Devotees flock to Hasanamba darshan; Bus services stopped

Hasanabha: ಹಾಸನಾಂಬ ಆದಾಯ ಎರಡು ಪಟ್ಟು ಹೆಚ್ಚಳ‌‌.. ಹುಂಡಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?

ಹಾಸನ; ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬೆಯ (Hasanabha) ಸಾರ್ವಜನಿಕ ದರ್ಶನಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಗುರುವಾರ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇಗುಲದ ದ್ವಾರ ಮುಚ್ಚಲಾಗಿದೆ.

ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23 ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ತಿಳಿಸಿದ್ದಾರೆ.

1000 ರೂ., 300 ರೂ‌. ಟಿಕೆಟ್ ಹಾಗೂ ಲಾಡುಪ್ರಸಾದ ಮಾರಾಟದಿಂದ ಒಟ್ಟು 21,91,75,052 ರೂ. ಆದಾಯ ಬಂದಿರುತ್ತದೆ. ಅಲ್ಲದೆ ಹುಂಡಿ ಎಣಿಕೆಯಲ್ಲಿ 3,68,12,275 ರೂ. ಬಂದಿರುತ್ತದೆ. ಕಾಣಿಕೆ ರೂಪದಲ್ಲಿ 75 ಗ್ರಾಂ. 300 ಮಿಲಿ ಚಿನ್ನ, ಬೆಳ್ಳಿ 1 ಕೆ.ಜಿ 58 ಗ್ರಾಂ. 400 ಮಿಲಿ ಹುಂಡಿಗೆ ಭಕ್ತರು ಹಾಕಿದ್ದಾರೆ ಎಂದು ತಿಳಿಸಿದರು.

ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹುಂಡಿ ಎಣಿಕೆ ನಡೆದಿದ್ದು, 15,17,785 ರೂ ಆದಾಯ ಸಂಗ್ರಹವಾಗಿದೆ.

ಕಳೆದ ವರ್ಷ ದೇವಾಲಯಕ್ಕೆ 12 ಕೋಟಿ 40 ಲಕ್ಷ ಆದಾಯ ಬಂದಿದ್ದು, ಈ ವರ್ಷ ಸಚಿವ ಕೃಷ್ಣ ಬೈರೇಗೌಡರ ಶಿಸ್ತು ಬದ್ಧ ಕಾಳಜಿಯಿಂದ ಆದಾಯ ಎರಡು ಪಟ್ಟು ಹೆಚ್ಚಳವಾಗಿದೆ ಎಂದು ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ.

ದಾಖಲೆ ಸೃಷ್ಟಿ

ಹಲವು ವಿಶೇಷತೆಗಳಿಂದ ಕೂಡಿದ್ದ ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವ ನಿರೀಕ್ಷೆಯಂತೆಯೇ ಐತಿಹಾಸಿಕ ದಾಖಲೆ ಸಹ ಬರೆದಿದೆ. ಕಳೆದ ವರ್ಷ 17,42,240 ಮಂದಿ ಭಕ್ತರು ದೇವಿ ದರ್ಶನ ಪಡೆದಿದ್ದರು. ಒಟ್ಟಾರೆ ಕಾಣಿಕೆ ರೂಪದ ಆದಾಯ 12,63,83,808 ರೂ. ಸಂಗ್ರಹ ವಾಗಿತ್ತು.

ಇದು ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ವರೆಗಿನ ಹೊಸ ದಾಖಲೆ ಆಗಿತ್ತು. ಆದರೆ 2025ರಲ್ಲಿ ಅಳಿಸಲು ಕಷ್ಟ ಎನ್ನುವಂತಹ ವಿನೂತನ ದಾಖಲೆ ಸೃಷ್ಟಿಯಾಗಿದೆ.

ಆ.09 ರಿಂದ 23ರವರೆಗೆ 26,06,691 ಭಕ್ತರು ದೇವಿಯ ದರ್ಶನ ಪಡೆದಿದ್ದು, ಒಂದು ದಾಖಲೆಯಾದರೆ, ಒಟ್ಟಾರೆ ಆದಾಯ 25,59,87,327 ಕೋಟಿ ತಲುಪಿರುವುದು ಹೊಚ್ಚ ಹೊಸ ದಾಖಲೆಯಾಗಿದೆ.

ಈ ಬಾರಿ ಅಚ್ಚುಕಟ್ಟು, ಶಿಸ್ತುಬದ್ಧ ಉತ್ಸವ ನಡೆದಿದ್ದು ಒಂದು ಸಂತೋಷವಾದರೆ, ಆದಾಯ ಗಣನೀಯವಾಗಿ ಏರಿಕೆಯಾಗಿರುವುದು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರ ಕಾಳಜಿಗೆ ಹಿಡಿದ ಕೈಕನ್ನಡಿಯಾಗಿದೆ.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!