Chemical spill mock-up demonstration successful in Doddaballapur

ದೊಡ್ಡಬಳ್ಳಾಪುರದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಯಶಸ್ವಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು (Chemical spill mock-up demonstration) ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 20 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 02 ಆಂಬ್ಯುಲೆನ್ಸ್, 07 ಬಸ್ ಗಳು, ವೈದ್ಯರು, ದಾದಿಯರು, ವೀಕ್ಷಕರು ಮತ್ತು ವಿವಿಧ ಕಾರ್ಖಾನೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು.

DDMA ಯ ಸಹಾಯದಿಂದ ಪುನರ್ವಸತಿ ಕೇಂದ್ರಗಳಿಗೆ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೈಗಾರಿಕಾ ಪ್ರದೇಶಕ್ಕೆ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು ಮತ್ತು ಪಕ್ಕದ ಕಾರ್ಖಾನೆಯಾದ Grover Jumpper Vineryard ಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಡಿ-ಬೀಫಿಂಗ್ ನಡೆಸಲಾಯಿತು.

ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು.

ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ ಕಾರ್ಖಾನೆಯಲ್ಲಿ ಸುಮಾರು 265 ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಿ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿಯಿರುವ ಪುನರ್ವಸತಿ ಕೇಂದ್ರಗಳಾದ ಅಂಬೇಡ್ಕರ್ ಭವನ ಮತ್ತು ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಯಿತು.

ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪ್ರದೇಶದ ಮಾರ್ಗಗಳನ್ನು DDMA ಯ ಸಹಯೋಗದೊಂದಿಗೆ ಸುತ್ತುವರಿದು ಟ್ರಾಫಿಕ್ ನಿಯಂತ್ರಿಸಲಾಯಿತು.

ಈ ಸಮಯದಲ್ಲಿ 02 ಕಾರ್ಮಿಕರು ಮೃತಪಟ್ಟಿದ್ದು, ಸಣ್ಣ-ಪುಟ್ಟ ಗಾಯಗಳಾಗಿರುವ 08 ಕಾರ್ಮಿಕರನ್ನು, ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಅತೀ ಹೆಚ್ಚು ಗಾಯಗಳಾದ 02 ಕಾರ್ಮಿಕರನ್ನು ವಿಕ್ಟೋರಿಯಾ ಮತ್ತು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಇದಲ್ಲದೆ, ಡ್ರಿಲ್ ಮಾಡುವಾಗ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳು, ಸಂಪನ್ಮೂಲಗಳ ಅವಶ್ಯಕತೆ, ಕಾರ್ಮಿಕರ ಮತ್ತು ಕಾರ್ಖಾನೆಗಳ ಸುರಕ್ಷತೆ, ಕಾರ್ಖಾನೆ ಸುತ್ತಮುತ್ತಲಿನ ಕಾರ್ಮಿಕರ ಮತ್ತು ಜನಗಳ ಜಾಗರೂಕತೆ ಇತ್ಯಾದಿಗಳ ವಿಷಯಗಳ ಕುರಿತಂತೆ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಭಾಗಿದಾರರಿಂದ ಪಡೆಯಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

ಅಣುಕು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಎನ್, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ ಎ ಸೋಮಶೇಖರ್, ನರಸಿಂಹಮೂರ್ತಿ ಎಸ್ಎ, , ವಿ ತಿಮ್ಮರಾಜು, ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕರಾದ ಸುಧಾಕರ್ ಚೌಹಾಣ್, ಉಪ ಪ್ರಧಾನ ವ್ಯವಸ್ಥಾಪಕರಾದ ಬಿ ಚಂದ್ರಶೇಖರ್ ಮತ್ತು ಭಾಗೀದಾರ ಇಲಾಖೆಗಳ ಪ್ರತಿನಿಧಿಗಳು, ವೀಕ್ಷಕರು ಮತ್ತು ವಿಪತ್ತು ನಿರ್ವಹಣಾ ತಜ್ಞೆ ಸ್ಮಿತಾ ಟಿ.ಎಲ್ ಭಾಗವಹಿಸಿದ್ದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!