Global conservation organization IUCN adopts Soil Security Act..!

ಮಣ್ಣಿನ ಭದ್ರತಾ ಕಾಯಿದೆಯನ್ನು ಅಂಗೀಕರಿಸಿದ ಜಾಗತಿಕ ಸಂರಕ್ಷಣಾ ಸಂಸ್ಥೆ IUCN..!

ಚಿಕ್ಕಬಳ್ಳಾಪುರ: ಜಾಗತಿಕ ಸಂರಕ್ಷಣಾ ಸಂಸ್ಥೆಯಾದ ಅಂತರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ಮಹತ್ವದ ಐತಿಹಾಸಿಕ ನಿರ್ಣಯದಲ್ಲಿ ಮೋಷನ್ 007 – ಮಣ್ಣಿನ ಭದ್ರತಾ ಕಾಯಿದೆಯನ್ನು (Soil Security Law) ಅಂಗೀಕರಿಸಿದ್ದು, ವಿಶ್ವದ ಮೊದಲ ಮಾದರಿ ಮಣ್ಣಿನ ರಕ್ಷಣಾ ಕಾಯಿದೆಯೆನಿಸಿಕೊಂಡಿದೆ.

ಈ ಪ್ರಸ್ತಾವನೆಯನ್ನು ಮಣ್ಣು ಉಳಿಸಿ (ಈಶ ಔಟ್‌ರೀಚ್) ಅಭಿಯಾನ ಮತ್ತು ಪೇಸ್ ವಿಶ್ವವಿದ್ಯಾಲಯದ ಎಲಿಸಬೆತ್ ಹೌಬ್ ಲಾ ಶಾಲೆಯ ಗ್ಲೋಬಲ್ ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಲೀಗಲ್ ಸ್ಟಡೀಸ್ (ಅಮೇರಿಕಾ) ಸಹ ಪ್ರಾಯೋಜಿಸಿದ್ದು, ಆಸ್ಟ್ರೇಲಿಯಾದ ಔರೋರಾ ಸಾಯಿಲ್ ಸೆಕ್ಯುರಿಟಿ ಥಿಂಕ್ ಟ್ಯಾಂಕ್ ಸಹ ಪ್ರಮುಖ ಪಾತ್ರವಹಿಸಿದೆ.

007 ನಿರ್ಣಯವು ಮಣ್ಣಿಗೆ ದೊರೆತ ಐತಿಹಾಸಿಕ ಜಯವಾಗಿದ್ದು, ವಿಶ್ವದಾದ್ಯಂತ ಜನರು ಮಣ್ಣಿನ ಪರವಾಗಿ ಶ್ರಮ, ಪ್ರೀತಿ ಮತ್ತು ತ್ಯಾಗದಿಂದ ಮಾಡಿದ ಹೋರಾಟದ ಫಲ. ಮೊಟ್ಟ ಮೊದಲ ಬಾರಿಗೆ ಜಾಗತಿಕ ಸಂರಕ್ಷಣಾ ಸಂಸ್ಥೆಯೊಂದು ಮಣ್ಣಿನ ಭದ್ರತೆಯನ್ನು ಆಹಾರ, ನೀರು, ಜೀವವೈವಿಧ್ಯತೆ ಮತ್ತು ಹವಾಮಾನ ಸ್ಥೈರ್ಯತೆಗೆ ಆಧಾರವೆಂದು ಅಧಿಕೃತವಾಗಿ ಗುರುತಿಸಿದೆ.

ಇದರಿಂದ ವಿಶ್ವದಾದ್ಯಂತ ಇನ್ನಷ್ಟು ಪ್ರಬಲ ಕಾನೂನಾತ್ಮಕ ಮಣ್ಣು ಸಂರಕ್ಷಣಾ ವಿಧಾನಗಳು ರೂಪುಗೊಳ್ಳಲಿವೆ. ಎಂದು ಮಣ್ಣು ಉಳಿಸಿ ಅಭಿಯಾನದ ಮುಖ್ಯ ವಿಜ್ಞಾನ ಮತ್ತು ತಾಂತ್ರಿಕ ಅಧಿಕಾರಿಗಳಾದ ಪ್ರವೀನಾ ಶ್ರೀಧರ್ ಅವರು ಹೇಳಿದರು.

ಈ ಐತಿಹಾಸಿಕ ನಿರ್ಣಯದ ಹಿನ್ನೆಲೆಯಲ್ಲಿ ಸದ್ಗುರುಗಳು Xನಲ್ಲಿ “ಇದು ಮಣ್ಣಿನ ಸಮಗ್ರ ಮತ್ತು ಬದ್ಧತೆಯಿಂದ ಕೂಡಿದ ರಕ್ಷಣೆಯ ಅಗತ್ಯತೆಯನ್ನು ಜಾಗತಿಕವಾಗಿ ಗುರುತಿಸುವ ಮಹತ್ವದ ಹೆಜ್ಜೆ. ಈಗ ನಿಜವಾದ ಕೆಲಸ ಆರಂಭವಾಗಲಿದೆ — ಮಣ್ಣಿಗಾಗಿ, ರೈತರಿಗಾಗಿ, ಎಲ್ಲಾ ಜೀವಿಗಳಿಗಾಗಿ ಮತ್ತು ನಮ್ಮ ಭವಿಷ್ಯಕ್ಕಾಗಿ ಎಲ್ಲರೂ ಕೂಡಿಬರೋಣ.”

ಈಶ ಫೌಂಡೇಶನ್ ನ ಪರವಾಗಿ IUCN ಸದಸ್ಯತ್ವಕ್ಕೆ, ಪ್ರಸ್ತಾಪಕರಿಗೆ, ಮಣ್ಣು ಉಳಿಸಿ ಅಭಿಯಾನವನ್ನೊಳಗೊಂಡಂತೆ ಸಹ ಪ್ರಾಯೋಜಕರಿಗೆ ಹಾಗೂ ಅಬುಧಾಬಿಯ ವಿಶ್ವ ಸಂರಕ್ಷಣಾ ಮಹಾಸಭೆಯಲ್ಲಿ ಶ್ರಮಿಸಿದ ಎಲ್ಲ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

007ನಿರ್ಣಯದ ಅಂಗೀಕಾರದೊಂದಿಗೆ IUCN ಈಗ ಮಣ್ಣಿನ ಭದ್ರತೆಯ ಕುರಿತು ಅಂತರಾಷ್ಟ್ರೀಯ ಒಪ್ಪಂದ ಅಥವಾ ಕಾನೂನು ಸಾಧನ ರೂಪಿಸಲು ಕಾರ್ಯಸಮಿತಿಯನ್ನು ರಚಿಸಲಿದ್ದು, ಅದರಿಂದ ಮಾದರಿ ಮಣ್ಣಿನ ಭದ್ರತಾ ಕಾಯಿದೆ ರೂಪಗೊಳ್ಳಲಿದೆ. ಇದನ್ನು 90ಕ್ಕೂ ಹೆಚ್ಚು ಸದಸ್ಯ ರಾಷ್ಟ್ರಗಳು ತಮ್ಮ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲಾಗುವುದು.

ಮಾದರಿ ಮಣ್ಣಿನ ಭದ್ರತಾ ಕಾಯಿದೆ ರಾಷ್ಟ್ರ ಮಟ್ಟದಲ್ಲಿ ಮಣ್ಣಿನ ಸಂರಕ್ಷಣಾ ಕ್ರಮಗಳನ್ನು ಕೃಷಿ, ಹವಾಮಾನ ಮತ್ತು ಪರಿಸರ ನೀತಿಗಳಲ್ಲಿ ಅಳವಡಿಸಿಕೊಳ್ಳಲು ಮಾರ್ಗದರ್ಶಿಯಾಗಲಿದೆ. ರೈತರ ಜೀವನೋಪಾಯವನ್ನು ರಕ್ಷಿಸುವುದರ ಜೊತೆಗೆ ಪರಿಸರದ ಮೂಲಾಧಾರವಾದ ಮಣ್ಣಿನ ಜೀವಶಕ್ತಿಯನ್ನು ಪೀಳಿಗೆಯಿಂದ ಪೀಳಿಗೆಗೆ ಸುಭದ್ರಗೊಳಿಸುವುದು ಇದರ ಉದ್ದೇಶವಾಗಿದೆ.

2025ರ ಜನವರಿಯಿಂದಲೇ ಮಣ್ಣು ಉಳಿಸಿ ಅಭಿಯಾನ ಮತ್ತು ಅದರ ಸಹಭಾಗಿಗಳು ಫ್ರಾನ್ಸ್, ಜರ್ಮನಿ, ಜಪಾನ್, ಮತ್ತು ಕೆನಡಾ ಸೇರಿದಂತೆ ಅನೇಕ ಸರ್ಕಾರಗಳ ಪ್ರತಿನಿಧಿಗಳೊಂದಿಗೆ ಅನೇಕ ಚರ್ಚೆ ಮತ್ತು ವಿಚಾರಗೋಷ್ಠಿಗಳಲ್ಲಿ ಪಾಲ್ಗೊಂಡು, ಸಮಗ್ರ ಕಾನೂನಾತ್ಮಕ ಮಣ್ಣು ಸಂರಕ್ಷಣೆಯ ಅಗತ್ಯತೆ ಕುರಿತು ಜಾಗತಿಕ ಜಾಗೃತಿ ಅಭಿಯಾನಗಳನ್ನು ಆಯೋಜಿಸಿದ್ದರು.

ಅಬುಧಾಬಿಯಲ್ಲಿ ನಡೆದ ಇತ್ತೀಚಿನ IUCN ಮಹಾಸಭೆಯಲ್ಲಿ, ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರು ಮತ್ತು ಸಹಭಾಗಿಗಳು ಮಣ್ಣಿನ ಭದ್ರತಾ ಕಾಯ್ದೆಯ ಪ್ರಸ್ತಾವನೆಗಾಗಿ ಅವಿಶ್ರಾಂತ ಅಭಿಯಾನ ನಡೆಸಿದರು. 87.1% ಸರ್ಕಾರಿ ಸದಸ್ಯರು, 95.45% ಎನ್‌ಜಿಒ ಮತ್ತು ಆದಿವಾಸಿ ಗುಂಪುಗಳು ಇದರ ಪರವಾಗಿ ಮತಹಾಕಿದ ಪರಿಣಾಮವಾಗಿ IUCN ಸದಸ್ಯರು ಬಹುಮತದಿಂದ ನಿರ್ಣಯವನ್ನು ಅಂಗೀಕರಿಸಿದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!