Manjunatha M. Adde's research Book 'Rajakumara of the Poor' released

ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಬಿಡುಗಡೆ

ಯಲಹಂಕ: ಜನ ಹಾಗೂ ಸರ್ಕಾರವನ್ನು ಪ್ರಭಾವಿಸುವಷ್ಟು ಎತ್ತರಕ್ಕೆ ಬೆಳೆದ ನಾಯಕ ರಾಜಕುಮಾರ್ (Rajakumara) ಅವರು ತಳವರ್ಗದ, ಕಾರ್ಮಿಕ ವರ್ಗದ ಸಾಂಸ್ಕೃತಿಕ ನಾಯಕರು ಆಗಿದ್ದವರು ಎಂದು ನಾಟಕಕಾರ ಹಾಗೂ ಕವಿ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.

ಅವರು ಕಾಕೋಳು ಸಮೀಪದ ಅನುಬಂಧ ರೆಸಾರ್ಟ್ನಲ್ಲಿ ಭಾನುವಾರ ಹೆಸರಘಟ್ಟ ಸಾಹಿತ್ಯ ಸಹೃದಯ ವೇದಿಕೆ ಹಾಗೂ ಕೌದಿ ಪ್ರಕಾಶ ವತಿಯಿಂದ ನಡೆದ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಪುಸ್ತಕ ಬಿಡುಗಡೆ ಮಾತನಾಡಿದರು.

20ನೇ ಶತಮಾನದಲ್ಲಿ ಕರ್ನಾಟಕವನ್ನು ಭಾವನಾತ್ಮಕವಾಗಿ ಮತ್ತು ಅಖಂಡವಾಗಿ ಪ್ರಭಾವಿಸಿದ ವ್ಯಕ್ತಿತ್ವ ಹೊಂದಿದ್ದವರು ರಾಜಕುಮಾರ್. ತಮ್ಮ ಚಿತ್ರಗಳ ಮೂಲಕ ಬಡವರಲ್ಲಿ ಆತ್ಮವಿಶ್ವಾಸ, ಸಾಂಭಿಮಾನವನ್ನು ಜಾಗೃತಗೊಳಿಸಿದ್ದವರು. ಹಾಗೆಯೇ ಬಡವರು ತಮ್ಮ ಎತ್ತರದ ಕನಸುಗಳನ್ನು ನಿರಂತರವಾಗಿ ಉಳಿಸಿಕೊಳ್ಳುವಂತೆ ಮಾಡಿದವರು ರಾಜ್ಕುಮಾರ್.

ಇವರ ಚಿತ್ರಗಳು ಸಾಮಾಜಿಕವಾಗಿ ಮೂಡಿಸಿದ ಪ್ರಭಾವ ಮಹತ್ವದ್ದಾಗಿವೆ. ಯಜಮಾನಿಕೆ, ಸಾಮಾಜಿಕ ಅನ್ಯಾಯದ ವಿರುದ್ಧ ಸೆಟೆದು ನಿಲ್ಲುವಂತೆ ಮಾಡಿರುವ ರಾಜ್ ಕುಮಾರ್ ಚಿತ್ರಗಳನ್ನು ಮನರಂಜನೆಯಾಗಿಯಷ್ಟೇ ನೋಡದೆ ಸಾಮಾಜಿಕ ಪಠ್ಯವಾಗಿ ಅಧ್ಯಯನ ಮಾಡಿ ಬರೆದಿರುವ ಪುಸ್ತಕ ಬಡವರ ರಾಜಕುಮಾರ.

ಸಿನಿಮಾ ವಿಮರ್ಶೆಗೆ ಹೊಸ ಅಯಾಮ, ಹೊಸ ಸ್ಪರ್ಷವನ್ನು ಈ ಸಂಶೋಧನ ಕೃತಿ ನೀಡಿದೆ ಎಂದರು.

ಹಿರಿಯ ಲೇಖಕಿ ಡಾ.ವಸುಂಧರಾಭೂಪತಿ ಮಾತನಾಡಿ, ಕನ್ನಡ ರಂಗಭೂಮಿ, ಸಿನಿಮಾ ಎರಡನ್ನೂ ಸಂಗಮಿಸಿದ ಮಹಾನ್ ನಟ ರಾಜ್ಕುಮಾರ್. ಸಿನಿಮಾ ಜಗತ್ತಿನಲ್ಲಿ ನವರಸಗಳನ್ನು ತಮ್ಮ ಅಭಿನಯದ ಮೂಲಕ ಸಮರ್ಥವಾಗಿ ತೋರಿಸಿಕೊಟ್ಟ ರಾಜ್ಕುಮಾರ್ ಅವರು ಚಿತ್ರಗಳು ಕನ್ನಡಿಗರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿವೆ ಎಂದರು.

ರಾಜ್ಯ ಸರ್ಕಾರ ಜನರಿಂದ ತೆರಿಗೆ ಸಂಗ್ರಹದಲ್ಲಿ ಗ್ರಂಥಾಲಯ ಸೆಸ್ ಸಂಗ್ರಹ ಮಾಡುತ್ತಿದೆ. ಆದರೆ ಗ್ರಂಥಗಳ ಖರೀದಿಯನ್ನು ಮಾತ್ರ ಮಾಡುತ್ತಿಲ್ಲ. ವಾರ್ಷಿಕ ₹20 ಕೋಟಿಯನ್ನು ಪುಸ್ತಕ ಖರೀದಿಗೆ ಮೀಸಲಿಡಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಾಗೂ ಪುಸ್ತಕ ಬಿಡುಗಡೆ ಮಾಡಿದ ಮಾಜಿ ರಾಜ್ಯ ಸಭಾ ಸದಸ್ಯ ಹಾಗೂ ಕವಿ ಡಾ.ಎಲ್.ಹನುಮಂತಯ್ಯ ಮಾತನಾಡಿ, ರಾಜ್ ಕುಮಾರ್ ಅವರು ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಆದರೆ ಅವರು ತಮ್ಮ ಹಾಡುಗಾರಿಕೆಗೆ ಪಡೆಯುತ್ತಿದ್ದ ಹಣವನ್ನು ಎಂದೂ ಸ್ವಂತಕ್ಕೆ ಬಳಸದೆ ಅನಾಥಾಶ್ರಮಕ್ಕೆ ನೀಡುತ್ತಿದ್ದ ಸಂಗತಿ ಬಹುತೇಕರಿಗೆ ತಿಳಿಯದಿಲ್ಲ.

ತಾವು ನಟಿಸುತ್ತಿದ್ದ ಸಿನಿಮಾಗಳಲ್ಲಿ ಸಾಮಾಜಿಕ ಮೌಲ್ಯ, ಆದರ್ಶಗಳು ಇರಬೇಕು ಎಂದು ಸದಾ ಭಾವಿಸುತ್ತಿದ್ದ ವ್ಯಕ್ತಿ ರಾಜ್ಕುಮಾರ್. ಬಡವರ ರಾಜಕುಮಾರ ಪುಸ್ತಕ ರಾಜ್ಕುಮಾರ್ ಅವರನ್ನು ಹೊಗಳಿ ಬರೆದಿರುವ ಪುಸ್ತಕ ಎಂದಷ್ಟೇ ನೋಡದೆ ಅಂದಿನ ನಮ್ಮ ನಾಡಿನ ಸಾಮಾಜಿಕ ಸ್ಥಿತಿಯನ್ನು ಕುರಿತ ಅಧ್ಯಯನದ ಕೃತಿಯಾಗಿ ಓದಬೇಕಿದೆ ಎಂದರು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಡವರ ರಾಜಕುಮಾರ ಪುಸ್ತಕದ ಲೇಖಕ ಮಂಜುನಾಥ ಎಂ.ಅದ್ದೆ, ಕಾಂಗ್ರೆಸ್ ಮುಖಂಡ ನಟರಾಜಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಾಜೀದ್, ಕೌದಿ ಪ್ರಕಾಶನದ ಕೆ.ಎನ್.ಮಮತಾ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!