ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಬಿಡುಗಡೆ

Manjunatha M. Adde's research Book 'Rajakumara of the Poor' released

ಯಲಹಂಕ: ಜನ ಹಾಗೂ ಸರ್ಕಾರವನ್ನು ಪ್ರಭಾವಿಸುವಷ್ಟು ಎತ್ತರಕ್ಕೆ ಬೆಳೆದ ನಾಯಕ ರಾಜಕುಮಾರ್ (Rajakumara) ಅವರು ತಳವರ್ಗದ, ಕಾರ್ಮಿಕ ವರ್ಗದ ಸಾಂಸ್ಕೃತಿಕ ನಾಯಕರು ಆಗಿದ್ದವರು ಎಂದು ನಾಟಕಕಾರ ಹಾಗೂ ಕವಿ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.

ಅವರು ಕಾಕೋಳು ಸಮೀಪದ ಅನುಬಂಧ ರೆಸಾರ್ಟ್ನಲ್ಲಿ ಭಾನುವಾರ ಹೆಸರಘಟ್ಟ ಸಾಹಿತ್ಯ ಸಹೃದಯ ವೇದಿಕೆ ಹಾಗೂ ಕೌದಿ ಪ್ರಕಾಶ ವತಿಯಿಂದ ನಡೆದ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಪುಸ್ತಕ ಬಿಡುಗಡೆ ಮಾತನಾಡಿದರು.

20ನೇ ಶತಮಾನದಲ್ಲಿ ಕರ್ನಾಟಕವನ್ನು ಭಾವನಾತ್ಮಕವಾಗಿ ಮತ್ತು ಅಖಂಡವಾಗಿ ಪ್ರಭಾವಿಸಿದ ವ್ಯಕ್ತಿತ್ವ ಹೊಂದಿದ್ದವರು ರಾಜಕುಮಾರ್. ತಮ್ಮ ಚಿತ್ರಗಳ ಮೂಲಕ ಬಡವರಲ್ಲಿ ಆತ್ಮವಿಶ್ವಾಸ, ಸಾಂಭಿಮಾನವನ್ನು ಜಾಗೃತಗೊಳಿಸಿದ್ದವರು. ಹಾಗೆಯೇ ಬಡವರು ತಮ್ಮ ಎತ್ತರದ ಕನಸುಗಳನ್ನು ನಿರಂತರವಾಗಿ ಉಳಿಸಿಕೊಳ್ಳುವಂತೆ ಮಾಡಿದವರು ರಾಜ್ಕುಮಾರ್.

ಇವರ ಚಿತ್ರಗಳು ಸಾಮಾಜಿಕವಾಗಿ ಮೂಡಿಸಿದ ಪ್ರಭಾವ ಮಹತ್ವದ್ದಾಗಿವೆ. ಯಜಮಾನಿಕೆ, ಸಾಮಾಜಿಕ ಅನ್ಯಾಯದ ವಿರುದ್ಧ ಸೆಟೆದು ನಿಲ್ಲುವಂತೆ ಮಾಡಿರುವ ರಾಜ್ ಕುಮಾರ್ ಚಿತ್ರಗಳನ್ನು ಮನರಂಜನೆಯಾಗಿಯಷ್ಟೇ ನೋಡದೆ ಸಾಮಾಜಿಕ ಪಠ್ಯವಾಗಿ ಅಧ್ಯಯನ ಮಾಡಿ ಬರೆದಿರುವ ಪುಸ್ತಕ ಬಡವರ ರಾಜಕುಮಾರ.

ಸಿನಿಮಾ ವಿಮರ್ಶೆಗೆ ಹೊಸ ಅಯಾಮ, ಹೊಸ ಸ್ಪರ್ಷವನ್ನು ಈ ಸಂಶೋಧನ ಕೃತಿ ನೀಡಿದೆ ಎಂದರು.

ಹಿರಿಯ ಲೇಖಕಿ ಡಾ.ವಸುಂಧರಾಭೂಪತಿ ಮಾತನಾಡಿ, ಕನ್ನಡ ರಂಗಭೂಮಿ, ಸಿನಿಮಾ ಎರಡನ್ನೂ ಸಂಗಮಿಸಿದ ಮಹಾನ್ ನಟ ರಾಜ್ಕುಮಾರ್. ಸಿನಿಮಾ ಜಗತ್ತಿನಲ್ಲಿ ನವರಸಗಳನ್ನು ತಮ್ಮ ಅಭಿನಯದ ಮೂಲಕ ಸಮರ್ಥವಾಗಿ ತೋರಿಸಿಕೊಟ್ಟ ರಾಜ್ಕುಮಾರ್ ಅವರು ಚಿತ್ರಗಳು ಕನ್ನಡಿಗರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿವೆ ಎಂದರು.

ರಾಜ್ಯ ಸರ್ಕಾರ ಜನರಿಂದ ತೆರಿಗೆ ಸಂಗ್ರಹದಲ್ಲಿ ಗ್ರಂಥಾಲಯ ಸೆಸ್ ಸಂಗ್ರಹ ಮಾಡುತ್ತಿದೆ. ಆದರೆ ಗ್ರಂಥಗಳ ಖರೀದಿಯನ್ನು ಮಾತ್ರ ಮಾಡುತ್ತಿಲ್ಲ. ವಾರ್ಷಿಕ ₹20 ಕೋಟಿಯನ್ನು ಪುಸ್ತಕ ಖರೀದಿಗೆ ಮೀಸಲಿಡಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಾಗೂ ಪುಸ್ತಕ ಬಿಡುಗಡೆ ಮಾಡಿದ ಮಾಜಿ ರಾಜ್ಯ ಸಭಾ ಸದಸ್ಯ ಹಾಗೂ ಕವಿ ಡಾ.ಎಲ್.ಹನುಮಂತಯ್ಯ ಮಾತನಾಡಿ, ರಾಜ್ ಕುಮಾರ್ ಅವರು ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಆದರೆ ಅವರು ತಮ್ಮ ಹಾಡುಗಾರಿಕೆಗೆ ಪಡೆಯುತ್ತಿದ್ದ ಹಣವನ್ನು ಎಂದೂ ಸ್ವಂತಕ್ಕೆ ಬಳಸದೆ ಅನಾಥಾಶ್ರಮಕ್ಕೆ ನೀಡುತ್ತಿದ್ದ ಸಂಗತಿ ಬಹುತೇಕರಿಗೆ ತಿಳಿಯದಿಲ್ಲ.

ತಾವು ನಟಿಸುತ್ತಿದ್ದ ಸಿನಿಮಾಗಳಲ್ಲಿ ಸಾಮಾಜಿಕ ಮೌಲ್ಯ, ಆದರ್ಶಗಳು ಇರಬೇಕು ಎಂದು ಸದಾ ಭಾವಿಸುತ್ತಿದ್ದ ವ್ಯಕ್ತಿ ರಾಜ್ಕುಮಾರ್. ಬಡವರ ರಾಜಕುಮಾರ ಪುಸ್ತಕ ರಾಜ್ಕುಮಾರ್ ಅವರನ್ನು ಹೊಗಳಿ ಬರೆದಿರುವ ಪುಸ್ತಕ ಎಂದಷ್ಟೇ ನೋಡದೆ ಅಂದಿನ ನಮ್ಮ ನಾಡಿನ ಸಾಮಾಜಿಕ ಸ್ಥಿತಿಯನ್ನು ಕುರಿತ ಅಧ್ಯಯನದ ಕೃತಿಯಾಗಿ ಓದಬೇಕಿದೆ ಎಂದರು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಡವರ ರಾಜಕುಮಾರ ಪುಸ್ತಕದ ಲೇಖಕ ಮಂಜುನಾಥ ಎಂ.ಅದ್ದೆ, ಕಾಂಗ್ರೆಸ್ ಮುಖಂಡ ನಟರಾಜಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಾಜೀದ್, ಕೌದಿ ಪ್ರಕಾಶನದ ಕೆ.ಎನ್.ಮಮತಾ ಇದ್ದರು.

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]