Enough with the hit and run, put the documents against me before the people: DK Shivakumar challenges H.D. Kumaraswamy

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?; ಡಿ.ಕೆ. ಶಿವಕುಮಾರ್ ತಿರುಗೇಟು

ನವದೆಹಲಿ; “ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K
Shivakumar) ಅವರು ತಿಳಿಸಿದರು.

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು” ಎಂದು ವಿವರಿಸಿದರು.

“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ” ಎಂದರು.

“ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ” ಎಂದರು.

“ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು” ಎಂದರು.

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?

ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು ತಿರುಗೇಟು ನೀಡಿದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ

“ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!