Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ

Astrology: ಶನಿವಾರ, ನವೆಂಬರ್ 01, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ. ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರ ಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದಶಮಿ
ನಕ್ಷತ್ರ: ಶತಭಿಷ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು

[ccc_my_favorite_select_button post_id="115587"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!