Vote rigging: Rahul Gandhi has 5 questions for the Election Commission..!

ದೆಹಲಿಯಲ್ಲಿ ಮತದಾನ ಮಾಡಿದ ಬಿಜೆಪಿಯವರಿಂದ ಬಿಹಾರದಲ್ಲೂ ಮತದಾನ; ರಾಹುಲ್ ಗಾಂಧಿ

ಪಾಟ್ನಾ: ಚುನಾವಣೆ ಆಯೋಗದ ವಿರುದ್ಧ ವೋಟ್ ಚೋರಿ (Vote Chori) ಆರೋಪ ಮುಂದುವರೆಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಈಗ ಮತ್ತೊಂದು ಗಂಭೀರ ಆರೋಪ ಮಾಡಿ ಗಮನ ಸೆಳೆದಿದ್ದು, ದೆಹಲಿ ಸೇರಿದಂತೆ ಇತರೆ ರಾಜ್ಯಗಳ ಚುನಾವಣೆಯಲ್ಲಿ ಮತದಾನ ಮಾಡಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಬಿಹಾರ ಚುನಾವಣೆಯಲ್ಲಿಯೂ ಮತದಾನ ಮಾಡಿದ್ದಾರೆಂದಿದ್ದು, ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ರಾಹುಲ್ ಗಾಂಧಿ, ಭಾರತದ ನನ್ನ ಯುವ ಮತ್ತು ಜನರಲ್ ಝಡ್ ಸ್ನೇಹಿತರೇ,

ಹರಿಯಾಣದಲ್ಲಿ ಸರ್ಕಾರವನ್ನು ಮತ ಕಳ್ಳತನದ ಮೂಲಕ ಹೇಗೆ ಕದಿಯಲಾಯಿತು ಮತ್ತು ಇಡೀ ರಾಜ್ಯದ ಸಾರ್ವಜನಿಕ ಅಭಿಪ್ರಾಯವನ್ನು ಕಸಿದುಕೊಳ್ಳಲಾಯಿತು ಎಂಬುದನ್ನು ನಾನು ಸಾಕ್ಷ್ಯಾಧಾರಗಳೊಂದಿಗೆ ಪ್ರದರ್ಶಿಸಿದೆ.

ಕೆಲವು ದಿನಗಳ ಹಿಂದೆ, ನಾನು SIR ಮೂಲಕ ಮತದಾರರ ಪಟ್ಟಿಗಳ ವ್ಯಾಪಕ ಕುಶಲತೆಯ ಬಗ್ಗೆ ಜಾಗೃತಿ ಮೂಡಿಸಲು ಬಿಹಾರದಲ್ಲಿ ‘ಮತದಾರರ ಹಕ್ಕುಗಳ ಯಾತ್ರೆ’ಯನ್ನು ಸಹ ನಡೆಸಿದ್ದೆ.

ಬಿಹಾರದ ಪ್ರತಿಯೊಂದು ಮೂಲೆಯಿಂದ ಬರುವ ಸುದ್ದಿಗಳು ಮತ್ತು ವೀಡಿಯೊಗಳು ಮತ ಕಳ್ಳತನದ ಪುರಾವೆಗಳನ್ನು ಮತ್ತಷ್ಟು ಬಲಪಡಿಸುತ್ತಿವೆ.

ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ ಮತ್ತು ಈಗ ಜನರು ಮತಗಟ್ಟೆಗಳಲ್ಲಿ ಮತ ಚಲಾಯಿಸುವುದನ್ನು ತಡೆಯಲಾಗುತ್ತಿದೆ..

ಅದೇ ಸಮಯದಲ್ಲಿ, ಇತರ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ.

ನೆನಪಿಡಿ, ಮತ ಕಳ್ಳತನದ ಮೂಲಕ ರಚನೆಯಾದ ಸರ್ಕಾರವು ಯುವಕರು, ಜನರಲ್ ಝಡ್ ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಎಂದಿಗೂ ಕೆಲಸ ಮಾಡುವುದಿಲ್ಲ.

ಪ್ರಜಾಪ್ರಭುತ್ವದ ಈ ಕೊಲೆಯ ಪ್ರಮುಖ ಅಪರಾಧಿಗಳು:

ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು, ವಿವೇಕ್ ಜೋಶಿ. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು, ಆದರೆ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ವಿಶ್ವಾಸಘಾತುಕತನವನ್ನು ಎಸಗುತ್ತಿದ್ದಾರೆ.

ಮತದಾನದ ಹಕ್ಕನ್ನು ರಕ್ಷಿಸಲು ರಚಿಸಲಾದವರು ನಿಮ್ಮ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ ಎಂದಿದ್ದಾರೆ ‌

ವೋಟ್ ಚೋರಿಗೆ ಆರೋಪ ಹೊತ್ತು ನಿವೃತ್ತಿ ಜೀವನ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ

ರೇಗಾದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡು ವಾಗ್ದಾಳಿ ಮಾಡಿದ್ದಾರೆ.

ವೇದಿಕೆಯಲ್ಲಿ ಪ್ರಿಯಾಂಕಾ ಗಾಂಧಿ, ಸಿಇಸಿ ಜ್ಞಾನೇಶ್ ಕುಮಾರ್ ಅವರಿಗೆ ತೀಕ್ಷ್ಯ ಎಚ್ಚರಿಕೆ ನೀಡಿದ್ದು, ವೋಟ್ ಚೋರಿಗೆ ಸಹಕರಿಸಿರುವ ಜ್ಞಾನೇಶ್ ಕುಮಾರ್, ನೀವು ನೆಮ್ಮದಿಯಿಂದ ನಿವೃತ್ತರಾಗಲು ಸಾಧ್ಯವಿಲ್ಲ.

ಇತಿಹಾಸದ ಪುಟಗಳಲ್ಲಿ ಜ್ಞಾನೇಶ್ ಕುಮಾರ್ ದಾಖಲಾಗಲಿದೆ. ಬಳಿಕ ಜನರನ್ನು ಉದ್ದೇಶಿಸಿ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ನೀವು ಎಂದಿಗೂ ಮರೆಯಬಾರದು ಎಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ’ ಎಂದ ಪ್ರಿಯಾಂಕಾ ಎಸ್‌ಎಸ್ ಸಂಧು ಹಾಗೂ ವಿವೇಕ್ ಜೋಶಿ ಹೆಸರುಗಳನ್ನು ಕೂಡ ಹೇಳಿದ್ದಾರೆ.

ಈ ವೇಳೆ ಚುನಾವಣೆ ಅಧಿಕಾರಿಗಳ ಹೆಸರು ಹೇಳಿದಾಗಿ ಸಭೆಯಲ್ಲಿದ್ದ ಜನರು “ಚೋರ್-ಚೋರ್” (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!