Global conservation organization IUCN adopts Soil Security Act..!

ಮಣ್ಣಿನ ಭದ್ರತಾ ಕಾಯಿದೆಯನ್ನು ಅಂಗೀಕರಿಸಿದ ಜಾಗತಿಕ ಸಂರಕ್ಷಣಾ ಸಂಸ್ಥೆ IUCN..!

ಚಿಕ್ಕಬಳ್ಳಾಪುರ: ಜಾಗತಿಕ ಸಂರಕ್ಷಣಾ ಸಂಸ್ಥೆಯಾದ ಅಂತರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ಮಹತ್ವದ ಐತಿಹಾಸಿಕ ನಿರ್ಣಯದಲ್ಲಿ ಮೋಷನ್ 007 – ಮಣ್ಣಿನ ಭದ್ರತಾ ಕಾಯಿದೆಯನ್ನು (Soil Security Law) ಅಂಗೀಕರಿಸಿದ್ದು, ವಿಶ್ವದ ಮೊದಲ ಮಾದರಿ ಮಣ್ಣಿನ ರಕ್ಷಣಾ ಕಾಯಿದೆಯೆನಿಸಿಕೊಂಡಿದೆ.

ಈ ಪ್ರಸ್ತಾವನೆಯನ್ನು ಮಣ್ಣು ಉಳಿಸಿ (ಈಶ ಔಟ್‌ರೀಚ್) ಅಭಿಯಾನ ಮತ್ತು ಪೇಸ್ ವಿಶ್ವವಿದ್ಯಾಲಯದ ಎಲಿಸಬೆತ್ ಹೌಬ್ ಲಾ ಶಾಲೆಯ ಗ್ಲೋಬಲ್ ಸೆಂಟರ್ ಫಾರ್ ಎನ್ವಿರಾನ್‌ಮೆಂಟಲ್ ಲೀಗಲ್ ಸ್ಟಡೀಸ್ (ಅಮೇರಿಕಾ) ಸಹ ಪ್ರಾಯೋಜಿಸಿದ್ದು, ಆಸ್ಟ್ರೇಲಿಯಾದ ಔರೋರಾ ಸಾಯಿಲ್ ಸೆಕ್ಯುರಿಟಿ ಥಿಂಕ್ ಟ್ಯಾಂಕ್ ಸಹ ಪ್ರಮುಖ ಪಾತ್ರವಹಿಸಿದೆ.

007 ನಿರ್ಣಯವು ಮಣ್ಣಿಗೆ ದೊರೆತ ಐತಿಹಾಸಿಕ ಜಯವಾಗಿದ್ದು, ವಿಶ್ವದಾದ್ಯಂತ ಜನರು ಮಣ್ಣಿನ ಪರವಾಗಿ ಶ್ರಮ, ಪ್ರೀತಿ ಮತ್ತು ತ್ಯಾಗದಿಂದ ಮಾಡಿದ ಹೋರಾಟದ ಫಲ. ಮೊಟ್ಟ ಮೊದಲ ಬಾರಿಗೆ ಜಾಗತಿಕ ಸಂರಕ್ಷಣಾ ಸಂಸ್ಥೆಯೊಂದು ಮಣ್ಣಿನ ಭದ್ರತೆಯನ್ನು ಆಹಾರ, ನೀರು, ಜೀವವೈವಿಧ್ಯತೆ ಮತ್ತು ಹವಾಮಾನ ಸ್ಥೈರ್ಯತೆಗೆ ಆಧಾರವೆಂದು ಅಧಿಕೃತವಾಗಿ ಗುರುತಿಸಿದೆ.

ಇದರಿಂದ ವಿಶ್ವದಾದ್ಯಂತ ಇನ್ನಷ್ಟು ಪ್ರಬಲ ಕಾನೂನಾತ್ಮಕ ಮಣ್ಣು ಸಂರಕ್ಷಣಾ ವಿಧಾನಗಳು ರೂಪುಗೊಳ್ಳಲಿವೆ. ಎಂದು ಮಣ್ಣು ಉಳಿಸಿ ಅಭಿಯಾನದ ಮುಖ್ಯ ವಿಜ್ಞಾನ ಮತ್ತು ತಾಂತ್ರಿಕ ಅಧಿಕಾರಿಗಳಾದ ಪ್ರವೀನಾ ಶ್ರೀಧರ್ ಅವರು ಹೇಳಿದರು.

ಈ ಐತಿಹಾಸಿಕ ನಿರ್ಣಯದ ಹಿನ್ನೆಲೆಯಲ್ಲಿ ಸದ್ಗುರುಗಳು Xನಲ್ಲಿ “ಇದು ಮಣ್ಣಿನ ಸಮಗ್ರ ಮತ್ತು ಬದ್ಧತೆಯಿಂದ ಕೂಡಿದ ರಕ್ಷಣೆಯ ಅಗತ್ಯತೆಯನ್ನು ಜಾಗತಿಕವಾಗಿ ಗುರುತಿಸುವ ಮಹತ್ವದ ಹೆಜ್ಜೆ. ಈಗ ನಿಜವಾದ ಕೆಲಸ ಆರಂಭವಾಗಲಿದೆ — ಮಣ್ಣಿಗಾಗಿ, ರೈತರಿಗಾಗಿ, ಎಲ್ಲಾ ಜೀವಿಗಳಿಗಾಗಿ ಮತ್ತು ನಮ್ಮ ಭವಿಷ್ಯಕ್ಕಾಗಿ ಎಲ್ಲರೂ ಕೂಡಿಬರೋಣ.”

ಈಶ ಫೌಂಡೇಶನ್ ನ ಪರವಾಗಿ IUCN ಸದಸ್ಯತ್ವಕ್ಕೆ, ಪ್ರಸ್ತಾಪಕರಿಗೆ, ಮಣ್ಣು ಉಳಿಸಿ ಅಭಿಯಾನವನ್ನೊಳಗೊಂಡಂತೆ ಸಹ ಪ್ರಾಯೋಜಕರಿಗೆ ಹಾಗೂ ಅಬುಧಾಬಿಯ ವಿಶ್ವ ಸಂರಕ್ಷಣಾ ಮಹಾಸಭೆಯಲ್ಲಿ ಶ್ರಮಿಸಿದ ಎಲ್ಲ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.

007ನಿರ್ಣಯದ ಅಂಗೀಕಾರದೊಂದಿಗೆ IUCN ಈಗ ಮಣ್ಣಿನ ಭದ್ರತೆಯ ಕುರಿತು ಅಂತರಾಷ್ಟ್ರೀಯ ಒಪ್ಪಂದ ಅಥವಾ ಕಾನೂನು ಸಾಧನ ರೂಪಿಸಲು ಕಾರ್ಯಸಮಿತಿಯನ್ನು ರಚಿಸಲಿದ್ದು, ಅದರಿಂದ ಮಾದರಿ ಮಣ್ಣಿನ ಭದ್ರತಾ ಕಾಯಿದೆ ರೂಪಗೊಳ್ಳಲಿದೆ. ಇದನ್ನು 90ಕ್ಕೂ ಹೆಚ್ಚು ಸದಸ್ಯ ರಾಷ್ಟ್ರಗಳು ತಮ್ಮ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲಾಗುವುದು.

ಮಾದರಿ ಮಣ್ಣಿನ ಭದ್ರತಾ ಕಾಯಿದೆ ರಾಷ್ಟ್ರ ಮಟ್ಟದಲ್ಲಿ ಮಣ್ಣಿನ ಸಂರಕ್ಷಣಾ ಕ್ರಮಗಳನ್ನು ಕೃಷಿ, ಹವಾಮಾನ ಮತ್ತು ಪರಿಸರ ನೀತಿಗಳಲ್ಲಿ ಅಳವಡಿಸಿಕೊಳ್ಳಲು ಮಾರ್ಗದರ್ಶಿಯಾಗಲಿದೆ. ರೈತರ ಜೀವನೋಪಾಯವನ್ನು ರಕ್ಷಿಸುವುದರ ಜೊತೆಗೆ ಪರಿಸರದ ಮೂಲಾಧಾರವಾದ ಮಣ್ಣಿನ ಜೀವಶಕ್ತಿಯನ್ನು ಪೀಳಿಗೆಯಿಂದ ಪೀಳಿಗೆಗೆ ಸುಭದ್ರಗೊಳಿಸುವುದು ಇದರ ಉದ್ದೇಶವಾಗಿದೆ.

2025ರ ಜನವರಿಯಿಂದಲೇ ಮಣ್ಣು ಉಳಿಸಿ ಅಭಿಯಾನ ಮತ್ತು ಅದರ ಸಹಭಾಗಿಗಳು ಫ್ರಾನ್ಸ್, ಜರ್ಮನಿ, ಜಪಾನ್, ಮತ್ತು ಕೆನಡಾ ಸೇರಿದಂತೆ ಅನೇಕ ಸರ್ಕಾರಗಳ ಪ್ರತಿನಿಧಿಗಳೊಂದಿಗೆ ಅನೇಕ ಚರ್ಚೆ ಮತ್ತು ವಿಚಾರಗೋಷ್ಠಿಗಳಲ್ಲಿ ಪಾಲ್ಗೊಂಡು, ಸಮಗ್ರ ಕಾನೂನಾತ್ಮಕ ಮಣ್ಣು ಸಂರಕ್ಷಣೆಯ ಅಗತ್ಯತೆ ಕುರಿತು ಜಾಗತಿಕ ಜಾಗೃತಿ ಅಭಿಯಾನಗಳನ್ನು ಆಯೋಜಿಸಿದ್ದರು.

ಅಬುಧಾಬಿಯಲ್ಲಿ ನಡೆದ ಇತ್ತೀಚಿನ IUCN ಮಹಾಸಭೆಯಲ್ಲಿ, ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರು ಮತ್ತು ಸಹಭಾಗಿಗಳು ಮಣ್ಣಿನ ಭದ್ರತಾ ಕಾಯ್ದೆಯ ಪ್ರಸ್ತಾವನೆಗಾಗಿ ಅವಿಶ್ರಾಂತ ಅಭಿಯಾನ ನಡೆಸಿದರು. 87.1% ಸರ್ಕಾರಿ ಸದಸ್ಯರು, 95.45% ಎನ್‌ಜಿಒ ಮತ್ತು ಆದಿವಾಸಿ ಗುಂಪುಗಳು ಇದರ ಪರವಾಗಿ ಮತಹಾಕಿದ ಪರಿಣಾಮವಾಗಿ IUCN ಸದಸ್ಯರು ಬಹುಮತದಿಂದ ನಿರ್ಣಯವನ್ನು ಅಂಗೀಕರಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!