ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

Who are they, astrologers, to make predictions? - Nikhil Kumaraswamy lashes out at DCM

ರಾಮನಗರ: ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತೀವ್ರ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್ ( D.K. Shivakumar) ವಿರುದ್ಧ ಕಿಡಿಕಾರಿದರು.

ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್ ಆರ್ ವ್ಯಾಲ್ಯೂ ಮೇಲೆ ದರ ಪಿಕ್ಸ್ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡ್ತವೆ. ಅದಕ್ಕೆ 100 ದಿನ ಟೈಂ ಲೈನ್ ಪಿಕ್ಸ್ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್ ಆರ್ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್ಸ್ ಕೊಡ್ತಾವ್ರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

HDK ಕೊಟ್ಟ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ

ಕುಮಾರಸ್ವಾಮಿ ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು; ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ಕೊಟ್ಟಂತ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನ ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡ್ತೀವಿ ಎಂದು ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ಭವಿಷ್ಯ ನುಡಿಯೋಕೆ ಡಿಕೆಶಿ ಜ್ಯೋತಿಷಿನಾ?

ಮುಂದೆ ಜೆಡಿಎಸ್ 8ರಿಂದ 9 ಸ್ಥಾನ ಬರುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ನುಡಿಯೋಕೆ ಅವರ‌್ಯಾರು, ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡ್ತಾರೆ. ಭವಿಷ್ಯ ಹೇಳೋಕೆ ಅವರೇನು ಜ್ಯೋತಿಷ್ಯೀನಾ.? ಅವರು ಭವಿಷ್ಯ ನುಡಿಯಲಿ ಟೈಂ ಬಂದಾಗ ಮಾತಾಡ್ತೀವಿ ಎಂದು ಡಿಕೆ ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡ್ತೀವಿ ಅಂತ ಹೇಳಿ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10ಕೋಟಿ ಅನುದಾನವೂ ಸಿಕ್ಕಿಲ್ಲ.

ಬಿಜೆಪಿ-ಜೆಡಿಎಸ್ ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಕಂಟ್ರಾಕ್ಟರ್ ಗಳು ಕಥೆ ಏನಾಗಿದೆ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.

ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!