Farmers' protest: Outrage against government, news channels

ರೈತರ ಕಿಚ್ಚು: ಸರ್ಕಾರ, ನ್ಯೂಸ್ ಚಾನಲ್‌ಗಳ ವಿರುದ್ಧ ಆಕ್ರೋಶ.. Video ನೋಡಿ

ವಿಜಯಪುರ: ಕಬ್ಬು ಕಾರ್ಖಾನೆಗಳು ಹಾಗೂ ರಾಜ್ಯ ಸರಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ (Farmers’ protest) ಬುಧವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆಗೆ ಸಾಕ್ಷಿಯಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರೊಬ್ಬರು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ನಂತರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಯಂದ್ರ ಭಾಗವಹಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ.

ಬೆಳಗಾವಿಯ ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ನ್ಯಾಯವಾದಿಗಳು ಮಾನವ ಸರಪಳಿ ನಿರ್ಮಿಸಿ ರೈತರಿಗೆ ಬೆಂಬಲ ಘೋಷಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕನ್ನಡಪರ ಸಂಘಟನೆಗಳು ರೈತರನ್ನು ಬೆಂಬಲಿಸಿ ಪಟ್ಟಣ ಬಂದ್ ಮಾಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಗೋಕಾಕ್ ಅಥಣಿ ರಸ್ತೆ ವಿವಿಧ ಸ್ಥಳಗಳಲ್ಲಿ ಬಂದ್ ಮಾಡಲಾಗಿದೆ. ದರೂರ ಸೇತುವೆ ಮೇಲಿನ ಸಂಚಾರ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು ವಾಹನ ಸವಾರರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಬೈಲಹೊಂಗಲ, ಸವದತ್ತಿ, ಯರಗಟ್ಟಿ, ಹುಕ್ಕೇರಿ, ಗೋಕಾ ಕ್, ರಾಮದುರ್ಗ ಸೇರಿದಂತೆ ಬೆಳಗಾವಿಗೆ ಹೊಂದಿಕೊಂಡ ಉತ್ತರ ಕನ್ನಡ, ವಿಜಯಪುರ, ಬಾಗಲ ಕೋಟೆ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಕಿಚ್ಚು ವ್ಯಾಪಿಸಿದೆ.

ಇನ್ನು ಅಥಣಿಯಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಮಹಾದೇವ ಮಡಿವಾಳ, ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಕೆಲವು ಕಡೆ ಹೆದ್ದಾರಿ ಬಂದ್ ಆಗಿರುವ ಕಾರಣ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೇಡಿಕೆಗಳೇನು?

  1. ಮಹಾರಾಷ್ಟ್ರದಲ್ಲಿ ಟನ್ ಕಬ್ಬಿಗೆ 3600 ರು. ಬೆಲೆಯಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೆಲೆ ಹೆಚ್ಚಳವಾಗಬೇಕು.
  2. ಕಬ್ಬಿನ ಕಾರ್ಖಾನೆಗಳೇ ಸ್ವತಃ ಕಬ್ಬನ್ನು ಕಟಾವು ಮಾಡಿಕೊಳ್ಳಬೇಕು.
  3. ಕಾರ್ಖಾನೆಯಲ್ಲಿನ ಡಿಜಿಟಲ್ ತೂಕ ಯಂತ್ರದಲ್ಲಾಗುತ್ತಿರುವ ಮೋಸ ನಿಲ್ಲಬೇಕು.
  4. ಕಬ್ಬನ್ನು ನುರಿದಾಗ ಸಿಗುವ ಉಪ ಉತ್ಪನ್ನ ಗಳಲ್ಲೂ ರೈತರಿಗೆ ಸೂಕ್ತ ಹಣ ಸಿಗಬೇಕು.
  5. ಕಬ್ಬು ಹಂಗಾಮು ಆರಂಭಕ್ಕೆ ಮುನ್ನವೇ ಸೂಕ್ತ ದರ ನಿಗದಿಯಾಗಬೇಕು.
  6. ರೈತರಿಗೆ ಸರಕಾರದಿಂದ ಅಗತ್ಯ ನೆರವು ಸಿಗಬೇಕು, ವೈಜ್ಞಾನಿಕ ವ್ಯವಸ್ಥೆ ಬೇಕು ಎಂಬುದಾಗಿದೆ.

ಸರ್ಕಾರದ ನಿರ್ಲಕ್ಷ್ಯದ ಆರೋಪ

ರೈತರು ಬೀದಿಗಿಳಿದು ನಡೆಸುತ್ತಿರುವ ಈ ಹೋರಾಟ ಮೇಲೆ ವಿವರಿಸಿದಂತೆ ಉಗ್ರ ಸ್ವರೂಪ ಪಡೆಯುತ್ತಿದೆ. ಇದಕ್ಕೆ ರಾಜಕೀಯ ಬೆಂಬಲ ದೊರಕಿದ್ದು, ಜೆಡಿಎಸ್, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಹೊಣೆ ನೀಡಿದೆಯೇ ಹೊರತು, ಸೂಕ್ತ ಕ್ರಮ ಕೈಗೊಳ್ಳದೆ ಬಿಹಾರ ಚುನಾವಣೆಯತ್ತ ಗಮನ ನೆಟ್ಟಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

ಖಾಸಗಿ ಸುದ್ದಿವಾಹಿನಿಗಳ ವಿರುದ್ಧ ಆಕ್ರೋಶ

ಇನ್ನೂ ಅನ್ನದಾತ ರೈತರ ಬೀದಿಗಿಳಿದು 6 ಹೆದ್ದಾರಿಗಳು ಬಂದ್ ಆಗಿದ್ದರು, ನಾವೇ ಮೊದಲು, ನಮ್ಮಿಂದಲೇ ದೇಶದ ಉದ್ದಾರ ಎನ್ನುವ ಕೆಲ ಖಾಸಗಿ ಸುದ್ದಿವಾಹಿನಿಗಳ ಇತ್ತ ಗಮನಿಸುತ್ತಿಲ್ಲ ಎಂಬ ಆಕ್ರೋಶ ರೈತರದ್ದಾಗಿದೆ.

ಕಳೆದ ಎರಡೂ ವರೆ ವರ್ಷದಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಕಿಚ್ಚು ಹಚ್ಚಿ ಸರ್ಕಾರವನ್ನು ಕೆಡವಲು ವರದಿ ಪ್ರಸಾರ ಮಾಡುತ್ತಿವೆ ಎಂಬ ಆಕ್ರೋಶ ಕಾಂಗ್ರೆಸ್ ಬೆಂಬಲಿಗರದ್ದು.

ಇದರ ನಡುವೆ ನಟ ದರ್ಶನ್ ಪ್ರಕರಣದ ಕುರಿತು ಗಂಟೆಗೆ ಒಮ್ಮೆ ವರದಿ ಮಾಡುತ್ತಾ, ಊಹಾಪೋಹ ಕಥೆ ಎಣೆಯುತ್ತಿರುವ ಖಾಸಗಿ ಸುದ್ದಿ ವಾಹಿನಿಗಳು ಮೂಲ ಆದ್ಯತೆ ಮರೆಯುತ್ತಿದ್ದು, ಅಗತ್ಯ ಸುದ್ದಿಗಳನ್ನು ಪ್ರಸಾರ ಮಾಡದೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆಕ್ರೋಶ ವೀಕ್ಷಕರದ್ದಾಗಿದೆ.

ಈ ಕುರಿತಂತೆ ಖಾಸಗಿ ಚಾನಲ್‌ಗಳ ವಿರುದ್ಧ ಪ್ರತಿಭಟನೆಯಲ್ಲಿ ರೈತರು ಆಡಿರುವ ಆಕ್ರೋಶದ ನುಡಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜವಬ್ದಾರಿ ಮರೆತವರಿಗೆ ಚಾಟಿ ಏಟು ನೀಡಿದಂತಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!