Farmers' protest: Outrage against government, news channels

ರೈತರ ಕಿಚ್ಚು: ಸರ್ಕಾರ, ನ್ಯೂಸ್ ಚಾನಲ್‌ಗಳ ವಿರುದ್ಧ ಆಕ್ರೋಶ.. Video ನೋಡಿ

ವಿಜಯಪುರ: ಕಬ್ಬು ಕಾರ್ಖಾನೆಗಳು ಹಾಗೂ ರಾಜ್ಯ ಸರಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ (Farmers’ protest) ಬುಧವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆಗೆ ಸಾಕ್ಷಿಯಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರೊಬ್ಬರು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ನಂತರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಯಂದ್ರ ಭಾಗವಹಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ.

ಬೆಳಗಾವಿಯ ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ನ್ಯಾಯವಾದಿಗಳು ಮಾನವ ಸರಪಳಿ ನಿರ್ಮಿಸಿ ರೈತರಿಗೆ ಬೆಂಬಲ ಘೋಷಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕನ್ನಡಪರ ಸಂಘಟನೆಗಳು ರೈತರನ್ನು ಬೆಂಬಲಿಸಿ ಪಟ್ಟಣ ಬಂದ್ ಮಾಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಗೋಕಾಕ್ ಅಥಣಿ ರಸ್ತೆ ವಿವಿಧ ಸ್ಥಳಗಳಲ್ಲಿ ಬಂದ್ ಮಾಡಲಾಗಿದೆ. ದರೂರ ಸೇತುವೆ ಮೇಲಿನ ಸಂಚಾರ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು ವಾಹನ ಸವಾರರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಬೈಲಹೊಂಗಲ, ಸವದತ್ತಿ, ಯರಗಟ್ಟಿ, ಹುಕ್ಕೇರಿ, ಗೋಕಾ ಕ್, ರಾಮದುರ್ಗ ಸೇರಿದಂತೆ ಬೆಳಗಾವಿಗೆ ಹೊಂದಿಕೊಂಡ ಉತ್ತರ ಕನ್ನಡ, ವಿಜಯಪುರ, ಬಾಗಲ ಕೋಟೆ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಕಿಚ್ಚು ವ್ಯಾಪಿಸಿದೆ.

ಇನ್ನು ಅಥಣಿಯಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಮಹಾದೇವ ಮಡಿವಾಳ, ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಕೆಲವು ಕಡೆ ಹೆದ್ದಾರಿ ಬಂದ್ ಆಗಿರುವ ಕಾರಣ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೇಡಿಕೆಗಳೇನು?

  1. ಮಹಾರಾಷ್ಟ್ರದಲ್ಲಿ ಟನ್ ಕಬ್ಬಿಗೆ 3600 ರು. ಬೆಲೆಯಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೆಲೆ ಹೆಚ್ಚಳವಾಗಬೇಕು.
  2. ಕಬ್ಬಿನ ಕಾರ್ಖಾನೆಗಳೇ ಸ್ವತಃ ಕಬ್ಬನ್ನು ಕಟಾವು ಮಾಡಿಕೊಳ್ಳಬೇಕು.
  3. ಕಾರ್ಖಾನೆಯಲ್ಲಿನ ಡಿಜಿಟಲ್ ತೂಕ ಯಂತ್ರದಲ್ಲಾಗುತ್ತಿರುವ ಮೋಸ ನಿಲ್ಲಬೇಕು.
  4. ಕಬ್ಬನ್ನು ನುರಿದಾಗ ಸಿಗುವ ಉಪ ಉತ್ಪನ್ನ ಗಳಲ್ಲೂ ರೈತರಿಗೆ ಸೂಕ್ತ ಹಣ ಸಿಗಬೇಕು.
  5. ಕಬ್ಬು ಹಂಗಾಮು ಆರಂಭಕ್ಕೆ ಮುನ್ನವೇ ಸೂಕ್ತ ದರ ನಿಗದಿಯಾಗಬೇಕು.
  6. ರೈತರಿಗೆ ಸರಕಾರದಿಂದ ಅಗತ್ಯ ನೆರವು ಸಿಗಬೇಕು, ವೈಜ್ಞಾನಿಕ ವ್ಯವಸ್ಥೆ ಬೇಕು ಎಂಬುದಾಗಿದೆ.

ಸರ್ಕಾರದ ನಿರ್ಲಕ್ಷ್ಯದ ಆರೋಪ

ರೈತರು ಬೀದಿಗಿಳಿದು ನಡೆಸುತ್ತಿರುವ ಈ ಹೋರಾಟ ಮೇಲೆ ವಿವರಿಸಿದಂತೆ ಉಗ್ರ ಸ್ವರೂಪ ಪಡೆಯುತ್ತಿದೆ. ಇದಕ್ಕೆ ರಾಜಕೀಯ ಬೆಂಬಲ ದೊರಕಿದ್ದು, ಜೆಡಿಎಸ್, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಹೊಣೆ ನೀಡಿದೆಯೇ ಹೊರತು, ಸೂಕ್ತ ಕ್ರಮ ಕೈಗೊಳ್ಳದೆ ಬಿಹಾರ ಚುನಾವಣೆಯತ್ತ ಗಮನ ನೆಟ್ಟಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

ಖಾಸಗಿ ಸುದ್ದಿವಾಹಿನಿಗಳ ವಿರುದ್ಧ ಆಕ್ರೋಶ

ಇನ್ನೂ ಅನ್ನದಾತ ರೈತರ ಬೀದಿಗಿಳಿದು 6 ಹೆದ್ದಾರಿಗಳು ಬಂದ್ ಆಗಿದ್ದರು, ನಾವೇ ಮೊದಲು, ನಮ್ಮಿಂದಲೇ ದೇಶದ ಉದ್ದಾರ ಎನ್ನುವ ಕೆಲ ಖಾಸಗಿ ಸುದ್ದಿವಾಹಿನಿಗಳ ಇತ್ತ ಗಮನಿಸುತ್ತಿಲ್ಲ ಎಂಬ ಆಕ್ರೋಶ ರೈತರದ್ದಾಗಿದೆ.

ಕಳೆದ ಎರಡೂ ವರೆ ವರ್ಷದಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಕಿಚ್ಚು ಹಚ್ಚಿ ಸರ್ಕಾರವನ್ನು ಕೆಡವಲು ವರದಿ ಪ್ರಸಾರ ಮಾಡುತ್ತಿವೆ ಎಂಬ ಆಕ್ರೋಶ ಕಾಂಗ್ರೆಸ್ ಬೆಂಬಲಿಗರದ್ದು.

ಇದರ ನಡುವೆ ನಟ ದರ್ಶನ್ ಪ್ರಕರಣದ ಕುರಿತು ಗಂಟೆಗೆ ಒಮ್ಮೆ ವರದಿ ಮಾಡುತ್ತಾ, ಊಹಾಪೋಹ ಕಥೆ ಎಣೆಯುತ್ತಿರುವ ಖಾಸಗಿ ಸುದ್ದಿ ವಾಹಿನಿಗಳು ಮೂಲ ಆದ್ಯತೆ ಮರೆಯುತ್ತಿದ್ದು, ಅಗತ್ಯ ಸುದ್ದಿಗಳನ್ನು ಪ್ರಸಾರ ಮಾಡದೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆಕ್ರೋಶ ವೀಕ್ಷಕರದ್ದಾಗಿದೆ.

ಈ ಕುರಿತಂತೆ ಖಾಸಗಿ ಚಾನಲ್‌ಗಳ ವಿರುದ್ಧ ಪ್ರತಿಭಟನೆಯಲ್ಲಿ ರೈತರು ಆಡಿರುವ ಆಕ್ರೋಶದ ನುಡಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜವಬ್ದಾರಿ ಮರೆತವರಿಗೆ ಚಾಟಿ ಏಟು ನೀಡಿದಂತಿದೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!