Kanakadasa was not just a devotee but a visionary: Cmsiddaramaiah

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕನಕದಾಸರು ವಿಶ್ವಮಾನವರು

ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು. ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

“ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ” ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3300 ಒದಗಿಸಲಾಗುವುದು ಎಂದರು.

ಆದೇಶ ಹೊರಡಿಸಲಾಗುವುದು

ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು.

ಪ್ರತ್ಯೇಕ ಸಭೆ

ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!