Manjunatha M. Adde's research Book 'Rajakumara of the Poor' released

ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಬಿಡುಗಡೆ

ಯಲಹಂಕ: ಜನ ಹಾಗೂ ಸರ್ಕಾರವನ್ನು ಪ್ರಭಾವಿಸುವಷ್ಟು ಎತ್ತರಕ್ಕೆ ಬೆಳೆದ ನಾಯಕ ರಾಜಕುಮಾರ್ (Rajakumara) ಅವರು ತಳವರ್ಗದ, ಕಾರ್ಮಿಕ ವರ್ಗದ ಸಾಂಸ್ಕೃತಿಕ ನಾಯಕರು ಆಗಿದ್ದವರು ಎಂದು ನಾಟಕಕಾರ ಹಾಗೂ ಕವಿ ಡಾ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.

ಅವರು ಕಾಕೋಳು ಸಮೀಪದ ಅನುಬಂಧ ರೆಸಾರ್ಟ್ನಲ್ಲಿ ಭಾನುವಾರ ಹೆಸರಘಟ್ಟ ಸಾಹಿತ್ಯ ಸಹೃದಯ ವೇದಿಕೆ ಹಾಗೂ ಕೌದಿ ಪ್ರಕಾಶ ವತಿಯಿಂದ ನಡೆದ ಸಮಾರಂಭದಲ್ಲಿ ಪ್ರಗತಿಪರ ಚಿಂತಕ ಮಂಜುನಾಥ ಎಂ.ಅದ್ದೆ ಅವರ ಸಂಶೋಧನ ಕೃತಿ ‘ಬಡವರ ರಾಜಕುಮಾರ’ ಪುಸ್ತಕ ಬಿಡುಗಡೆ ಮಾತನಾಡಿದರು.

20ನೇ ಶತಮಾನದಲ್ಲಿ ಕರ್ನಾಟಕವನ್ನು ಭಾವನಾತ್ಮಕವಾಗಿ ಮತ್ತು ಅಖಂಡವಾಗಿ ಪ್ರಭಾವಿಸಿದ ವ್ಯಕ್ತಿತ್ವ ಹೊಂದಿದ್ದವರು ರಾಜಕುಮಾರ್. ತಮ್ಮ ಚಿತ್ರಗಳ ಮೂಲಕ ಬಡವರಲ್ಲಿ ಆತ್ಮವಿಶ್ವಾಸ, ಸಾಂಭಿಮಾನವನ್ನು ಜಾಗೃತಗೊಳಿಸಿದ್ದವರು. ಹಾಗೆಯೇ ಬಡವರು ತಮ್ಮ ಎತ್ತರದ ಕನಸುಗಳನ್ನು ನಿರಂತರವಾಗಿ ಉಳಿಸಿಕೊಳ್ಳುವಂತೆ ಮಾಡಿದವರು ರಾಜ್ಕುಮಾರ್.

ಇವರ ಚಿತ್ರಗಳು ಸಾಮಾಜಿಕವಾಗಿ ಮೂಡಿಸಿದ ಪ್ರಭಾವ ಮಹತ್ವದ್ದಾಗಿವೆ. ಯಜಮಾನಿಕೆ, ಸಾಮಾಜಿಕ ಅನ್ಯಾಯದ ವಿರುದ್ಧ ಸೆಟೆದು ನಿಲ್ಲುವಂತೆ ಮಾಡಿರುವ ರಾಜ್ ಕುಮಾರ್ ಚಿತ್ರಗಳನ್ನು ಮನರಂಜನೆಯಾಗಿಯಷ್ಟೇ ನೋಡದೆ ಸಾಮಾಜಿಕ ಪಠ್ಯವಾಗಿ ಅಧ್ಯಯನ ಮಾಡಿ ಬರೆದಿರುವ ಪುಸ್ತಕ ಬಡವರ ರಾಜಕುಮಾರ.

ಸಿನಿಮಾ ವಿಮರ್ಶೆಗೆ ಹೊಸ ಅಯಾಮ, ಹೊಸ ಸ್ಪರ್ಷವನ್ನು ಈ ಸಂಶೋಧನ ಕೃತಿ ನೀಡಿದೆ ಎಂದರು.

ಹಿರಿಯ ಲೇಖಕಿ ಡಾ.ವಸುಂಧರಾಭೂಪತಿ ಮಾತನಾಡಿ, ಕನ್ನಡ ರಂಗಭೂಮಿ, ಸಿನಿಮಾ ಎರಡನ್ನೂ ಸಂಗಮಿಸಿದ ಮಹಾನ್ ನಟ ರಾಜ್ಕುಮಾರ್. ಸಿನಿಮಾ ಜಗತ್ತಿನಲ್ಲಿ ನವರಸಗಳನ್ನು ತಮ್ಮ ಅಭಿನಯದ ಮೂಲಕ ಸಮರ್ಥವಾಗಿ ತೋರಿಸಿಕೊಟ್ಟ ರಾಜ್ಕುಮಾರ್ ಅವರು ಚಿತ್ರಗಳು ಕನ್ನಡಿಗರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿವೆ ಎಂದರು.

ರಾಜ್ಯ ಸರ್ಕಾರ ಜನರಿಂದ ತೆರಿಗೆ ಸಂಗ್ರಹದಲ್ಲಿ ಗ್ರಂಥಾಲಯ ಸೆಸ್ ಸಂಗ್ರಹ ಮಾಡುತ್ತಿದೆ. ಆದರೆ ಗ್ರಂಥಗಳ ಖರೀದಿಯನ್ನು ಮಾತ್ರ ಮಾಡುತ್ತಿಲ್ಲ. ವಾರ್ಷಿಕ ₹20 ಕೋಟಿಯನ್ನು ಪುಸ್ತಕ ಖರೀದಿಗೆ ಮೀಸಲಿಡಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಾಗೂ ಪುಸ್ತಕ ಬಿಡುಗಡೆ ಮಾಡಿದ ಮಾಜಿ ರಾಜ್ಯ ಸಭಾ ಸದಸ್ಯ ಹಾಗೂ ಕವಿ ಡಾ.ಎಲ್.ಹನುಮಂತಯ್ಯ ಮಾತನಾಡಿ, ರಾಜ್ ಕುಮಾರ್ ಅವರು ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಆದರೆ ಅವರು ತಮ್ಮ ಹಾಡುಗಾರಿಕೆಗೆ ಪಡೆಯುತ್ತಿದ್ದ ಹಣವನ್ನು ಎಂದೂ ಸ್ವಂತಕ್ಕೆ ಬಳಸದೆ ಅನಾಥಾಶ್ರಮಕ್ಕೆ ನೀಡುತ್ತಿದ್ದ ಸಂಗತಿ ಬಹುತೇಕರಿಗೆ ತಿಳಿಯದಿಲ್ಲ.

ತಾವು ನಟಿಸುತ್ತಿದ್ದ ಸಿನಿಮಾಗಳಲ್ಲಿ ಸಾಮಾಜಿಕ ಮೌಲ್ಯ, ಆದರ್ಶಗಳು ಇರಬೇಕು ಎಂದು ಸದಾ ಭಾವಿಸುತ್ತಿದ್ದ ವ್ಯಕ್ತಿ ರಾಜ್ಕುಮಾರ್. ಬಡವರ ರಾಜಕುಮಾರ ಪುಸ್ತಕ ರಾಜ್ಕುಮಾರ್ ಅವರನ್ನು ಹೊಗಳಿ ಬರೆದಿರುವ ಪುಸ್ತಕ ಎಂದಷ್ಟೇ ನೋಡದೆ ಅಂದಿನ ನಮ್ಮ ನಾಡಿನ ಸಾಮಾಜಿಕ ಸ್ಥಿತಿಯನ್ನು ಕುರಿತ ಅಧ್ಯಯನದ ಕೃತಿಯಾಗಿ ಓದಬೇಕಿದೆ ಎಂದರು.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಡವರ ರಾಜಕುಮಾರ ಪುಸ್ತಕದ ಲೇಖಕ ಮಂಜುನಾಥ ಎಂ.ಅದ್ದೆ, ಕಾಂಗ್ರೆಸ್ ಮುಖಂಡ ನಟರಾಜಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಾಜೀದ್, ಕೌದಿ ಪ್ರಕಾಶನದ ಕೆ.ಎನ್.ಮಮತಾ ಇದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!