Don't spread misinformation about the Manjunatha Swamy temple in Dharmasthala: R. Ashoka

BJP ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ.

ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.

ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ.

ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ. ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು.

ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ

ಸುರಂಗ ರಸ್ತೆ ನಿರ್ಮಿಸಲು ಸಾವಿರಾರು ಕೋಟಿ ರೂ. ಖರ್ಚು ಮಾಡುವುದು ಬೇಡ. ಲಾಲ್‌ಬಾಗ್‌ನಂತಹ ಉದ್ಯಾನಗಳನ್ನು ನಾಶ ಮಾಡಿ ರಸ್ತೆ ಮಾಡುವುದು ಬೇಕಿಲ್ಲ. ಈ ಹಿಂದೆ ಉಕ್ಕಿನ ಸೇತುವೆ ನಿರ್ಮಿಸಲು ಮುಂದಾದಾಗ ಕಾಂಕ್ರೀಟ್‌ ರಸ್ತೆ ಮಾಡಿ ಎಂದು ಆಗ್ರಹಿಸಿದ್ದೆವು.

ಈಗಲೂ ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೆಹಲಿ ನಾಯಕರಿಗೆ ಅನುಕೂಲ ಮಾಡಿಕೊಡಲು ಸುರಂಗ ಕೊರೆಯುವುದು ಬೇಕಿಲ್ಲ. ಈಗಾಗಲೇ 150 ಬಗೆಯ ದರ ಏರಿಕೆಗಳನ್ನು ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದರು.

ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬೆಳಗಾವಿ ಹಾಗೂ ಚಾಮರಾಜನಗರದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾಳೆ ನಾನು ಚಾಮರಾಜನಗರಕ್ಕೆ ಹೋಗಿ ರೈತರ ಅಹವಾಲು ಆಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಹಾಗೂ ಪಾದಯಾತ್ರೆ ಮಾಡುತ್ತೇನೆ ಎಂದು ಹೇಳಿದರು.

ಚರ್ಚೆಗೆ ಬನ್ನಿ

ಕೇಂದ್ರ ಸರ್ಕಾರ ಮತ್ತು ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಬೆಂಗಳೂರಿಗೆ ಎಷ್ಟು ಅನುದಾನ ನೀಡಿದೆ, ಎಷ್ಟು ಅಭಿವೃದ್ಧಿ ಕಾರ್ಯಗಳಾಗಿದೆ ಎಂದು ತಿಳಿಸುತ್ತೇವೆ. ಕಾಂಗ್ರೆಸ್‌ ಎಷ್ಟು ಅಭಿವೃದ್ಧಿ ಮಾಡಿದೆ ಎಂದು ತಿಳಿಸಲಿ. ಸಿಎಂ ಬದಲಾವಣೆ ಆಗಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್‌ ಸ್ಪಷ್ಟವಾಗಿ ತಿಳಿಸಲಿ.

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸ್ಪಷ್ಟೀಕರಣ ತಿಳಿಸಲಿ. ಹೀಗೆ ಹೇಳಿದರೆ ನಾವೇ ಸುಮ್ಮನಾಗುತ್ತೇವೆ. ಇವರಿಬ್ಬರಲ್ಲಿ ಯಾರೇ ಸಿಎಂ ಆದರೂ ಅಭಿವೃದ್ಧಿ ಮಾಡಲ್ಲ ಎಂದರು.

ಮಾಜಿ ಸಚಿವ, ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನ ಬಹಳ ದುಃಖ ತಂದಿದೆ. ರಾಜಕೀಯ ರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಸೇವೆಯನ್ನು ಜನರು ಯಾವಾಗಲೂ ಸ್ಮರಿಸುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಕೋರುತ್ತೇನೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!