Rumors of illegal Bangladeshi immigrants in Doddaballapur... Police hold emergency meeting

ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವದಂತಿ.. ತುರ್ತು ಸಭೆ ನಡೆಸಿದ ಪೊಲೀಸರು

ದೊಡ್ಡಬಳ್ಳಾಪುರ; ವಿವಿಧೆಡೆ ಅಕ್ರಮ ಬಾಂಗ್ಲಾ ವಲಸಿಗರು (illegal Bangladeshi immigrants) ನೆಲೆಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿನ ವದಂತಿ ಕುರಿತಾದ ವರದಿ ಹಿನ್ನೆಲೆಯಲ್ಲಿ ಇಂದು ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ನೇಕಾರ ಮುಖಂಡರ ತುರ್ತು ಸಭೆ ನಡೆಸಿದ್ದಾರೆ.

ಈ ವೇಳೆ ಸಾಮಾಜಿಕ ಜಾಲತಾಣದಲ್ಲಿನ ಚರ್ಚೆಯ ಕುರಿತು ಸಭೆಯಲ್ಲಿ ಚರ್ಚಿಸಿದ್ದು, ನೇಕಾರಿಕೆ ಕಾರ್ಯಕ್ಕೆ ನೇಮಕವಾಗಿರುವ ಹೊರ ರಾಜ್ಯದವರ ದಾಖಲೆ ಸಂಗ್ರಹಿಸಿ ಪೊಲೀಸ್ ಠಾಣೆ ನೀಡುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೆ ಯಾವುದೇ ಅಹಿತಕರ ಘಟನೆ, ಚಲನವಲನ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ನೇಕಾರ ಸಂಘಟನೆಗಳ ಮುಖಂಡರು ಪೊಲೀಸರು ಸೂಚನೆಗೆ ಸಹಮತ ನೀಡಿದ್ದು, ಭಾರತದೇ ಇತರೆ ರಾಜ್ಯದವರು ಹಲವು ವರ್ಷಗಳಿಂದ ದೊಡ್ಡಬಳ್ಳಾಪುರದ ನೇಕಾರಿಕೆ ಕೆಲಸ ಮಾಡುತ್ತಿದ್ದು ಯಾವುದೇ ಅನುಮಾನಸ್ಪದವಾಗಿ, ಕಾನೂನು ಉಲ್ಲಂಘನೆಯಂತ ಘಟನೆ ನಡೆದಿಲ್ಲ.

ಈ ಕುರಿತಂತೆ ಕೆಲವರು ಕಪೋಕಲ್ಪಿತವಾಗಿ ವದಂತಿ ಹರಡುತ್ತಿದ್ದಾರೆ. ಆ ರೀತಿ ಆರೋಪ ಮಾಡುವ ಮುನ್ನ ದಾಖಲೆ ಪರಿಶೀಲನೆ ಮಾಡಬೇಕು. ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡಬೇಕು, ಸುಳ್ಳು ಆರೋಪ ಇರಬಹುದೆಂದು ಬೇಸರ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಈ ವೇಳೆಗೆ ನೇಕಾರ ಸಂಘಟನೆ ಮುಖಂಡರಾದ ಹೇಮಂತ್ ರಾಜು, ವೆಂಕಟೇಶ್ ಸೇರಿದಂತೆ ಅನೇಕರು ಇದ್ದರು.

ಹಿನ್ನೆಲೆ

ನಿನ್ನೆ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣಯ್ಯ (ರಾಂ ಕಿಟ್ಟಿ) ಅವರು ಫೇಸ್‌ಬುಕ್‌ ಖಾತೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ವ್ಯಾಪಕವಾಗಿ ಹರಡಿಕೊಂಡಿದ್ದಾರೆ. ಇದು ಮುಂದೆ ಅತೀ ದೊಡ್ಡ ಸಮಸ್ಯೆಯಾದಿತು ಎಂದು ಕಳವಳ ವ್ಯಕ್ತಪಡಿಸಿ, ಬರೆದುಕೊಂಡಿದ್ದರು‌

ಇದಕ್ಕೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ದೊಡ್ಡಬಳ್ಳಾಪುರ ನಗರದ ಕಾಲೇಜು ರಸ್ತೆಗಳಲ್ಲಿ, ಹೋಟೆಲ್ ಬಳಿ, ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಕೈಗಾರಿಕಾ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿರುತ್ತಾರೆ. ಇದರಿಂದ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಅಲ್ಲದೆ ಪೊಲೀಸ್ ಇಲಾಖೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಕುರಿತಂತೆ ಹರಿತಲೇಖನಿ ವರದಿ ಮಾಡಿದ್ದು, ಅನೇಕ ಓದುಗರು ಪ್ರತಿಕ್ರಿಯೆ ನೀಡಿದ್ದಾರೆ.

ಜಯರಾಮು ನಂದಿನಿ

ಯಾವುದೇ ಹೋಟೆಲ್ ಗಳಿಗೆ ಹೋದರು ಇವರೇ ಮತ್ತು ಸಂಜೆ 5-10 ಜನ gumpu ಗುಂಪು ಓಡಾಟ ಹೆಚ್ಚಾಗಿದೆ.

Nagarjudg Dn

ಮೊದಲಿಗೇ ಇಂಥವರಿಗೆ ಇರಲು ಮನೆ ಬಾಡಿಗೆ ಕೊಡುವುದು ಕೆಲಸ ಕೊಡುವುದು ನಾವೆ ತಾನೆ, ನೇಕಾರರ ಬದುಕಲ್ಲಿ ಇವರುಗಳು ಅತಂತ್ರ ಪರಿಸ್ಥಿತಿ ಉಂಟು ಮಾಡುತ್ತಿದಾರೆ. ಮತ್ತೆ ನಮ್ಮ ಕಾರ್ಖಾನೆಯಲ್ಲಿ ಸಹ ಇವರೆ ತುಂಬಿ ಹೋಗಿದಾರೆ.

ಮತ್ತೆ ನಮ್ಮ 8 ವಾರ್ಡಲ್ಲಿ ಬಹುತೇಕ ಇಲ್ಲಿ ವಾಸವಾಗಿದ್ದಾರೆ. ಇಂಥವರಿಗೆ ಮನೆ ಬಾಡಿಗೆ ಕೊಡುತ್ತಿರುವುದು ದುರಂತಕ್ಕೆ ಕಾರಣವಾಗುತ್ತೆ, ನಮ್ಮ ವಾರ್ಡಲ್ಲಿ ಒಂದು ಕುಟುಂಬಕ್ಕೆ ಸೇರಿದವರ ವ್ಯಾಪ್ತಿಗೇ ಅಂದಾಜು 80 ,90 ಮನೆಗಳನ್ನ ಬಿಹಾರ, ಅಸ್ಸಾಂನಿಂದ ಬಂದವರಿಗೆ ಬಾಡಿಗೆ ಕೊಟ್ಟಿದಾರೆ. ಕಾರಣ ಕೇಳಿದಷ್ಟು ಬಾಡಿಗೆ ಬರುತ್ತೆ, ಆದಾಯ ಆಗುತ್ತೆ ಅಂತ.

ಮೊದಲಿಗೆ 31 ವಾರ್ಡ್ ಗಳಲ್ಲಿ ಅತಿ ಹೆಚ್ಚು ಯಾರು ಬಾಡಿಗೆ ಮನೆಗಳನ್ನ ಕೊಟ್ಟಿದಾರೆ ಅನ್ನುವುದು ಪತ್ತೆ ಮಾಡಿ ಅವರ ಮೇಲೆ ಕ್ರಮ‌ ತಗೊಬೇಕು. ಮೊದಲಿಗೆ 8ನೇ ವಾರ್ಡಲ್ಲಿ ಅತಿ ಹೆಚ್ಚು ಮನೆ ಬಾಡಿಗೆ ಕೊಟ್ಟಿರುವವರು ಯಾರು ಅಂತ ತಿಳಿದುಕೊಂಡು ಕ್ರಮ ಜರುಗಿಸಿ ಇಂಥವರಿಂದಲೇ ಸ್ಥಳಿಯರಿಗೆ ಅತಂತ್ರ ಸ್ಥಿತಿ ಊಂಟಾಗಿರುವುದು.

Ramachandra Rao

ಬರಿ ಚರ್ಚೆ ಆದರೆ ಸಾಲದು ಕಡಿಯೋಣ ಹಾಕಲೇಬೇಕಾಗಿದೆ. ಅನಿವಾರ್ಯ ಕೂಡ ಮತ್ತೊಂದು ದಿನ ಸ್ಥಳೀಯರಿಗೆ ಉದ್ಯೋಗ ಸಿಗದು.

Preetham Roy

ಈಗಾಲೇ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ. ಯಾವುದೇ ಕಂಪನಿ, ಕಾರ್ಖಾನೆಗಳಿಗೆ ಓದರೆ ಅವರೆ ತುಂಬಿದ್ದಾರೆ.

ಕನ್ನಡದಲ್ಲಿ ಮಾತನಾಡಿದರೆ ಅರ್ಥವಾಗದೆ ಕ್ಯಾ ಅಂತಾರೆ. ನಾವು ನಮ್ಮ ರಾಜ್ಯದಲ್ಲಿ ಇದ್ದೇವೋ..? ಯಾವ ರಾಜ್ಯದಲ್ಲಿ ಇದ್ದೇವೆ ಅನ್ನೋದೇ ಗೊತ್ತಾಗಲ್ಲ. ಮುಂದೆ ದೊಡ್ಡಬಳ್ಳಾಪುರದಲ್ಲಿ ಕನ್ನಡಿಗರ ಹುಡುಕಬೇಕಾದ ಪರಿಸ್ಥಿತಿ ದೂರ ಇಲ್ಲ.

Girija Giri

ಸಂಘ ಸಂಸ್ಥೆಗಳು ಎಚ್ಚರಿಕೆ ವಹಿಸಬೇಕು
ಇಲ್ಲದೆ ಹೋದರೆ ಸ್ಥಳೀಯ ಜನರಿಗೆ ಆಪಾಯ.

Chandrasekhar DM Chandru

ಇವರು ಯಾವ ರಾಜ್ಯದವರು ಎಂದು ಯಾರಿಗೂ ತಿಳಿಯುವುದಿಲ್ಲ. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯು ಮುಖ್ಯ ಕಸಬಾಗಿದ್ದು, ಇದರ ಸಲುವಾಗಿ ಬಂದು ಅನ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಬಹುದು. ಇವರು ದೊಡ್ಡಬಳ್ಳಾಪುರಕ್ಕೆ ಬಂದ ಮೇಲೆ ದೊಡ್ಡಬಳ್ಳಾಪುರದ ಸ್ಥಳೀಯ ನೇಕಾರರಿಗೆ ಅವಕಾಶವಿಲ್ಲದಂತೆ ಆಗಿದೆ. ಹಾಗೂ ಕಡಿಮೆ ಕೂಲಿಗೆ ಮಗ್ಗ ಬಿಡುವುದರಿಂದ ಇಲ್ಲಿನ ಸ್ಥಳೀಯರಿಗೂ ತುಂಬಾ ತೊಂದರೆ ಆಗುತ್ತಿದೆ.

ಅರುಣ್ ದಾದಾ

ಕಾಲೇಜ್ ರಸ್ತೆ.. ಇಸ್ಲಾಂಪುರ ರಸ್ತೆಯಲ್ಲಿ ಇವರದೇ ಆಟಾಟೋಪ.. ಇಲ್ಲಿನ ಸ್ಥಳೀಯ ಒನರ್ ಗಳು ಹಿಂದೆ ಮುಂದು ನೋಡದೆ ಅವರನ್ನು ಕೆಲಸಕ್ಕೆ ಇಟ್ಟುಕೊಂಡು ಕಡಿಮೆ ಸಂಬಳ ಕೊಟ್ಟು ದುಡಿಸಿಕೊಳ್ಳುತ್ತಿದ್ದಾರೆ. ಏನಾದರೂ ಅಚಾತುರ್ಯ ನಡೆದು ಕುತ್ತಿಗೆಗೆ ಬರುವವರೇಗೂ ಸ್ಥಳೀಯರು ಎಚ್ಚೆತ್ತುಕೊಳ್ಳುವುದಿಲ್ಲ.

G. Venkatesh Venkatesh

ನಾವು ಆಗಾಗ್ಗೆ. ಹೇಳುತ್ತಿರುತ್ತೇವೆ, ಹೊರರಾಜ್ಯದವರಿಗೆ ಸಲಿಗೆ ನೀಡಬೇಡಿ ಎಂದು, ಮುಂದಿನ ದಿನಗಳಲ್ಲಿ ಅಪಾಯ. ಕಟ್ಟಿಟ್ಟ ಬುತ್ತಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="115276"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!