Global conservation organization IUCN adopts Soil Security Act..!

ಮಣ್ಣಿನ ಭದ್ರತಾ ಕಾಯಿದೆಯನ್ನು ಅಂಗೀಕರಿಸಿದ ಜಾಗತಿಕ ಸಂರಕ್ಷಣಾ ಸಂಸ್ಥೆ IUCN..!

ಚಿಕ್ಕಬಳ್ಳಾಪುರ: ಜಾಗತಿಕ ಸಂರಕ್ಷಣಾ ಸಂಸ್ಥೆಯಾದ ಅಂತರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ಮಹತ್ವದ ಐತಿಹಾಸಿಕ ನಿರ್ಣಯದಲ್ಲಿ ಮೋಷನ್ 007 – ಮಣ್ಣಿನ ಭದ್ರತಾ ಕಾಯಿದೆಯನ್ನು (Soil Security Law) ಅಂಗೀಕರಿಸಿದ್ದು, ವಿಶ್ವದ ಮೊದಲ ಮಾದರಿ ಮಣ್ಣಿನ ರಕ್ಷಣಾ ಕಾಯಿದೆಯೆನಿಸಿಕೊಂಡಿದೆ.

ಈ ಪ್ರಸ್ತಾವನೆಯನ್ನು ಮಣ್ಣು ಉಳಿಸಿ (ಈಶ ಔಟ್‌ರೀಚ್) ಅಭಿಯಾನ ಮತ್ತು ಪೇಸ್ ವಿಶ್ವವಿದ್ಯಾಲಯದ ಎಲಿಸಬೆತ್ ಹೌಬ್ ಲಾ ಶಾಲೆಯ ಗ್ಲೋಬಲ್ ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಲೀಗಲ್ ಸ್ಟಡೀಸ್ (ಅಮೇರಿಕಾ) ಸಹ ಪ್ರಾಯೋಜಿಸಿದ್ದು, ಆಸ್ಟ್ರೇಲಿಯಾದ ಔರೋರಾ ಸಾಯಿಲ್ ಸೆಕ್ಯುರಿಟಿ ಥಿಂಕ್ ಟ್ಯಾಂಕ್ ಸಹ ಪ್ರಮುಖ ಪಾತ್ರವಹಿಸಿದೆ.

007 ನಿರ್ಣಯವು ಮಣ್ಣಿಗೆ ದೊರೆತ ಐತಿಹಾಸಿಕ ಜಯವಾಗಿದ್ದು, ವಿಶ್ವದಾದ್ಯಂತ ಜನರು ಮಣ್ಣಿನ ಪರವಾಗಿ ಶ್ರಮ, ಪ್ರೀತಿ ಮತ್ತು ತ್ಯಾಗದಿಂದ ಮಾಡಿದ ಹೋರಾಟದ ಫಲ. ಮೊಟ್ಟ ಮೊದಲ ಬಾರಿಗೆ ಜಾಗತಿಕ ಸಂರಕ್ಷಣಾ ಸಂಸ್ಥೆಯೊಂದು ಮಣ್ಣಿನ ಭದ್ರತೆಯನ್ನು ಆಹಾರ, ನೀರು, ಜೀವವೈವಿಧ್ಯತೆ ಮತ್ತು ಹವಾಮಾನ ಸ್ಥೈರ್ಯತೆಗೆ ಆಧಾರವೆಂದು ಅಧಿಕೃತವಾಗಿ ಗುರುತಿಸಿದೆ.

ಇದರಿಂದ ವಿಶ್ವದಾದ್ಯಂತ ಇನ್ನಷ್ಟು ಪ್ರಬಲ ಕಾನೂನಾತ್ಮಕ ಮಣ್ಣು ಸಂರಕ್ಷಣಾ ವಿಧಾನಗಳು ರೂಪುಗೊಳ್ಳಲಿವೆ. ಎಂದು ಮಣ್ಣು ಉಳಿಸಿ ಅಭಿಯಾನದ ಮುಖ್ಯ ವಿಜ್ಞಾನ ಮತ್ತು ತಾಂತ್ರಿಕ ಅಧಿಕಾರಿಗಳಾದ ಪ್ರವೀನಾ ಶ್ರೀಧರ್ ಅವರು ಹೇಳಿದರು.

ಈ ಐತಿಹಾಸಿಕ ನಿರ್ಣಯದ ಹಿನ್ನೆಲೆಯಲ್ಲಿ ಸದ್ಗುರುಗಳು Xನಲ್ಲಿ “ಇದು ಮಣ್ಣಿನ ಸಮಗ್ರ ಮತ್ತು ಬದ್ಧತೆಯಿಂದ ಕೂಡಿದ ರಕ್ಷಣೆಯ ಅಗತ್ಯತೆಯನ್ನು ಜಾಗತಿಕವಾಗಿ ಗುರುತಿಸುವ ಮಹತ್ವದ ಹೆಜ್ಜೆ. ಈಗ ನಿಜವಾದ ಕೆಲಸ ಆರಂಭವಾಗಲಿದೆ — ಮಣ್ಣಿಗಾಗಿ, ರೈತರಿಗಾಗಿ, ಎಲ್ಲಾ ಜೀವಿಗಳಿಗಾಗಿ ಮತ್ತು ನಮ್ಮ ಭವಿಷ್ಯಕ್ಕಾಗಿ ಎಲ್ಲರೂ ಕೂಡಿಬರೋಣ.”

ಈಶ ಫೌಂಡೇಶನ್ ನ ಪರವಾಗಿ IUCN ಸದಸ್ಯತ್ವಕ್ಕೆ, ಪ್ರಸ್ತಾಪಕರಿಗೆ, ಮಣ್ಣು ಉಳಿಸಿ ಅಭಿಯಾನವನ್ನೊಳಗೊಂಡಂತೆ ಸಹ ಪ್ರಾಯೋಜಕರಿಗೆ ಹಾಗೂ ಅಬುಧಾಬಿಯ ವಿಶ್ವ ಸಂರಕ್ಷಣಾ ಮಹಾಸಭೆಯಲ್ಲಿ ಶ್ರಮಿಸಿದ ಎಲ್ಲ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

007ನಿರ್ಣಯದ ಅಂಗೀಕಾರದೊಂದಿಗೆ IUCN ಈಗ ಮಣ್ಣಿನ ಭದ್ರತೆಯ ಕುರಿತು ಅಂತರಾಷ್ಟ್ರೀಯ ಒಪ್ಪಂದ ಅಥವಾ ಕಾನೂನು ಸಾಧನ ರೂಪಿಸಲು ಕಾರ್ಯಸಮಿತಿಯನ್ನು ರಚಿಸಲಿದ್ದು, ಅದರಿಂದ ಮಾದರಿ ಮಣ್ಣಿನ ಭದ್ರತಾ ಕಾಯಿದೆ ರೂಪಗೊಳ್ಳಲಿದೆ. ಇದನ್ನು 90ಕ್ಕೂ ಹೆಚ್ಚು ಸದಸ್ಯ ರಾಷ್ಟ್ರಗಳು ತಮ್ಮ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲಾಗುವುದು.

ಮಾದರಿ ಮಣ್ಣಿನ ಭದ್ರತಾ ಕಾಯಿದೆ ರಾಷ್ಟ್ರ ಮಟ್ಟದಲ್ಲಿ ಮಣ್ಣಿನ ಸಂರಕ್ಷಣಾ ಕ್ರಮಗಳನ್ನು ಕೃಷಿ, ಹವಾಮಾನ ಮತ್ತು ಪರಿಸರ ನೀತಿಗಳಲ್ಲಿ ಅಳವಡಿಸಿಕೊಳ್ಳಲು ಮಾರ್ಗದರ್ಶಿಯಾಗಲಿದೆ. ರೈತರ ಜೀವನೋಪಾಯವನ್ನು ರಕ್ಷಿಸುವುದರ ಜೊತೆಗೆ ಪರಿಸರದ ಮೂಲಾಧಾರವಾದ ಮಣ್ಣಿನ ಜೀವಶಕ್ತಿಯನ್ನು ಪೀಳಿಗೆಯಿಂದ ಪೀಳಿಗೆಗೆ ಸುಭದ್ರಗೊಳಿಸುವುದು ಇದರ ಉದ್ದೇಶವಾಗಿದೆ.

2025ರ ಜನವರಿಯಿಂದಲೇ ಮಣ್ಣು ಉಳಿಸಿ ಅಭಿಯಾನ ಮತ್ತು ಅದರ ಸಹಭಾಗಿಗಳು ಫ್ರಾನ್ಸ್, ಜರ್ಮನಿ, ಜಪಾನ್, ಮತ್ತು ಕೆನಡಾ ಸೇರಿದಂತೆ ಅನೇಕ ಸರ್ಕಾರಗಳ ಪ್ರತಿನಿಧಿಗಳೊಂದಿಗೆ ಅನೇಕ ಚರ್ಚೆ ಮತ್ತು ವಿಚಾರಗೋಷ್ಠಿಗಳಲ್ಲಿ ಪಾಲ್ಗೊಂಡು, ಸಮಗ್ರ ಕಾನೂನಾತ್ಮಕ ಮಣ್ಣು ಸಂರಕ್ಷಣೆಯ ಅಗತ್ಯತೆ ಕುರಿತು ಜಾಗತಿಕ ಜಾಗೃತಿ ಅಭಿಯಾನಗಳನ್ನು ಆಯೋಜಿಸಿದ್ದರು.

ಅಬುಧಾಬಿಯಲ್ಲಿ ನಡೆದ ಇತ್ತೀಚಿನ IUCN ಮಹಾಸಭೆಯಲ್ಲಿ, ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರು ಮತ್ತು ಸಹಭಾಗಿಗಳು ಮಣ್ಣಿನ ಭದ್ರತಾ ಕಾಯ್ದೆಯ ಪ್ರಸ್ತಾವನೆಗಾಗಿ ಅವಿಶ್ರಾಂತ ಅಭಿಯಾನ ನಡೆಸಿದರು. 87.1% ಸರ್ಕಾರಿ ಸದಸ್ಯರು, 95.45% ಎನ್‌ಜಿಒ ಮತ್ತು ಆದಿವಾಸಿ ಗುಂಪುಗಳು ಇದರ ಪರವಾಗಿ ಮತಹಾಕಿದ ಪರಿಣಾಮವಾಗಿ IUCN ಸದಸ್ಯರು ಬಹುಮತದಿಂದ ನಿರ್ಣಯವನ್ನು ಅಂಗೀಕರಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!