I have been against the Sanatanvadi RSS from the beginning, against the caste system and stupidity: Cmsiddaramaiah

ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈದ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್ ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್ ಗಳೂ ಆಗಿದ್ದಾರೆ. ನಾನು 1983 ರಲ್ಲಿ ಶಾಸಕನಾಗಿ 1984 ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988 ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ.

ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು.

ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರ್ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.

ಯಾರು ಮಾತಾಡಲಿ, ಬಿಡಲಿ ಇದು ಸತ್ಯ. ಇದು ಇತಿಹಾಸ. ಒಟ್ಟಿನಲ್ಲಿ ಸಮಾಜದ ಸಂಘಟನೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

*lಎಲ್ಲ ಸಮಾಜಕ್ಕೂ ಮಾಡಿದ್ದೇನೆ

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.

ಅದಕ್ಕೇ ರಾಜ್ಯದ ಎಲ್ಲಾ ಜಾತಿಯ, ಎಲ್ಲಾ ವರ್ಗದ, ಎಲ್ಲಾ ಧರ್ಮದ ಜನರೂ ನನ್ನನ್ನು ಪ್ರೀತಿಸ್ತಾರೆ. ಹೀಗಾಗಿ ನಾನು‌ ನಮ್ಮ ಜಾತಿ ಸೇರಿ ಸಮಾಜದ ಎಲ್ಲಾ ಜಾತಿ, ಧರ್ಮದವರ ಆಶೀರ್ವಾದಕ್ಕಾಗಿ ನಾನು ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.

ಜೀವಬೆದರಿಕೆಯಿಂದ ಸಂಘದ ಚುನಾವಣೆವರೆಗೂ: ಸಿಎಂ ಸ್ಮರಣೆ

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದೆ.

ಬಳಿಕ ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ.

ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು.

ರಾಜ್ಯ ಸುತ್ತಿ ಸಮಾಜದ ಸಂಘಟಿಸಿದ್ದು ನಾನು, ಮುಕುಡಪ್ಪ, ಮಾಸ್ತಿ ಮತ್ತು ಇತರರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಈಗ ವಿಶ್ವನಾಥ್ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಆದ್ದರಿಂದ ಇಡೀ ಸಮಾಜ ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು.

ನಾನು ಸಮಾಜಕ್ಕೆ ಏನು ಮಾಡಿದ್ದೇನೆ ಎನ್ನುವ ಚರಿತ್ರೆಯನ್ನು ಮನದಟ್ಟು ಮಾಡಿಕೊಳ್ಳಬೇಕು. ಗುರುಪೀಠ ನಾನು ಮಾಡಿದ್ದು ಎಂದು ನಿರಂಜನಾನಂದಪುರಿ ಸ್ವಾಮೀಜಿಗೆ ಹೆದರಿಸುವವರು ಇತಿಹಾಸ ತಿರುಚುತ್ತಿದ್ದಾರೆ ಎಂದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!