ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

New cap for Karnataka Police..!

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕರೆ ನೀಡಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.

ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಕರೆ ನೀಡಿದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ಕರೆ ನೀಡಿದರು.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಕರೆ ನೀಡಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಕರೆ ನೀಡಿದರು.

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ, ಶಾಸಕರಾದ ರಿಜ್ವಾನ್ ಅರ್ಷದ್, ಅಶೋಕ್ ಪಟ್ಟಣ, ಎಂಎಲ್ಸಿ ನಜೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಮ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!