India enters final

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಮುಂಬೈ: ಜೆಮಿಮಾ ರೊಡ್ರಿಗಸ್ ಅವರ ಅಜೇಯ ಭರ್ಜರಿ ಶತಕ ಹಾಗೂ ಹರ್ಮನ್‌ಪ್ರೀತ್ ಕೌ‌ರ್ ಅವರ ಅರ್ಧಶತಕದ ಬಲದಿಂದ ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women’s ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ಈ ಮೂಲಕ ಲೀಗ್ ಹಂತದಲ್ಲಿನ ಆಸೀಸ್ ವಿರುದ್ದದ ಸೋಲಿನ ಸೇಡನ್ನು ಭಾರತೀಯ ವನಿತೆಯರು ಗುರುವಾರ ತೀರಿಸಿಕೊಂಡರು. ಫೋಬೆ ಲಿಚ್‌ ಫೀಲ್ಸ್ ಶತಕದ ಹೊರತಾಗಿಯೂ ಸೋತು ಆಸೀಸ್‌ನ ಎಂಟನೇ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಯಿತು.

ಇಲ್ಲಿನ ಡಿ.ವೈ ಪಾಟೀಲ್ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ನೀಡಿದ್ದ 339 ರನ್‌ಗಳ ಕಠಿಣ ಗುರಿಯನ್ನು ಬೆಂಬತ್ತಿದ ಭಾರತ ತಂಡ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಆದರೆ ಜೆಮಿಮಾ ರೊಡ್ರಿಗಸ್ ಹಾಗೂ ಹರ್ಮನ್‌ ಪ್ರೀತ್ ಕೌರ್ ಅವರ 167 ರನ್‌ಗಳ ಜತೆಯಾಟದ ಬಲದಿಂದ 48.3 ಓವರ್ ಗಳಿಗೆ 4 ವಿಕೆಟ್ ನಷ್ಟಕ್ಕೆ 341 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಈ ಗೆಲುವಿನ ಮೂಲಕ ಭಾರತ ಮಹಿಳಾ ತಂಡದ ಚೊಚ್ಚಲ ಮಹಿಳಾ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಜೀವಂತವಾಗಿ ಉಳಿದುಕೊಂಡಿದೆ. ನವೆಂಬರ್ 2ರಂದು ದಕ್ಷಿಣ ಆಫ್ರಿಕಾ ವಿರುದ್ದ ಭಾರತ ಮಹಿಳಾ ತಂಡವು ಫೈನಲ್ ನಲ್ಲಿ ಕಾದಾಟ ನಡೆಸಲಿದೆ.

ಜೆಮಿಮಾ ಭರ್ಜರಿ ಶತಕ

ಆಸೀಸ್ ನೀಡಿದ ಗುರಿ ಹಿಂಬಾಲಿಸಿದ ಭಾರತ ತಂಡ, 13 ರನ್ ಇದ್ದಾಗ ಶಫಾಲಿ ವರ್ಮಾ ಹಾಗೂ 59 ರನ್‌ಗೆ ಸ್ಮೃತಿ ಮಂಧಾನಾ ಅವರ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಆದರೆ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಅಜೇಯರಾಗಿ ಬ್ಯಾಟ್ ಮಾಡಿದ ಜೆಮಿಮಾ ರೊಡ್ರಿಗಸ್ 134 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 127 ರನ್ (ಅಜೇಯ) ಗಳಿಸಿ ಭಾರತ ತಂಡವನ್ನು ಗೆಲ್ಲಿಸಿದರು.

ನಾಯಕಿ ಹರ್ಮನ್‌ ಪ್ರೀತ್ ಕೌರ್ (89) ಜತೆ 167 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿದರು.

ಅಮೋಘ ಪ್ರದರ್ಶನ ನೀಡಿದ ಜೆಮಿಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ದೀಪ್ತಿ ಶರ್ಮಾ 24 ಹಾಗೂ ರಿಚಾ ಘೋಷ್ 26 ಅವರು ಭಾರತಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

338 ರನ್ ಕಲೆ ಹಾಕಿದ್ದ ಆಸ್ಟ್ರೇಲಿಯಾ: ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಆಸೀಸ್‌ ತಂಡದ ನಾಯಕಿ ಅಲಿಸಾ ಹೀಲಿ (5) ಬಹುಬೇಗ ವಿಕೆಟ್ ಒಪ್ಪಿಸಿದರು. ಫೋಬೆ ಲಿಚ್ ಫೀಲ್ಸ್ ಶತಕ (119 ರನ್) ಮತ್ತು ಎಲಿಸ್ ಪೆರಿ (77) ಹಾಗೂ ಆಲ್ಲೆ ಗಾರ್ಡ್ನರ್ (63) ಅವರ ಅರ್ಧಶತಕಗಳ ಬಲದಿಂದ 49.5 ಓವರ್‌ಗಳಿಗೆ 338 ರನ್‌ ಕಲೆ ಹಾಕಿತು.

ಫೋಬೆ ಲಿಚ್‌ ಫೀಲ್ಡ್‌ ಶತಕ

ಒಂದು ತುದಿಯಲ್ಲಿ ಕ್ರೀಸ್‌ನಲ್ಲಿ ತಳವೂರಿ ಬ್ಯಾಟ್ ಮಾಡಿದ ಲಿಚ್ ಫೀಲ್ಡ್, ಭಾರತೀಯ ಬೌಲರ್‌ಗಳನ್ನು ಮನಬಂದಂತೆ ಕಾಡಿದರು.

ಎರಡನೇ ವಿಕೆಟ್‌ಗೆ ಎಲಿಸ್ ಪೆರ್ರಿ ಮತ್ತು ಫೋಬೆ ಲಿಚ್ ಫೀಲ್ಡ್ ಅವರು 155 ರನ್‌ಗಳ ಜತೆಯಾಟವನ್ನು ಆಡಿದರು. ಆ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಒಂದು ತುದಿಯಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ ಎಲಿಸ್ ಪೆರಿ 88 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 77 ರನ್ ಗಳಿಸಿ. ರಾಧಾ ಯಾದವ್‌ಗೆ ಕ್ಲೀನ್ ಬೌಲ್ಡ್ ಆದರು. ಆಲ್ಲೆ ಗಾರ್ಡ್ನರ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು.

45 ಎಸೆತಗಳಲ್ಲಿ 4 ಸಿಕರ್ ಹಾಗೂ 4 ಬೌಂಡರಿಗಳೊಂದಿಗೆ 63 ರನ್ ಕಲೆ ಹಾಕಿದರು. ಆ ಮೂಲಕ ತಂಡದ ಮೊತ್ತ 330ರ ಗಡಿ ದಾಟಲು ಪ್ರಮುಖ ಪಾತ್ರವನ್ನು ವಹಿಸಿದರು.

ಶ್ರೀಚರಣ ಅದ್ಭುತವಾಗಿ ಬೌಲ್ ಮಾಡಿ ಎರಡು ವಿಕೆಟ್ ಪಡೆದರೆ, ದೀಪ್ತಿ ಶರ್ಮಾ ಸ್ವಲ್ಪ ದುಬಾರಿಯಾದರೂ ಎರಡು ವಿಕೆಟ್ ಪಡೆದರು.

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!