I would not have lost if Aadhaar card was linked to voter ID; Nikhil Kumaraswamy

ಜೆಡಿಎಸ್ – ಬಿಜೆಪಿ ಮೈತ್ರಿ ನೋಡಿ ಕಾಂಗ್ರೆಸ್ ನವರು ಬೆಚ್ಚಿ ಬಿದ್ದಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅನ್ನ ನೀಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಏನು ಪ್ರಯೋಜನ ?ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತೀವ್ರ ವಾಗ್ದಾಳಿ ನಡೆಸಿದರು.

ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಸ್ತುವಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ

ಬೆಳಗಾವಿಯಲ್ಲಿ ರೈತರು ಏಳು ದಿನದಿಂದ ಹೋರಾಟ ಮಾಡ್ತಿದ್ದಾರೆ, ಸಿಎಂ, ಉಸ್ತುವಾರಿ ಸಚಿವರು ಇದರ ಬಗ್ಗೆ ಚಕಾರ ಎತ್ತಿಲ್ಲಾ. ಅನ್ನ ಕೊಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಪ್ರಯೋಜನ ಏನು.? ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳೇ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಯುವ ರೈತರನ್ನು ಬಲಿಪಶು ಮಾಡಬೇಡಿ. ಕಬ್ಬು ಬೆಳೆಗಾರರು ವಿಚಾರದಲ್ಲಿ ರಾಜಕಾರಣ ಮಾಡದೇ, ರೈತರ ಬೆನ್ನೆಲುಬಾಗಿ ನಿಲ್ಲುವ ಕೆಲಸ ಮಾಡಬೇಕು.ನಾವು ಕೂಡ ಶೀಘ್ರವಾಗಿ ಕಬ್ಬು ಬೆಳೆಗಾರನ್ನು ಭೇಟಿಯಾಗಿ, ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ನಿಖಿಲ್ ಅವರು ಭರವಸೆ ನೀಡಿದರು.

ಜೆಡಿಎಸ್-ಬಿಜೆಪಿ ಮೈತ್ರಿ ನೋಡಿ ಕಾಂಗ್ರೆಸ್ ಬೆಚ್ಚಿ ಬಿದ್ದಿದದೆ

ಬಿಜೆಪಿ ಜೊತೆ ಜೆಡಿಎಸ್ ವೀಲಿನ ಆಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಮಗೆ ಸಿಕ್ಕಿದ ಬೆಂಬಲ ನೋಡಿ ಕಾಂಗ್ರೆಸ್ ನವರು ಬೆಚ್ಚಿಬಿದ್ದಿದ್ದಾರೆ. ಆಗಾಗಿ ಈ ರೀತಿ ಮಾತಾಡ್ತಾರೆ ಎಂದು ಕಿಡಿ ಕಾರಿದರು.

ಯಾವ ಪುರುಷಾರ್ಥಕ್ಕೆ ಟನಲ್ ರೋಡ್

GBA ಚುನಾವಣೆಯಿಂದ ಬೆಂಗಳೂರು ನಗರದಲ್ಲಿ ಇಲ್ಲಿವರೆಗೆ 70% ಆದಾಯ ರೆವಿನ್ಯೂ ಕಲೆಕ್ಟ್ ಆಗ್ತಿದೆ. ಅದ್ರೆ ಬೆಂಗಳೂರು ನಗರಕ್ಕೆ ವಾಪಸ್ ಏನ್ ಕೊಟ್ಟಿದ್ದೀರಾ.? ರಸ್ತೆ ಗುಂಡಿಗಳಿಂದ ಹಲವಾರು ಸಾವು ನೋವಾಗಿದೆ. ಅದ್ರೆ ಎಷ್ಟು ಗುಂಡಿಗಳನ್ನ ಮುಚ್ಚಿದ್ದಿರಾ.? ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಕೊಟ್ಟಿದ್ದ ಗಡುವು ಮುಗಿದಿದೆ. ಬಿಬಿಎಂಪಿನೇ ಬೆಂಗಳೂರಿನಲ್ಲಿ ಹದಿನೈದು ಸಾವಿರ ರಸ್ತೆ ಗುಂಡಿ ಇದೆ ಅಂತ. ಈಗ ಟನಲ್ ಅಂತ ಕುತ್ತಿದ್ದೀರಾ? ಟನಲ್ ರೋಡ್ ಗೆ ಎಷ್ಟು ಬಜೆಟ್ ಬೇಕು, ಅಲ್ಲಿ ಓಡಾಡೋರು ಯಾರು.? ಬರೀ ಕಾರಿನಲ್ಲಿ ಹೋಗೊಕೆ ಬರೋಕೆ 300 ಕೊಡಬೇಕು. ಸಾರ್ವಜನಿಕ ಸಾರಿಗೆಗೆ ಮನ್ನಣೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಮೊದಲು ಫ್ಲೈಓವರ್ ಮುಗಿಸಿ, ಆಮೇಲೆ ಟನಲ್ ರೋಡ್ ಗೆ ಬನ್ನಿ

ಮೆಟ್ರೊದ ದರವನ್ನ ಹೆಚ್ಚಿಗೆ ಮಾಡಿದ್ದಿರಾ.? ಪ್ರತಿದಿನ ವಿದ್ಯಾರ್ಥಿಗಳು, ದಿನಗೂಲಿ ಕೆಲಸ ಮಾಡುವವರು ಸಂಚಾರ ಮಾಡ್ತಾರೆ. ಎಲ್ಲಾತರದ ವರ್ಗದ ಜನರು ಸಂಚಾರ ಮಾಡ್ತಾರೆ.ಮೊದಲು ಆದ್ರ ದರ ಕಡಿಮೆ ಮಾಡಿ. ಸಾರ್ವಜನಿಕರಿಗೆ ಅನುಕೂಲ ಮಾಡಿ. ಯಾವ ಪುರುಷಾರ್ಥಕ್ಕೆ ಟನಲ್ ರೋಡ್ ಮಾಡ್ತಿದ್ದೀರಿ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಈ ಟನಲ್ ರಸ್ತೆ ಯಾರಿಗಾಗಿ ಮಾಡಲಾಗುತ್ತಿದೆ, ಟನಲ್ ನಿರ್ಮಾಣ ಅವೈಜ್ಞಾನಿಕ ಯೋಜನೆ, ಮೊದಲು ಸಾರ್ವಜನಿಕರಿಗೆ ಉತ್ತಮ ರಸ್ತೆಗಳನ್ನು ಕಲ್ಪಿಸಿ. ಈ ಟನಲ್ ರೋಡ್ ನನ್ನು ನಮ್ಮ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತೇನೆ. ಮೊದಲು ರಸ್ತೆ ಗುಂಡಿ ಮುಚ್ಚಿ ಎಂದು ಸರ್ಕಾರ ವಿರುದ್ಧ ನಿಖಿಲ್ ಅವರು ತೀವ್ರ ವಾಗ್ದಾಳಿ ನಡೆಸಿದರು.

ನಂತರ ಮಂಡ್ಯ ಜಿಲ್ಲೆಯ ಕೆ.ಆ‌ರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ಭೂ ಸ್ವಾಧೀನವಾಗಿದ್ದ ಜಮೀನಿಗೆ ಸೂಕ್ತ ಪರಿಹಾರ ಸಿಗದಕ್ಕೆ ಮನನೊಂದು ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು, ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಮತ್ತು ಕೆ.ಆರ್.‌ ಪೇಟೆ ಶಾಸಕರಾದ ಹೆಚ್‌.ಟಿ. ಮಂಜು ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತ ರೈತನ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!