Make separate arrangements for Namaz at the airport; H.D. Kumaraswamy

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಟೀಕಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು; ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು ಎಂದರು.

ಭಯೋತ್ಪಾದಕರು ಕೇವಲ ಕಾರಾಗೃಹದಲ್ಲಿ ಮಾತ್ರವಷ್ಟೇ ಇಲ್ಲ, ಅವರಿಗಿಂತ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯು ಇದ್ದಾರೆ, ಅವರು ಯಾರು ಎನ್ನುವುದು ನನಗಿಂತ ಹೆಚ್ಚಾಗಿ ನಿಮಗೆ ಗೊತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಸಚಿವರು ಹೇಳಿದರು.

ರಾಜ್ಯದ ಜನ ಈ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂಥವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಗುರುತರ ಅಪರಾಧ ಮಾಡಿದವರಿಗೆ ಎಲ್ಲಾ ರೀತಿಯ ಸೌಲಭ್ಯ ಕೊಟ್ಟಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಹೊಸದಾಗಿ ಶುರುವಾದುದಲ್ಲ. ವಿಧಾನಸೌಧದಲ್ಲಿ ಉಗ್ರರನ್ನು ಇಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಉಗ್ರರ ಬಗ್ಗೆ ಏನು ಚರ್ಚೆ ಮಾಡೋದು? ನೀವು ಯಾರ ಬಗ್ಗೆ ತನಿಖೆ ಮಾಡ್ತೀರಿ? ಇವೆಲ್ಲಾ ಕಾಲಹರಣ, ಸಮಯ ವ್ಯರ್ಥ ಮಾಡುವುದಕ್ಕೆ ನಡೆಯುತ್ತಿರುವ ತನಿಖೆಯಷ್ಟೇ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿ

ಜೈಲು ನಿರ್ವಹಣೆಯಲ್ಲಿ ಪದೆ ಪದೇ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹಾಕುತ್ತಾರೆ. ಆದರೆ ಇವರಿಗೇನಿದೆ‍ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಿಎಂ ಅವರಿಗೆ ದೀರ್ಘ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ? ಮುಖ್ಯಮಂತ್ರಿಗಳಿಗೆ ಗುಪ್ತದಳ ಎನ್ನುವುದು ಇರುವುದಿಲ್ಲವೇ? ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಗೃಹ ಸಚಿವರ ರಾಜಿನಾಮೆಗೆ ಒತ್ತಾಯಿಸ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಒತ್ತಾಯ ಮಾಡಿದಾಕ್ಷಣ ರಾಜಿನಾಮೆ ಕೊಡುವ ಕಾಲವೇ ಇದು? ಅಷ್ಟೊಂದು ನೈತಿಕತೆ ಯಾವ ರಾಜಕಾರಣಿಗಿದೆ? ಎಂದು ಉತ್ತರಿಸಿದರು.

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಿರುವ ವಿಚಾರದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನ ಇಲ್ಲಿಗೆ ಬರುತ್ತಾರೆ. ಅನೇಕ ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ.

ನಾವು ಸಣ್ಣತನ ತೋರುವ ಅಗತ್ಯ ಇಲ್ಲ. ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡುವ ಮಾಡಿಕೊಡಬೇಕು. ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!