ಬೆಂಗಳೂರು: ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ (Cmsiddaramaia) ಸಂತಾಪ ಸಂದೇಶ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.
— Siddaramaiah (@siddaramaiah) November 3, 2025
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ,… pic.twitter.com/yS5fFFPnbX
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದಿರುವ ಅವರು, ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದರು.
ಹಿರಿಯ ಜೀವ ಓಬಳಯ್ಯನವರ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.