Devotees flock to Hasanamba darshan; Bus services stopped

Hasanabha: ಹಾಸನಾಂಬ ಆದಾಯ ಎರಡು ಪಟ್ಟು ಹೆಚ್ಚಳ‌‌.. ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?

ಹಾಸನ; ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬೆಯ (Hasanabha) ಸಾರ್ವಜನಿಕ ದರ್ಶನಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಗುರುವಾರ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇಗುಲದ ದ್ವಾರ ಮುಚ್ಚಲಾಗಿದೆ.

ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23 ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ತಿಳಿಸಿದ್ದಾರೆ.

1000 ರೂ., 300 ರೂ‌. ಟಿಕೆಟ್ ಹಾಗೂ ಲಾಡುಪ್ರಸಾದ ಮಾರಾಟದಿಂದ ಒಟ್ಟು 21,91,75,052 ರೂ. ಆದಾಯ ಬಂದಿರುತ್ತದೆ. ಅಲ್ಲದೆ ಹುಂಡಿ ಎಣಿಕೆಯಲ್ಲಿ 3,68,12,275 ರೂ. ಬಂದಿರುತ್ತದೆ. ಕಾಣಿಕೆ ರೂಪದಲ್ಲಿ 75 ಗ್ರಾಂ. 300 ಮಿಲಿ ಚಿನ್ನ, ಬೆಳ್ಳಿ 1 ಕೆ.ಜಿ 58 ಗ್ರಾಂ. 400 ಮಿಲಿ ಹುಂಡಿಗೆ ಭಕ್ತರು ಹಾಕಿದ್ದಾರೆ ಎಂದು ತಿಳಿಸಿದರು.

ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹುಂಡಿ ಎಣಿಕೆ ನಡೆದಿದ್ದು, 15,17,785 ರೂ ಆದಾಯ ಸಂಗ್ರಹವಾಗಿದೆ.

ಕಳೆದ ವರ್ಷ ದೇವಾಲಯಕ್ಕೆ 12 ಕೋಟಿ 40 ಲಕ್ಷ ಆದಾಯ ಬಂದಿದ್ದು, ಈ ವರ್ಷ ಸಚಿವ ಕೃಷ್ಣ ಬೈರೇಗೌಡರ ಶಿಸ್ತು ಬದ್ಧ ಕಾಳಜಿಯಿಂದ ಆದಾಯ ಎರಡು ಪಟ್ಟು ಹೆಚ್ಚಳವಾಗಿದೆ ಎಂದು ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ.

ದಾಖಲೆ ಸೃಷ್ಟಿ

ಹಲವು ವಿಶೇಷತೆಗಳಿಂದ ಕೂಡಿದ್ದ ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವ ನಿರೀಕ್ಷೆಯಂತೆಯೇ ಐತಿಹಾಸಿಕ ದಾಖಲೆ ಸಹ ಬರೆದಿದೆ. ಕಳೆದ ವರ್ಷ 17,42,240 ಮಂದಿ ಭಕ್ತರು ದೇವಿ ದರ್ಶನ ಪಡೆದಿದ್ದರು. ಒಟ್ಟಾರೆ ಕಾಣಿಕೆ ರೂಪದ ಆದಾಯ 12,63,83,808 ರೂ. ಸಂಗ್ರಹ ವಾಗಿತ್ತು.

ಇದು ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ವರೆಗಿನ ಹೊಸ ದಾಖಲೆ ಆಗಿತ್ತು. ಆದರೆ 2025ರಲ್ಲಿ ಅಳಿಸಲು ಕಷ್ಟ ಎನ್ನುವಂತಹ ವಿನೂತನ ದಾಖಲೆ ಸೃಷ್ಟಿಯಾಗಿದೆ.

ಆ.09 ರಿಂದ 23ರವರೆಗೆ 26,06,691 ಭಕ್ತರು ದೇವಿಯ ದರ್ಶನ ಪಡೆದಿದ್ದು, ಒಂದು ದಾಖಲೆಯಾದರೆ, ಒಟ್ಟಾರೆ ಆದಾಯ 25,59,87,327 ಕೋಟಿ ತಲುಪಿರುವುದು ಹೊಚ್ಚ ಹೊಸ ದಾಖಲೆಯಾಗಿದೆ.

ಈ ಬಾರಿ ಅಚ್ಚುಕಟ್ಟು, ಶಿಸ್ತುಬದ್ಧ ಉತ್ಸವ ನಡೆದಿದ್ದು ಒಂದು ಸಂತೋಷವಾದರೆ, ಆದಾಯ ಗಣನೀಯವಾಗಿ ಏರಿಕೆಯಾಗಿರುವುದು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರ ಕಾಳಜಿಗೆ ಹಿಡಿದ ಕೈಕನ್ನಡಿಯಾಗಿದೆ.

ರಾಜಕೀಯ

RSS ಇಲ್ಲದೆ ಇದ್ದರೆ ನಾವೆಲ್ಲರೂ ಮುಲ್ಲಾಗಳಾಗಿರುತ್ತಿದ್ದೆವು; ಕೆ.ಎಸ್. ಈಶ್ವರಪ್ಪ

RSS ಇಲ್ಲದೆ ಇದ್ದರೆ ನಾವೆಲ್ಲರೂ ಮುಲ್ಲಾಗಳಾಗಿರುತ್ತಿದ್ದೆವು; ಕೆ.ಎಸ್. ಈಶ್ವರಪ್ಪ

ಸಂಘ ಪರಿವಾರ (RSS) ಇಲ್ಲದೇ ಹೋದರೆ ನಾವೆಲ್ಲರೂ ಮುಲ್ಲಾಗಳಾಗಿರುತ್ತಿದೆವು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ (K.S. Eshwarappa) ಹೇಳಿದರು.

[ccc_my_favorite_select_button post_id="115310"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!