India enters final

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಮುಂಬೈ: ಜೆಮಿಮಾ ರೊಡ್ರಿಗಸ್ ಅವರ ಅಜೇಯ ಭರ್ಜರಿ ಶತಕ ಹಾಗೂ ಹರ್ಮನ್‌ಪ್ರೀತ್ ಕೌ‌ರ್ ಅವರ ಅರ್ಧಶತಕದ ಬಲದಿಂದ ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women’s ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ಈ ಮೂಲಕ ಲೀಗ್ ಹಂತದಲ್ಲಿನ ಆಸೀಸ್ ವಿರುದ್ದದ ಸೋಲಿನ ಸೇಡನ್ನು ಭಾರತೀಯ ವನಿತೆಯರು ಗುರುವಾರ ತೀರಿಸಿಕೊಂಡರು. ಫೋಬೆ ಲಿಚ್‌ ಫೀಲ್ಸ್ ಶತಕದ ಹೊರತಾಗಿಯೂ ಸೋತು ಆಸೀಸ್‌ನ ಎಂಟನೇ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಯಿತು.

ಇಲ್ಲಿನ ಡಿ.ವೈ ಪಾಟೀಲ್ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ನೀಡಿದ್ದ 339 ರನ್‌ಗಳ ಕಠಿಣ ಗುರಿಯನ್ನು ಬೆಂಬತ್ತಿದ ಭಾರತ ತಂಡ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಆದರೆ ಜೆಮಿಮಾ ರೊಡ್ರಿಗಸ್ ಹಾಗೂ ಹರ್ಮನ್‌ ಪ್ರೀತ್ ಕೌರ್ ಅವರ 167 ರನ್‌ಗಳ ಜತೆಯಾಟದ ಬಲದಿಂದ 48.3 ಓವರ್ ಗಳಿಗೆ 4 ವಿಕೆಟ್ ನಷ್ಟಕ್ಕೆ 341 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಈ ಗೆಲುವಿನ ಮೂಲಕ ಭಾರತ ಮಹಿಳಾ ತಂಡದ ಚೊಚ್ಚಲ ಮಹಿಳಾ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಜೀವಂತವಾಗಿ ಉಳಿದುಕೊಂಡಿದೆ. ನವೆಂಬರ್ 2ರಂದು ದಕ್ಷಿಣ ಆಫ್ರಿಕಾ ವಿರುದ್ದ ಭಾರತ ಮಹಿಳಾ ತಂಡವು ಫೈನಲ್ ನಲ್ಲಿ ಕಾದಾಟ ನಡೆಸಲಿದೆ.

ಜೆಮಿಮಾ ಭರ್ಜರಿ ಶತಕ

ಆಸೀಸ್ ನೀಡಿದ ಗುರಿ ಹಿಂಬಾಲಿಸಿದ ಭಾರತ ತಂಡ, 13 ರನ್ ಇದ್ದಾಗ ಶಫಾಲಿ ವರ್ಮಾ ಹಾಗೂ 59 ರನ್‌ಗೆ ಸ್ಮೃತಿ ಮಂಧಾನಾ ಅವರ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಆದರೆ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಅಜೇಯರಾಗಿ ಬ್ಯಾಟ್ ಮಾಡಿದ ಜೆಮಿಮಾ ರೊಡ್ರಿಗಸ್ 134 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 127 ರನ್ (ಅಜೇಯ) ಗಳಿಸಿ ಭಾರತ ತಂಡವನ್ನು ಗೆಲ್ಲಿಸಿದರು.

ನಾಯಕಿ ಹರ್ಮನ್‌ ಪ್ರೀತ್ ಕೌರ್ (89) ಜತೆ 167 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿದರು.

ಅಮೋಘ ಪ್ರದರ್ಶನ ನೀಡಿದ ಜೆಮಿಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ದೀಪ್ತಿ ಶರ್ಮಾ 24 ಹಾಗೂ ರಿಚಾ ಘೋಷ್ 26 ಅವರು ಭಾರತಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

338 ರನ್ ಕಲೆ ಹಾಕಿದ್ದ ಆಸ್ಟ್ರೇಲಿಯಾ: ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಆಸೀಸ್‌ ತಂಡದ ನಾಯಕಿ ಅಲಿಸಾ ಹೀಲಿ (5) ಬಹುಬೇಗ ವಿಕೆಟ್ ಒಪ್ಪಿಸಿದರು. ಫೋಬೆ ಲಿಚ್ ಫೀಲ್ಸ್ ಶತಕ (119 ರನ್) ಮತ್ತು ಎಲಿಸ್ ಪೆರಿ (77) ಹಾಗೂ ಆಲ್ಲೆ ಗಾರ್ಡ್ನರ್ (63) ಅವರ ಅರ್ಧಶತಕಗಳ ಬಲದಿಂದ 49.5 ಓವರ್‌ಗಳಿಗೆ 338 ರನ್‌ ಕಲೆ ಹಾಕಿತು.

ಫೋಬೆ ಲಿಚ್‌ ಫೀಲ್ಡ್‌ ಶತಕ

ಒಂದು ತುದಿಯಲ್ಲಿ ಕ್ರೀಸ್‌ನಲ್ಲಿ ತಳವೂರಿ ಬ್ಯಾಟ್ ಮಾಡಿದ ಲಿಚ್ ಫೀಲ್ಡ್, ಭಾರತೀಯ ಬೌಲರ್‌ಗಳನ್ನು ಮನಬಂದಂತೆ ಕಾಡಿದರು.

ಎರಡನೇ ವಿಕೆಟ್‌ಗೆ ಎಲಿಸ್ ಪೆರ್ರಿ ಮತ್ತು ಫೋಬೆ ಲಿಚ್ ಫೀಲ್ಡ್ ಅವರು 155 ರನ್‌ಗಳ ಜತೆಯಾಟವನ್ನು ಆಡಿದರು. ಆ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಒಂದು ತುದಿಯಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ ಎಲಿಸ್ ಪೆರಿ 88 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 77 ರನ್ ಗಳಿಸಿ. ರಾಧಾ ಯಾದವ್‌ಗೆ ಕ್ಲೀನ್ ಬೌಲ್ಡ್ ಆದರು. ಆಲ್ಲೆ ಗಾರ್ಡ್ನರ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು.

45 ಎಸೆತಗಳಲ್ಲಿ 4 ಸಿಕರ್ ಹಾಗೂ 4 ಬೌಂಡರಿಗಳೊಂದಿಗೆ 63 ರನ್ ಕಲೆ ಹಾಕಿದರು. ಆ ಮೂಲಕ ತಂಡದ ಮೊತ್ತ 330ರ ಗಡಿ ದಾಟಲು ಪ್ರಮುಖ ಪಾತ್ರವನ್ನು ವಹಿಸಿದರು.

ಶ್ರೀಚರಣ ಅದ್ಭುತವಾಗಿ ಬೌಲ್ ಮಾಡಿ ಎರಡು ವಿಕೆಟ್ ಪಡೆದರೆ, ದೀಪ್ತಿ ಶರ್ಮಾ ಸ್ವಲ್ಪ ದುಬಾರಿಯಾದರೂ ಎರಡು ವಿಕೆಟ್ ಪಡೆದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!