Modi government that doesn't provide jobs... is telling youth to do reels: Rahul Gandhi

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಪಾಟ್ನಾ: ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ ಯುವ ಸಮುದಾಯ ಹಣಗಳಿಸುತ್ತಿದ್ದಾರೆ ಎಂದಿರುವುದು ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

ಹೌದು ಬಿಹಾರ ಚುನಾವಣೆಗೆ (Bihar election) ದಿನಗಣನೆ ಆರಂಭವಾದಂತೆ ಎನ್‌ಡಿಎ ಹಾಗೂ ಇಂಡಿಯಾ ಬಣದ ನಡುವಿನ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ.

ಕುಟುಂಬ ರಾಜಕಾರಣದ ಕುರಿತು ಅಮಿತ್ ಶಾ ವಾಗ್ದಾಳಿ ನಡೆಸಿದ್ದರೆ, ಕೇಂದ್ರ ಸರ್ಕಾರ ಉದ್ಯೋಗ ನೀಡದೆ ಇನ್ಸ್ಟಾಗ್ರಾಮ್ ಮೂಲಕ ರೀಲ್ಸ್ ಮಾಡಿ ಹಣ ಸಂಪಾದನೆ ಮಾಡಬಹುದು ಎನ್ನುವ ಪ್ರಧಾನಿ ಮೋದಿ ಅವರು ಮೂಲಕ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ಬಿಹಾರದ ಮತದಾರರು ನರೇಂದ್ರ ಮೋದಿ ಅವರ ನಾಟಕಕ್ಕೆ ಮರುಳಾಗಬಾರದು. ನಿಮ್ಮ ಓಟಿಗಾಗಿ ಅವರು ವೇದಿಕೆ ಮೇಲೆ ನೃತ್ಯ ಮಾಡಲೂ ಸಹ ಸಿದ್ದರಾಗಿರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಣಕವಾಡಿದ್ದಾರೆ.

ಬಿಹಾರ ಚುನಾವಣಾ ಕಣದಲ್ಲಿನ ತಮ್ಮ ಮೊದಲ ಪ್ರಚಾರವನ್ನು ಮುಜಾಫರ್‌ಪುರ ಜಿಲ್ಲೆಯಲ್ಲಿ ಬುಧವಾರ ಆರಂಭಿಸಿದ ರಾಹುಲ್ ಗಾಂಧಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮುಖವನ್ನು ಬಳಸಿಕೊಳ್ಳುವ ಮೂಲಕ ಬಿಜೆಪಿ ಬಿಹಾರದಲ್ಲಿನ ಎನ್‌ಡಿಎ ಮೈತ್ರಿಕೂಟ ಸರಕಾರವನ್ನು ‘ರಿಮೋಟ್ ಕಂಟ್ರೋಲ್ ಮೂಲಕ’ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ‘ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ’. ಆದರೆ, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದು ನರೇಂದ್ರ ಮೋದಿ ಸರಕಾರ ಜಾತಿ ಗಣತಿಗೆ ಒಪ್ಪಿಕೊಂಡಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ‌10 ವರ್ಷದಿಂದ ಯಮುನಾ ನದಿ ಸ್ವಚ್ಚಗೊಳಿಸದ ಸರ್ಕಾರ, ಪೈಪ್ ಮೂಲಕ ಗಂಗಾ ನದಿಯನ್ನು ತಂದು, ಜನರನ್ನು ದಾರಿತಪ್ಪಿಸಲು ಮುಂದಾಗಿದೆ.

ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮೋದಿ ಕಾರ್ಯಕ್ರಮ ರದ್ದಾಗಿದೆ. ದೇಶದಲ್ಲಿ ಎರಡು ಬಗೆಯ ಭಾರತ ಉದಯಿಸಿವೆ. ಒಂದು ಸಾಮಾನ್ಯ ಜನರಿಗೆ ಸೇರಿದ್ದಾಗಿದ್ದರೆ, ಇನ್ನೊಂದು 5-10 ಶತಕೋಟ್ಯಾಧಿಪತಿಗಳಿಗೆ ಸೇರಿದ ಭಾರತವಾಗಿದೆ.

ಬಿಹಾರದಂತಹ ರಾಜ್ಯ ಬಡತನದಲ್ಲಿ ಬಳಲುತ್ತಿರುವುದಕ್ಕೆ ಇದೇ ಕಾರಣವಾಗಿದೆ. ನಿಜವಾಗಿ ಬಿಹಾರದಲ್ಲಿ ಅಗಾಧ ಸಾಮರ್ಥ್ಯವಿದೆ. ಆದರೆ, ಅದನ್ನು ಇನ್ನೂ ಬಳಸಿಕೊಳ್ಳಲಾಗಿಲ್ಲ ಎಂದು ರಾಹುಲ್ ವಿಷಾದಿಸಿದರು.

ಬಿಹಾರದ ಜನರು ದುಬೈ, ಮಾರಿಷಸ್, ಸೀಶೆಲ್ಸ್ ಮತ್ತು ಅಮೆರಿಕ ಮೊದಲಾದೆಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಹಾರದ ಜನತೆ ಅವರ ಸಂಪೂರ್ಣ ಸಾಮರ್ಥ್ಯ ವನ್ನು ಬಳಸಿಕೊಳ್ಳಬೇಕು ಎಂದು ಹುರಿದುಂಬಿಸಿದರು.

‘ಜನರಿಗೆ ಅಗ್ಗವಾಗಿ ಡೇಟಾ ಲಭ್ಯವಾಗುವಂತೆ ಮಾಡಿರುವುದಾಗಿ ಮೋದಿ ಹೆಮ್ಮೆಪಡುತ್ತಾರೆ. ಆದರೆ, ದೂರಸಂಪರ್ಕ ವಲಯದಲ್ಲಿ ಒಂದು ವ್ಯವಹಾರ ಸಂಸ್ಥೆಯ ಏಕಸ್ವಾಮ್ಯಕ್ಕೆ ಅವಕಾಶ ನೀಡಲಾಗಿದೆ ಎಂಬ ಅಂಶವನ್ನು ಅವರು ಮರೆಮಾಡುತ್ತಾರೆ ಎಂದು ಟೀಕಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!