಾನಕ್ಕೆ ಕಾರಣವಾಗಿದೆ.

ಎಲರೂ ಸುಮಾರು 25 ವರ್ಷದ ಯುವಕರು.. ಕರೇನಹಳ್ಳಿ ವ್ಯಾಪ್ತಿಯ ಮಗ್ಗದ ಕೆಲಸದಲ್ಲಿ ಕೆಲವರಿದ್ದರೆ, ಕೈಗಾರಿಕಾ ಪ್ರದೇಶ, ಕೋಳಿ ಫಾರಂ, ಸಲೂನ್ ಸೇರಿದಂತೆ ಮತ್ತಿತರ ಕಡೆ ವ್ಯಾಪಿಸಿದ್ದಾರೆ.

ಈ ಬೆಳವಣಿಗೆ ಅನುಮಾನಕ್ಕೆ ಕಾರಣವಾಗುತ್ತಿದೆ. ಯಾವುದೋ ವ್ಯವಸ್ಥಿತ ಜಾಲ (ಏಜೆನ್ಸಿ) ಇದರ ಹಿಂದೆ ಇದೆ ಎಂಬ ಶಂಕೆ ಕಾಡುತ್ತಿದೆ. ಇಂತವರ ಆಧಾರ್ ಕಾರ್ಡ್ ನೊಂದಣಿ ಪರಿಶೀಲನೆ ಮಾಡಿದರೆ ವಾಸ್ತವ ತಿಳಿಯುತ್ತದೆ. ಈ ಕುರಿತಂತೆ ಪೊಲೀಸ್ ಇಲಾಖೆ ತ್ವರಿತವಾಗಿ ಕ್ರಮಕೈಗೊಳ್ಳಬೇಕಿದೆ, ಏಕೆಂದರೆ ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ರಾಂಕಿಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ AI ಚಿತ್ರ ಬಳಸಲಾಗಿದೆ)

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!