Awards for deserving ones: Cmsiddaramaiah praises

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಬೆಂಗಳೂರು; ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು.

ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು.

ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದರು.

ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪ ಅವರನ್ನು ಉಲ್ಲೇಖಿಸಿ ಸಮಾಜವಾದಿ ಹೋರಾಟದ ದಿನಗಳನ್ನು ಸ್ಮರಿಸಿದರು.

ಎಲ್ಲಾ ಸಮುದಾಯ, ಕ್ಷೇತ್ರ, ಜಿಲ್ಲೆಗಳ ಸಾಧಕರ ಪರಿಗಣನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಾವು ಗಳಿಸಿದ ಸಂಪತ್ತು ಕ್ಷಣಿಕ. ಆದರೆ ನಾವು ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ” ಹೀಗೆ ಹಲವಾರು ನುಡಿಗಟ್ಟುಗಳನ್ನು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಬಣ್ಣಿಸಿದರು.

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅವರು ಮಾತನಾಡಿದರು.

“ಅನೇಕ ಸಾಧಕರ ಜ್ಞಾನದ ಬಲದಿಂದ ಕರ್ನಾಟಕಕ್ಕೆ ಹೆಸರು ಬಂದಿದೆ. ದೇವರು ವರವನ್ನೂ ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾ‌ನೆ.‌ ಸಿಕ್ಕಂತಹ ಅವಕಾಶ ಬಳಸಿಕೊಂಡು ಸಾಧನೆ ಮಾಡಿದವರು ಇಂದು ನಮ್ಮ ಮುಂದಿದ್ದಾರೆ. ಕನ್ನಡವನ್ನು ಉಸಿರಾಡಿದ, ಬೆಳಗಿದ, ಕನ್ನಡದಲ್ಲಿ ಬದುಕಿದ ಸಾಧಕರಿವರು” ಎಂದರು.

“ಕಣ್ಣಲ್ಲಿ ಕೇಳಿದ್ದು ಸತ್ಯ ಆದರೆ ಕಿವಿಯಲ್ಲಿ ಕೇಳಿದ್ದು ಸುಳ್ಳು ಎನ್ನುವ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಪ್ರಶಸ್ತಿ ಪುರಸ್ಕೃತರಲ್ಲಿನ 13 ಜನ ಸಾಧಕರು ರಾಜ್ಯ ರಾಜಧಾನಿ ಬೆಂಗಳೂರನ್ನೇ ನೋಡಿಲ್ಲ. ಕಡು ಬಡತನದಲ್ಲಿ ಬೆಳೆದಿದ್ದರು ಸಹ ಕಲೆ ಹಾಗೂ ಜನರಿಗಾಗಿ ಬದುಕನ್ನೇ ತ್ಯಾಗ ಮಾಡಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ ಎಲ್ಲಾ ಸ್ತರದವರೂ ಇದ್ದಾರೆ. ಹಿರಿಯರಿದ್ದಾರೆ. ಇಂತಹ ಚೇತನಗಳಿಗೆ ಸನ್ಮಾನ ಮಾಡುವ ಭಾಗ್ಯ ದೊರೆತಿದ್ದು ನನ್ನ ಭಾಗ್ಯ” ಎಂದರು.

“ಪ್ರಶಸ್ತಿಗೆ ಭಾಜನರಾಗಿರುವ ಕೋಣಂದೂರು ಲಿಂಗಪ್ಪನವರು. ನಮ್ಮ ನಡುವಿನ ಹಿರಿಯ ಮುತ್ಸದ್ದಿ. ಇವರು, ಬಂಗಾರಪ್ಪನವರು ಹಾಗೂ ಕಾಗೋಡು ತಿಮ್ಮಪ್ಪನವರು ಮಾತಿಗೆ ನಿಂತರೆ ಇಡೀ ವಿಧಾನಸಭೆಯೇ ನಡುಗುತ್ತಿತ್ತು ಎಂದು ಆಗ ಹೇಳುತ್ತಿದ್ದರು. ಲಿಂಗಪ್ಪ ಅವರು ಶಾಂತವೇರಿ ಗೋಪಾಲಗೌಡರ ಶಿಷ್ಯರು. ಇವರು ಸದನದಲ್ಲಿ ಮಾತನಾಡಿದ್ದು, ಜನರ ಪರವಾಗಿ ಕೆಲಸ ಮಾಡಿದ್ದು ಇಂದಿಗೂ ದಾಖಲೆಗಳಾಗಿ ನಮ್ಮ ನಡುವೆ ಇದ್ದಾವೆ” ಎಂದರು.

“ಎಂ.ಎಸ್.‌ರಾಮಯ್ಯ ಅವರ ಮಗನಾದ ಎಂ.ಆರ್. ಜಯರಾಮ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ. ಅವರ ಶ್ರೀಮಂತಿಕೆ ನೋಡಿ ನಾವು ಈ ಪ್ರಶಸ್ತಿ ನೀಡಿಲ್ಲ. 1978 ರಲ್ಲಿಯೇ ಶಾಸಕರಾಗಿ ಕೆಲಸ ಮಾಡಿದವರು. ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾಗಿದ್ದರು. ಆದರೂ ಹಳ್ಳಿ, ಹಳ್ಳಿಗೆ ತೆರಳಿ ಭಜನೆ ಮಾಡಿಕೊಂಡು ತಾವು ನಂಬಿದ ಆಚರಣೆಯನ್ನು ತಿಳಿಸುತ್ತಿದ್ದಾರೆ. ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದವರಿವರು” ಎಂದು ಬಣ್ಣಿಸಿದರು.

“ಇನ್ನೊಬ್ಬ ಸಾಧಕರಾದ ಸೀತಾರಾಮ್ ಶೆಟ್ಟಿ ಅವರು ಎಂಜಿನಿಯರಿಂಗ್ ಪರಿಣಿತರು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ತರಲು ಕಾಲುವೆ ನಿರ್ಮಾಣ‌ ಮಾಡಲಾಗುತ್ತಿದೆ. ಒಂದು ಕಡೆ ಸುಮಾರು 43 ಮೀ.‌ ಎತ್ತರದ, 10.5 ಕಿ.ಮೀ ಉದ್ದದ ಅಕ್ವಾಡೆಕ್ ವಿನ್ಯಾಸ ಮಾಡಿದ್ದಾರೆ. ಅದರ ಮೇಲೆ ಎರಡು ಲಾರಿಗಳು ಓಡಾಡಬಹುದು. ಅಷ್ಟು ಸುಂದರವಾದ ಹಾಗೂ ಭಾರತದಲ್ಲಿಯೇ ಮಾದರಿ ನಿರ್ಮಾಣ ಇದಾಗಿದೆ” ಎಂದು ಹೇಳಿದರು.

“ನಾನು ಈ ಹಿಂದೆ ಬಂದೀಖಾನೆ ಸಚಿವನಾಗಿದ್ದ ವೇಳೆ ಆಗ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಎನ್.ಎಸ್.ರಾಮೇಗೌಡರು ಕಾರ್ಯನಿರ್ವಹಿಸುತ್ತಿದ್ದರು. ಆ ವೇಳೆಯಲ್ಲಿ ಅವರು ಜೈಲಿನಲ್ಲಿ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ತೆರೆದು ಕೈದಿಗಳೂ ಸಹ ಪದವಿ ಪಡೆಯುವ ವ್ಯವಸ್ಥೆ ಮಾಡಿದವರು. ಆಶಿಶ್ ಬಲ್ಲಾಳ್ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರು” ಎಂದು ಹೇಳಿದರು.

ವರ್ಷಕ್ಕೆ ಒಂದರಂತೆ ಪ್ರಶಸ್ತಿ ಹೆಚ್ಚಳ

“ನಮ್ಮ‌ ನಡುವೆ ಇನ್ನೂ ಅನೇಕ ಸಾಧಕರಿದ್ದಾರೆ. ಆದರೆ ಆಯಾ ಆಚರಣೆ ವರ್ಷಕ್ಕೆ ತಕ್ಕಂತೆ ಪ್ರಶಸ್ತಿ ನೀಡಬೇಕು ಎನ್ನುವ ನಿಯಮವನ್ನು ಮಾಡಿಕೊಂಡಿರುವ ಕಾರಣಕ್ಕೆ ಈ ಬಾರಿ 70 ಸಾಧಕರನ್ನು ಗುರುತಿಸಲಾಗಿದೆ.‌ ಮುಂದಿನ ವರ್ಷ 71 ಜನ ಸಾಧಕರನ್ನು ಪರಿಗಣಿಸಲಾಗುವುದು. ಎಲ್ಲಾ ಸಮುದಾಯ, ಕ್ಷೇತ್ರ, ಜಿಲ್ಲೆಗಳ ಸಾಧಕರನ್ನು ಪರಿಗಣಿಸಲಾಗಿದೆ. ಯಾವುದೇ ಅರ್ಜಿ ಆಹ್ವಾನ ಮಾಡದೆ ನಿಜವಾದ ಸಾಧಕರನ್ನು ಗುರುತಿಸಲಾಗಿದೆ” ಎಂದರು.

“ನನಗೆ ಪ್ರಶಸ್ತಿ ದೊರಕಿಲಿಲ್ಲ ಎನ್ನುವ ಕೊರಗು ಬೇಡ. ಅದಕ್ಕೆ ಡಿವಿಜಿ ಅವರ ಕಗ್ಗ ನಮಗೆ ಉತ್ತಮ ಉದಾಹರಣೆ. ಏನಾನುಮಂ ಮಾಡು ಕೈಗೆ ದೊರೆತುಜ್ಜುಗವ/ ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ/ ಹೀನಮಾವುದುಮಿಲ್ಲ ಜಗದ ಗುಡಿಯೂಳಿಗದಿ/ ತಾಣ ನಿನಗಿಹುದಿಲ್ಲಿ ಮಂಕುತಿಮ್ಮ. ಹೀಗೆ ಒಂದಲ್ಲ ಒಂದು ದಿನ ಎಲ್ಲರಿಗೂ ಅವಕಾಶ ಬರಲಿದೆ. ನಾವೆಲ್ಲರೂ ಕಾಯಬೇಕು” ಎಂಬರ್ಥದ ಕಗ್ಗವನ್ನು ಡಿಸಿಎಂ ಅವರು ವಾಚಿಸಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!