Cottage industries will improve the economic situation: Minister K.H. Muniyappa

ಗುಡಿ ಕೈಗಾರಿಕೆಗಳಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ‌.ಜಿಲ್ಲೆ: ಕೇಂದ್ರದಲ್ಲಿ ನಾನು ಎಂಎಸ್ಎಂಇ ಮಂತ್ರಿಯಾಗಿದ್ದಾಗ ಎಂಪ್ಲಾಯ್ಮೆಂಟ್ ಜನರೇಷನ್ ಪ್ರೋಗ್ರಾಮ್ ಅಡಿಯಲ್ಲಿ ಒಂದು ಲಕ್ಷ ಉದ್ದಿಮೆಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (K.H. Muniyappa) ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಂ.ಎಸ್.ಎಂ.ಇ ಅಭಿವೃದ್ಧಿ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ನಡೆದ ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಆಶಯದಂತೆ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚು ಬಳಸಬೇಕು, ಪ್ರೊತ್ಸಾಹಿಸಬೇಕು. ಕೇಂದ್ರದಲ್ಲಿ ಎಂಎಸ್ಎಂಇ ಮಂತ್ರಿ ಆಗಿದ್ದಾಗ ದೇಶದಾದ್ಯಂತ ಒಂದು ಲಕ್ಷ ಕುಟುಂಬಗಳಿಗೆ 5 ರಿಂದ 25 ಲಕ್ಷದವರೆಗೆ ಸಬ್ಸಿಡಿ ನೀಡಿದ್ದೆವು. ಇದರಿಂದ ಒಂದು ಲಕ್ಷ ಉದ್ದಿಮೆಗಳು ಸ್ಥಾಪನೆಯಾಗಿ ಸುಮಾರು 8 ಲಕ್ಷ ಜನರು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಇದರ ಉದ್ದೇಶ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ಉದ್ಯೋಗದಿಂದ ವಂಚಿತರಾಗುವುದನ್ನು ತಪ್ಪಿಸಲು, ಸ್ವತಃ ದುಡಿಮೆ ಮಾಡಲು ಸಾಕಾರ ಆಗುವಂತೆ ಪ್ರೋತ್ಸಾಹಿಸುವುದು.

ಕರಕುಶಲ, ಗುಡಿ ಕೈಗಾರಿಕೆಗಳು ಬಹಳ ಹಳೆಯ ಕಾಲದ ಸಾಂಪ್ರದಾಯಿಕ, ಪಾರಂಪರಿಕ ಕೈಗಾರಿಕೆಗಳಾಗಿವೆ. ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಡಲು ಗುಡಿ ಕೈಗಾರಿಕೆಗಳು ಸಹಕಾರಿಯಾಗಿದೆ. ಉತ್ಪನ್ನಗಳನ್ನು ತಯಾರಿಸಿ ಅವುಗಳನ್ನು ನಾವೇ ಮಾರಾಟ ಮಾಡಬೇಕು ಇದರಿಂದ ಆರ್ಥಿಕವಾಗಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ಹಿಂದಿನ ಕಾಲದಲ್ಲಿ ವಸ್ತುಗಳನ್ನು ಸಂತೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈಗ ಆಧುನಿಕತೆ, ತಂತ್ರಜ್ಞಾನ ಬೆಳೆದಂತೆ ಆನ್ಲೈನ್ ಮೂಲಕ ಮಾರಾಟ ಮತ್ತು ಕೊಳ್ಳುವಿಕೆ ಪ್ರಕ್ರಿಯೆ ನಡೆಯುತ್ತಿದೆ. ನಾವೇ ಉತ್ಪನ್ನಗಳನ್ನು ತಯಾರಿಸಿ ನಾವೇ ಮಾರಾಟ ಮಾಡುವ ಪ್ರವೃತ್ತಿ ಬೆಳೆಯಬೇಕು. ಸ್ವದೇಶಿ ಉತ್ಪನ್ನಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಈ ತರಬೇತಿ ಕಾರ್ಯಕ್ರಮವು ಸಣ್ಣ ಕೈಗಾರಿಕೆ ಗುಡಿ ಕೈಗಾರಿಕೆ ಸ್ವಂತ ಉದ್ಯಮಗಳನ್ನು ಮಾಡುವ ಆಸಕ್ತರಿಗೆ, ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಸಹಕಾರಿಯಾಗಲಿದೆ. ಉತ್ಪನ್ನಗಳ ತಯಾರಿಕೆ , ಮಾರುಕಟ್ಟೆ ಸೌಲಭ್ಯ, ಸಾಲ ಸೌಲಭ್ಯ ಮುಂತಾದ ವಿಷಯಗಳ ಬಗ್ಗೆ ಈ ತರಬೇತಿಯಲ್ಲಿ ಮಾಹಿತಿ ಪಡೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದರು.

ನೀವು ತಯಾರಿಸುವ ಗುಡಿ ಕೈಗಾರಿಕೆ ಉತ್ಪನ್ನಗಳು ಗುಣಮಟ್ಟದ್ದಾಗಿದ್ದರೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೇಡಿಕೆ ಬರುತ್ತದೆ ಹಾಗೆ ಒಳ್ಳೆಯ ಲಾಭ ಕೂಡ ಗಳಿಸಬಹುದು ಹಾಗಾಗಿ ಗುಣಮಟ್ಟದ ಉತ್ಪನ್ನಗಳ ತಯಾರಿಕೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಫಲಾನುಭವಿಗಳಿಗೆ ಕಿವಿ ಮಾತು ಹೇಳಿದರು.

ವಿಶ್ವಕರ್ಮ ಯೋಜನೆ

ಕೇಂದ್ರ ಸರ್ಕಾರವು ಸಾಂಪ್ರದಾಯಿಕ
ಉದ್ದಿಮೆಗಳನ್ನು ಉತ್ತೇಜಿಸಲು ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ಬಡಗಿ (ಸುತಾರ್), ದೋಣಿ ತಯಾರಕರು, ಶಸ್ತ್ರಾಸ್ತ್ರ ತಯಾರಕರು, ಕಮ್ಮಾರ (ಲೋಹರ್), ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಕರು, ಬೀಗ ತಯಾರಕರು, ಚಿನ್ನಾರಿ (ಸೋನಾರ್), ಕುಂಬಾರ (ಕುಮ್ಹಾರ), ಶಿಲ್ಪಿ (ಮೂರ್ತಿಕಾರ, ಕಲ್ಲು ಕೆತ್ತುವವರು), ಕಲ್ಲು ಒಡೆಯುವವರು, ಚಮ್ಮಾರ (ಚರ್ಮಕಾರ)/ಪಾದರಕ್ಷೆ ತಯಾರಕರು, ಕಲ್ಲಿನ ಕೆಲಸಗಾರ (ರಾಜಮಿಸ್ತ್ರಿ), ಬುಟ್ಟಿ/ಚಾಪೆ/ಪೊರಕೆ ತಯಾರಕರು/ನಾರಿನ ಕೆಲಸಗಾರರು ಬೊಂಬೆ ಮತ್ತು ಆಟಿಕೆಗಳ ತಯಾರಕರು (ಸಾಂಪ್ರದಾಯಿಕ) ಕ್ಷೌರಿಕ, ಹೂಮಾಲೆ ತಯಾರಕರು, ಅಗಸ (ಧೋಬಿ), ಟೈಲರ್ (ದರ್ಜಿ) ಇಂತಹ 18 ವೃತ್ತಿ ಕೌಶಲ್ಯಗಳಿಗೆ ಉತ್ತೇಜನ ನೀಡಿ ಪ್ರೋತ್ಸಾಹ ನೀಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ನೀವು ತಯಾರಿಸುವ ಉತ್ಪನ್ನಗಳಿಗೆ ಒಂದು ವಸ್ತು ಪ್ರದರ್ಶನ ಮಳಿಗೆ(ಎಕ್ಸಿಬಿಷನ್ ಸೆಂಟರ್) ಮಾಡಿ ಅಲ್ಲಿ ನಿಮ್ಮ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು ಈ ಬಗ್ಗೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮ್ ಪ್ರಸಾದ್, ಜಿಲ್ಲಾಧಿಕಾರಿ ಎಬಿ ಬಸವರಾಜು, ಎಂ.ಎಸ್.ಎಂ.ಇ ಯ ಜಂಟಿ ನಿರ್ದೇಶಕರಾದ ದೇವರಾಜು ಕೆ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ರಾಮಾಂಜಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜಗನ್ನಾಥ.

ಎಂ ಎಸ್ ಎಂ ಇ ಕಾರ್ಯಕ್ರಮ ಸಂಯೋಜಕರಾದ ಕಸ್ತೂರಿ ಸಂದೇಶ್ ಸಾವನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಪುಷ್ಪಲತಾ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಸಿ ಮಂಜುನಾಥ್, ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಇತರರು ಉಪಸಿತರಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!