Global conservation organization IUCN adopts Soil Security Act..!

ಮಣ್ಣಿನ ಭದ್ರತಾ ಕಾಯಿದೆಯನ್ನು ಅಂಗೀಕರಿಸಿದ ಜಾಗತಿಕ ಸಂರಕ್ಷಣಾ ಸಂಸ್ಥೆ IUCN..!

ಚಿಕ್ಕಬಳ್ಳಾಪುರ: ಜಾಗತಿಕ ಸಂರಕ್ಷಣಾ ಸಂಸ್ಥೆಯಾದ ಅಂತರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ಮಹತ್ವದ ಐತಿಹಾಸಿಕ ನಿರ್ಣಯದಲ್ಲಿ ಮೋಷನ್ 007 – ಮಣ್ಣಿನ ಭದ್ರತಾ ಕಾಯಿದೆಯನ್ನು (Soil Security Law) ಅಂಗೀಕರಿಸಿದ್ದು, ವಿಶ್ವದ ಮೊದಲ ಮಾದರಿ ಮಣ್ಣಿನ ರಕ್ಷಣಾ ಕಾಯಿದೆಯೆನಿಸಿಕೊಂಡಿದೆ.

ಈ ಪ್ರಸ್ತಾವನೆಯನ್ನು ಮಣ್ಣು ಉಳಿಸಿ (ಈಶ ಔಟ್‌ರೀಚ್) ಅಭಿಯಾನ ಮತ್ತು ಪೇಸ್ ವಿಶ್ವವಿದ್ಯಾಲಯದ ಎಲಿಸಬೆತ್ ಹೌಬ್ ಲಾ ಶಾಲೆಯ ಗ್ಲೋಬಲ್ ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಲೀಗಲ್ ಸ್ಟಡೀಸ್ (ಅಮೇರಿಕಾ) ಸಹ ಪ್ರಾಯೋಜಿಸಿದ್ದು, ಆಸ್ಟ್ರೇಲಿಯಾದ ಔರೋರಾ ಸಾಯಿಲ್ ಸೆಕ್ಯುರಿಟಿ ಥಿಂಕ್ ಟ್ಯಾಂಕ್ ಸಹ ಪ್ರಮುಖ ಪಾತ್ರವಹಿಸಿದೆ.

007 ನಿರ್ಣಯವು ಮಣ್ಣಿಗೆ ದೊರೆತ ಐತಿಹಾಸಿಕ ಜಯವಾಗಿದ್ದು, ವಿಶ್ವದಾದ್ಯಂತ ಜನರು ಮಣ್ಣಿನ ಪರವಾಗಿ ಶ್ರಮ, ಪ್ರೀತಿ ಮತ್ತು ತ್ಯಾಗದಿಂದ ಮಾಡಿದ ಹೋರಾಟದ ಫಲ. ಮೊಟ್ಟ ಮೊದಲ ಬಾರಿಗೆ ಜಾಗತಿಕ ಸಂರಕ್ಷಣಾ ಸಂಸ್ಥೆಯೊಂದು ಮಣ್ಣಿನ ಭದ್ರತೆಯನ್ನು ಆಹಾರ, ನೀರು, ಜೀವವೈವಿಧ್ಯತೆ ಮತ್ತು ಹವಾಮಾನ ಸ್ಥೈರ್ಯತೆಗೆ ಆಧಾರವೆಂದು ಅಧಿಕೃತವಾಗಿ ಗುರುತಿಸಿದೆ.

ಇದರಿಂದ ವಿಶ್ವದಾದ್ಯಂತ ಇನ್ನಷ್ಟು ಪ್ರಬಲ ಕಾನೂನಾತ್ಮಕ ಮಣ್ಣು ಸಂರಕ್ಷಣಾ ವಿಧಾನಗಳು ರೂಪುಗೊಳ್ಳಲಿವೆ. ಎಂದು ಮಣ್ಣು ಉಳಿಸಿ ಅಭಿಯಾನದ ಮುಖ್ಯ ವಿಜ್ಞಾನ ಮತ್ತು ತಾಂತ್ರಿಕ ಅಧಿಕಾರಿಗಳಾದ ಪ್ರವೀನಾ ಶ್ರೀಧರ್ ಅವರು ಹೇಳಿದರು.

ಈ ಐತಿಹಾಸಿಕ ನಿರ್ಣಯದ ಹಿನ್ನೆಲೆಯಲ್ಲಿ ಸದ್ಗುರುಗಳು Xನಲ್ಲಿ “ಇದು ಮಣ್ಣಿನ ಸಮಗ್ರ ಮತ್ತು ಬದ್ಧತೆಯಿಂದ ಕೂಡಿದ ರಕ್ಷಣೆಯ ಅಗತ್ಯತೆಯನ್ನು ಜಾಗತಿಕವಾಗಿ ಗುರುತಿಸುವ ಮಹತ್ವದ ಹೆಜ್ಜೆ. ಈಗ ನಿಜವಾದ ಕೆಲಸ ಆರಂಭವಾಗಲಿದೆ — ಮಣ್ಣಿಗಾಗಿ, ರೈತರಿಗಾಗಿ, ಎಲ್ಲಾ ಜೀವಿಗಳಿಗಾಗಿ ಮತ್ತು ನಮ್ಮ ಭವಿಷ್ಯಕ್ಕಾಗಿ ಎಲ್ಲರೂ ಕೂಡಿಬರೋಣ.”

ಈಶ ಫೌಂಡೇಶನ್ ನ ಪರವಾಗಿ IUCN ಸದಸ್ಯತ್ವಕ್ಕೆ, ಪ್ರಸ್ತಾಪಕರಿಗೆ, ಮಣ್ಣು ಉಳಿಸಿ ಅಭಿಯಾನವನ್ನೊಳಗೊಂಡಂತೆ ಸಹ ಪ್ರಾಯೋಜಕರಿಗೆ ಹಾಗೂ ಅಬುಧಾಬಿಯ ವಿಶ್ವ ಸಂರಕ್ಷಣಾ ಮಹಾಸಭೆಯಲ್ಲಿ ಶ್ರಮಿಸಿದ ಎಲ್ಲ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

007ನಿರ್ಣಯದ ಅಂಗೀಕಾರದೊಂದಿಗೆ IUCN ಈಗ ಮಣ್ಣಿನ ಭದ್ರತೆಯ ಕುರಿತು ಅಂತರಾಷ್ಟ್ರೀಯ ಒಪ್ಪಂದ ಅಥವಾ ಕಾನೂನು ಸಾಧನ ರೂಪಿಸಲು ಕಾರ್ಯಸಮಿತಿಯನ್ನು ರಚಿಸಲಿದ್ದು, ಅದರಿಂದ ಮಾದರಿ ಮಣ್ಣಿನ ಭದ್ರತಾ ಕಾಯಿದೆ ರೂಪಗೊಳ್ಳಲಿದೆ. ಇದನ್ನು 90ಕ್ಕೂ ಹೆಚ್ಚು ಸದಸ್ಯ ರಾಷ್ಟ್ರಗಳು ತಮ್ಮ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲಾಗುವುದು.

ಮಾದರಿ ಮಣ್ಣಿನ ಭದ್ರತಾ ಕಾಯಿದೆ ರಾಷ್ಟ್ರ ಮಟ್ಟದಲ್ಲಿ ಮಣ್ಣಿನ ಸಂರಕ್ಷಣಾ ಕ್ರಮಗಳನ್ನು ಕೃಷಿ, ಹವಾಮಾನ ಮತ್ತು ಪರಿಸರ ನೀತಿಗಳಲ್ಲಿ ಅಳವಡಿಸಿಕೊಳ್ಳಲು ಮಾರ್ಗದರ್ಶಿಯಾಗಲಿದೆ. ರೈತರ ಜೀವನೋಪಾಯವನ್ನು ರಕ್ಷಿಸುವುದರ ಜೊತೆಗೆ ಪರಿಸರದ ಮೂಲಾಧಾರವಾದ ಮಣ್ಣಿನ ಜೀವಶಕ್ತಿಯನ್ನು ಪೀಳಿಗೆಯಿಂದ ಪೀಳಿಗೆಗೆ ಸುಭದ್ರಗೊಳಿಸುವುದು ಇದರ ಉದ್ದೇಶವಾಗಿದೆ.

2025ರ ಜನವರಿಯಿಂದಲೇ ಮಣ್ಣು ಉಳಿಸಿ ಅಭಿಯಾನ ಮತ್ತು ಅದರ ಸಹಭಾಗಿಗಳು ಫ್ರಾನ್ಸ್, ಜರ್ಮನಿ, ಜಪಾನ್, ಮತ್ತು ಕೆನಡಾ ಸೇರಿದಂತೆ ಅನೇಕ ಸರ್ಕಾರಗಳ ಪ್ರತಿನಿಧಿಗಳೊಂದಿಗೆ ಅನೇಕ ಚರ್ಚೆ ಮತ್ತು ವಿಚಾರಗೋಷ್ಠಿಗಳಲ್ಲಿ ಪಾಲ್ಗೊಂಡು, ಸಮಗ್ರ ಕಾನೂನಾತ್ಮಕ ಮಣ್ಣು ಸಂರಕ್ಷಣೆಯ ಅಗತ್ಯತೆ ಕುರಿತು ಜಾಗತಿಕ ಜಾಗೃತಿ ಅಭಿಯಾನಗಳನ್ನು ಆಯೋಜಿಸಿದ್ದರು.

ಅಬುಧಾಬಿಯಲ್ಲಿ ನಡೆದ ಇತ್ತೀಚಿನ IUCN ಮಹಾಸಭೆಯಲ್ಲಿ, ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರು ಮತ್ತು ಸಹಭಾಗಿಗಳು ಮಣ್ಣಿನ ಭದ್ರತಾ ಕಾಯ್ದೆಯ ಪ್ರಸ್ತಾವನೆಗಾಗಿ ಅವಿಶ್ರಾಂತ ಅಭಿಯಾನ ನಡೆಸಿದರು. 87.1% ಸರ್ಕಾರಿ ಸದಸ್ಯರು, 95.45% ಎನ್‌ಜಿಒ ಮತ್ತು ಆದಿವಾಸಿ ಗುಂಪುಗಳು ಇದರ ಪರವಾಗಿ ಮತಹಾಕಿದ ಪರಿಣಾಮವಾಗಿ IUCN ಸದಸ್ಯರು ಬಹುಮತದಿಂದ ನಿರ್ಣಯವನ್ನು ಅಂಗೀಕರಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!