Doddaballapura: Idol installation ceremony at the Eshwara temple..

ದೊಡ್ಡಬಳ್ಳಾಪುರ: ಈಶ್ವರ ದೇವಾಲಯದಲ್ಲಿ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ.. ಸಿದ್ಧಲಿಂಗ ಮಹಾಸ್ವಾಮೀಜಿ ಭಾಗಿ

ದೊಡ್ಡಬಳ್ಳಾಪುರ: ಈಶ್ವರ ಬಸವೇಶ್ವರ ಸೇವಾ ಟ್ರಸ್ಟ್ ವತಿಯಿಂದ ದೇವರಾಜ ನಗರದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿನ ಈಶ್ವರ ದೇವಾಲಯದಲ್ಲಿ (Eshwara temple) ಮೂರು ದಿನಗಳ ಕಾಲ ಗಣೇಶ, ಪಾರ್ವತಿ ಸಮೇತ ಈಶ್ವರ ಕಾಲಭೈರವ ನೂತನ ಶಿಖರ ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಮತ್ತು ಬಸವೇಶ್ವರ, ಆಂಜನೇಯ, ಮಾಚೀಶ್ವರ, ನವಗ್ರಹ, ನಾಗ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅ.25 ಸಂಜೆ 4-00 ಗಂಟೆಗೆ ಮಂಗಳವಾದ್ಯ ಸಮೇತ ಪೂರ್ಣಕುಂಭಗಳೊಡನೆ ಗಂಗಾಪೂಜೆ, ಆಲಯ ಪ್ರವೇಶ, ಮಹಾಗಣಪತಿ ಪೂಜಾ, ಶೈವ ಪುಣಣ್ಯಾಹ, ದೇವನಾಂದಿ ಪಂಚಗವ್ಯಾ ಪೂಜಾ, ಋತ್ವಿಗರಣ, ರಕ್ಷಾಬಂಧನ, ಅಸ್ತ್ರ ರಾಜಪೂಜಾ, ರಾಕ್ಷೆಜ್ಞ ಪೂಜಾ, ಅಂಕುರಾರೋಪಣ, ಕಳಶ ಸ್ಥಾಪನಾದಿ ಕಾರ್ಯ. ರಾತ್ರಿ 7-30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಸಲಾಯಿತು.

ಅ.26 ರಂದು ಬೆಳಿಗ್ಗೆ 10-00 ಗಂಟೆಗೆ ಶ್ರೀ ಮಹಾಗಣಪತಿ ಪೂಜಾ, ಧ್ವಜಾರೋಹಣ, ಶೈವಾಗ್ನಿ ಪ್ರತಿಷ್ಠಾ. ಮಹಾಹೋಮ, ಪೂಜೆ ಮತ್ತು ಪ್ರಸಾದ ವಿನಿಯೋಗ ಕಾರ್ಯಕ್ರಮ ನೂತನ ಕಳಶ ಪ್ರತಿಷ್ಠಾಪನೆ, ವಿಗ್ರಹ ಧಾನ್ಯಾಧಿವಾಸ, ಶೈಯ್ಯಾಧಿವಾಸ. ರಾತ್ರಿ 7-30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನೆರವೇರಿತು.

ಅ.27 ರಂದು ಬೆಳಗಿನ ಜಾವ 4-30 ರಿಂದ 5-30 ಗಂಟಗೆ ಮಹಾಚಕ್ರ ಸ್ಥಾಪನೆ, ನವರತ್ನ ಪಂಚಲೋಹ ಸಮೇತ ವಿಗ್ರಹಗಳ ಪ್ರತಿಷ್ಠಾಪನೆಯನ್ನು ನೆರವೇರಿಸಲಾಗುತ್ತದೆ. ನಂತರ ಬೆಳಗ್ಗೆ 9-00 ರಿಂದ 9-45 ಗಂಟೆಯೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನೇತ್ರೋಲನ, ಪೂರ್ಣಾಹುತಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸಿದ್ದರು..

ಈ ವೇಳೆ ಶ್ರೀಗಳಿಗೆ ಪಾದಪೂಜೆ ಸಲ್ಲಿಸಲಾಯಿತು.

ಈ ವೇಳೆ ಟ್ರಸ್ಟ್ ಗೌರವ ಅಧ್ಯಕ್ಷ ಎ.ರಾಜಣ್ಣ, ಅಧ್ಯಕ್ಷ ಎಲ್.ವೆಂಕಟೇಶ್, ಉಪಾಧ್ಯಕ್ಷ ಆರ್.ಲಕ್ಷ್ಮೀನಾರಾಯಣ್, ಪ್ರಧಾನ ಕಾರ್ಯದರ್ಶಿ ಜೆ.ಮಂಜುನಾಥ್, ಖಜಾಂಚಿ ಸತ್ಯನಾರಾಯಣ, ಕಾರ್ಯದರ್ಶಿ ಕೆ.ಎಸ್. ಬಾಲಕೃಷ್ಣ, ಸದಸ್ಯರಾದ ಜಿ.ವೆಂಕಟೇಶ್, ಎಸ್.ಶಿವಣ್ಣ, ಲತಾ ಆರಾಧ್ಯ, ಕೆ. ಭರತ್ ಕೃಷ್ಣಮೂರ್ತಿ, ವಸಂತ್ ಕುಮಾರ್.ಕೆ.ವಿ., ಬಿ.ಆರ್.ಜಯಶಂಕರ್, ಕೆ.ಗಂಗಾಧರ್, ಎಂ.ಮಂಜುನಾಥ್, ನಟರಾಜ್, ರಾಕೇಶ್, ಪ್ರಧಾನ ಅರ್ಚಕ ಕೆ.ಎನ್.ಶಶಿಧರ್‌ಸ್ವಾಮಿ, ನಗರಸಭೆ ಸದಸ್ಯ ಶಿವಶಂಕರ್ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!