Modi government that doesn't provide jobs... is telling youth to do reels: Rahul Gandhi

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಪಾಟ್ನಾ: ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ ಯುವ ಸಮುದಾಯ ಹಣಗಳಿಸುತ್ತಿದ್ದಾರೆ ಎಂದಿರುವುದು ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

ಹೌದು ಬಿಹಾರ ಚುನಾವಣೆಗೆ (Bihar election) ದಿನಗಣನೆ ಆರಂಭವಾದಂತೆ ಎನ್‌ಡಿಎ ಹಾಗೂ ಇಂಡಿಯಾ ಬಣದ ನಡುವಿನ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ.

ಕುಟುಂಬ ರಾಜಕಾರಣದ ಕುರಿತು ಅಮಿತ್ ಶಾ ವಾಗ್ದಾಳಿ ನಡೆಸಿದ್ದರೆ, ಕೇಂದ್ರ ಸರ್ಕಾರ ಉದ್ಯೋಗ ನೀಡದೆ ಇನ್ಸ್ಟಾಗ್ರಾಮ್ ಮೂಲಕ ರೀಲ್ಸ್ ಮಾಡಿ ಹಣ ಸಂಪಾದನೆ ಮಾಡಬಹುದು ಎನ್ನುವ ಪ್ರಧಾನಿ ಮೋದಿ ಅವರು ಮೂಲಕ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ಬಿಹಾರದ ಮತದಾರರು ನರೇಂದ್ರ ಮೋದಿ ಅವರ ನಾಟಕಕ್ಕೆ ಮರುಳಾಗಬಾರದು. ನಿಮ್ಮ ಓಟಿಗಾಗಿ ಅವರು ವೇದಿಕೆ ಮೇಲೆ ನೃತ್ಯ ಮಾಡಲೂ ಸಹ ಸಿದ್ದರಾಗಿರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಣಕವಾಡಿದ್ದಾರೆ.

ಬಿಹಾರ ಚುನಾವಣಾ ಕಣದಲ್ಲಿನ ತಮ್ಮ ಮೊದಲ ಪ್ರಚಾರವನ್ನು ಮುಜಾಫರ್‌ಪುರ ಜಿಲ್ಲೆಯಲ್ಲಿ ಬುಧವಾರ ಆರಂಭಿಸಿದ ರಾಹುಲ್ ಗಾಂಧಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮುಖವನ್ನು ಬಳಸಿಕೊಳ್ಳುವ ಮೂಲಕ ಬಿಜೆಪಿ ಬಿಹಾರದಲ್ಲಿನ ಎನ್‌ಡಿಎ ಮೈತ್ರಿಕೂಟ ಸರಕಾರವನ್ನು ‘ರಿಮೋಟ್ ಕಂಟ್ರೋಲ್ ಮೂಲಕ’ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ‘ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ’. ಆದರೆ, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದು ನರೇಂದ್ರ ಮೋದಿ ಸರಕಾರ ಜಾತಿ ಗಣತಿಗೆ ಒಪ್ಪಿಕೊಂಡಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ‌10 ವರ್ಷದಿಂದ ಯಮುನಾ ನದಿ ಸ್ವಚ್ಚಗೊಳಿಸದ ಸರ್ಕಾರ, ಪೈಪ್ ಮೂಲಕ ಗಂಗಾ ನದಿಯನ್ನು ತಂದು, ಜನರನ್ನು ದಾರಿತಪ್ಪಿಸಲು ಮುಂದಾಗಿದೆ.

ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮೋದಿ ಕಾರ್ಯಕ್ರಮ ರದ್ದಾಗಿದೆ. ದೇಶದಲ್ಲಿ ಎರಡು ಬಗೆಯ ಭಾರತ ಉದಯಿಸಿವೆ. ಒಂದು ಸಾಮಾನ್ಯ ಜನರಿಗೆ ಸೇರಿದ್ದಾಗಿದ್ದರೆ, ಇನ್ನೊಂದು 5-10 ಶತಕೋಟ್ಯಾಧಿಪತಿಗಳಿಗೆ ಸೇರಿದ ಭಾರತವಾಗಿದೆ.

ಬಿಹಾರದಂತಹ ರಾಜ್ಯ ಬಡತನದಲ್ಲಿ ಬಳಲುತ್ತಿರುವುದಕ್ಕೆ ಇದೇ ಕಾರಣವಾಗಿದೆ. ನಿಜವಾಗಿ ಬಿಹಾರದಲ್ಲಿ ಅಗಾಧ ಸಾಮರ್ಥ್ಯವಿದೆ. ಆದರೆ, ಅದನ್ನು ಇನ್ನೂ ಬಳಸಿಕೊಳ್ಳಲಾಗಿಲ್ಲ ಎಂದು ರಾಹುಲ್ ವಿಷಾದಿಸಿದರು.

ಬಿಹಾರದ ಜನರು ದುಬೈ, ಮಾರಿಷಸ್, ಸೀಶೆಲ್ಸ್ ಮತ್ತು ಅಮೆರಿಕ ಮೊದಲಾದೆಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಹಾರದ ಜನತೆ ಅವರ ಸಂಪೂರ್ಣ ಸಾಮರ್ಥ್ಯ ವನ್ನು ಬಳಸಿಕೊಳ್ಳಬೇಕು ಎಂದು ಹುರಿದುಂಬಿಸಿದರು.

‘ಜನರಿಗೆ ಅಗ್ಗವಾಗಿ ಡೇಟಾ ಲಭ್ಯವಾಗುವಂತೆ ಮಾಡಿರುವುದಾಗಿ ಮೋದಿ ಹೆಮ್ಮೆಪಡುತ್ತಾರೆ. ಆದರೆ, ದೂರಸಂಪರ್ಕ ವಲಯದಲ್ಲಿ ಒಂದು ವ್ಯವಹಾರ ಸಂಸ್ಥೆಯ ಏಕಸ್ವಾಮ್ಯಕ್ಕೆ ಅವಕಾಶ ನೀಡಲಾಗಿದೆ ಎಂಬ ಅಂಶವನ್ನು ಅವರು ಮರೆಮಾಡುತ್ತಾರೆ ಎಂದು ಟೀಕಿಸಿದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!