Congress is a party of fools today; B.Y. Vijayendra

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ರೈತರ ಬಗ್ಗೆ ನೈಜ ಕಾಳಜಿಯಿಂದ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೈತರಿಗೆ ಸಹಕಾರಿ ಆಗುವಂಥ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರ ವಿಫಲವಾಗಿದೆ. ಅತಿವೃಷ್ಟಿ ಸಂದರ್ಭದಲ್ಲೂ ಕೃಷಿ ಸಚಿವರು, ಕಂದಾಯ ಸಚಿವರು, ಇಲಾಖೆಯ ಕಾರ್ಯದರ್ಶಿಗಳು ಯಾವುದೇ ಜಿಲ್ಲೆಗೆ ತೆರಳಿಲ್ಲ; ಅಲ್ಲಿನ ರೈತರ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಪ್ರಯತ್ನವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ನೆರೆಯ ಮಹಾರಾಷ್ಟ್ರ ಸರಕಾರವು ರೈತರಿಗೆ ಪರಿಹಾರ ಘೋಷಿಸಿ, ನೀಡಿದ್ದರೂ ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡಲು ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ತಹಸೀಲ್ದಾರರ ಕಚೇರಿಗೆ ಹತ್ತಾರು ಬಾರಿ ಸುತ್ತಾಡಿದರೂ ಕೆಲಸ ಆಗದೇ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಿನ್ನೆ ನಡೆದಿದೆ. ಮತ್ತೊಂದೆಡೆ ಕಬ್ಬು ಬೆಳೆಗಾರರು ಕಳೆದ ಐದಾರು ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಬಿಜಾಪುರ ಭಾಗದ ಬೆಳೆಗಾರರು ರಾಜ್ಯ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದರೂ, ಪರಿಹಾರ ಕೊಟ್ಟಿಲ್ಲ; ಯಾವುದೇ ಸಚಿವರು ಬೆಳೆಗಾರರನ್ನು ಭೇಟಿ ಮಾಡುವ ಪ್ರಯತ್ನ ಮಾಡಿರಲಿಲ್ಲ ಎಂದು ದೂರಿದರು.

ನಾನು ಮೊನ್ನೆ ಹೋರಾಟ, ಪ್ರತಿಭಟನೆಯಲ್ಲಿ, ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ನನ್ನ ಜನ್ಮದಿನವನ್ನು ಅಲ್ಲಿನ ಕಬ್ಬು ಬೆಳೆಗಾರರ ಜೊತೆ ಆಚರಿಸಿ ಬಂದಿದ್ದೇನೆ. ನಿನ್ನೆ ಹೋರಾಟದ ಬಿಸಿ ತಟ್ಟಿದ್ದರಿಂದ ಸಚಿವ ಎಚ್.ಕೆ.ಪಾಟೀಲರು ಅಲ್ಲಿಗೆ ಬಂದಿದ್ದಾರೆ. ಆದರೆ, ರೈತರ ಕೋರಿಕೆ ಈಡೇರಿಸಿಲ್ಲ; ಆ ನಿಟ್ಟಿನಲ್ಲಿ ಪ್ರಯತ್ನವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ಪಾಟೀಲರು ನೀಡಿದ ಹೇಳಿಕೆಯನ್ನು ಬೆಂಗಳೂರಿನ ಎ.ಸಿ. ಕೊಠಡಿಯಲ್ಲಿ ಕುಳಿತೇ ಕೊಡಬಹುದಾಗಿತ್ತು. ಹೋರಾಟದ ಸ್ಥಳದಲ್ಲಿ ಬಂದು ಹೇಳುವ ಅವಶ್ಯಕತೆ ಇರಲಿಲ್ಲ ಎಂದು ಆಕ್ಷೇಪಿಸಿದರು. ಅಲ್ಲಿ ಬಂದಾಗ ಕಬ್ಬು ಬೆಳೆಗಾರರ ಪರಿಸ್ಥಿತಿ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಬೇಕಿತ್ತು ಎಂದರು.

ಈಗಲೂ ಕಾಲ ಮಿಂಚಿಲ್ಲ; ಕೇಂದ್ರ ಸರಕಾರವನ್ನು ದೂರುವುದನ್ನು ಬದಿಗಿಡಿ; ಕೇಂದ್ರದ ಬಗೆಗಿನ ಮುಖ್ಯಮಂತ್ರಿಗಳ, ಸಕ್ಕರೆ ಸಚಿವರ ಹೇಳಿಕೆ ಅರ್ಧ ಸತ್ಯ ಮಾತ್ರ ಎಂದು ತಿಳಿಸಿದರು. ರಾಜ್ಯ ಸರಕಾರ ಮನಸ್ಸು ಮಾಡಿದರೆ, ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೂರಿಸಿಕೊಂಡು ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಲು ಸಾಧ್ಯವಿದೆ ಎಂದು ತಿಳಿಸಿದರು.

2014ರಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಯಡಿಯೂರಪ್ಪ ಅವರು ಸದನದ ಒಳಗೆ ಮತ್ತು ಹೊರಗಡೆ ಹೋರಾಟ ಮಾಡಿದ್ದರಿಂದ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಹೆಚ್ಚು ದರ ನಿಗದಿ ಪಡಿಸಿತ್ತು ಎಂದು ವಿವರಿಸಿದರು. ಇಷ್ಟೆಲ್ಲ ಉದಾಹರಣೆಗಳಿದ್ದರೂ ಸಿಎಂ ಕುರ್ಚಿಗೆ ಪೈಪೋಟಿ ನಡೆದಿದೆ; ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳೇ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸಬೇಕಿತ್ತು ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರವು ರೈತರಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ರೈತವಿರೋಧಿ ನಡವಳಿಕೆ ತೋರುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ತಾತ್ಸಾರ ಮಾಡದೇ, ಕಬ್ಬು ಬೆಳೆಗಾರರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!