Reading Kannada dailies improves Kannada language skills; Senior journalist Nagasandra Nataraj

ಕನ್ನಡ ದಿನಪತ್ರಿಕೆಗಳ ಓದುವುದರಿಂದ ಕನ್ನಡ ಭಾಷಾ ಸಾಮಾರ್ಥ್ಯ ಹೆಚ್ಚಳ; ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್

ದೊಡ್ಡಬಳ್ಳಾಪುರ: ಕನ್ನಡ ದಿನಪತ್ರಿಕೆಗಳ ಓದುವ ಹವ್ಯಾಸದಿಂದ ಕನ್ನಡ ಭಾಷಾ ಸಾಮಾರ್ಥ್ಯ ಹೆಚ್ಚಿಸುವುದರೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿ ಆಗುತ್ತದೆ ಎಂದು ಅನಿಕೇತನ ಟ್ರಸ್ಟ್‌ ಕಾರ್ಯದರ್ಶಿ, ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್ (Senior journalist Nagasandra Nataraj) ತಿಳಿಸಿದರು. 

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಭಾರತದ ಕ್ಷಿಪಣಿ ಮನುಷ್ಯ ಮತ್ತು ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರಿಗೆ ದಿನಪತ್ರಿಕೆಗಳ ಓದು ಅವರು‌ ಉನ್ನತ ಸಾಧನೆ ಮಾಡಲು ಸಾಧ್ಯವಾಯಿತು.  ದಿನಪತ್ರಿಕೆಗಳನ್ನು  ಹಂಚಿ ಉಳಿದ ಐದಾರು ದಿನಪತ್ರಿಕೆಗಳನ್ನು ಅಬ್ದುಲ್ ಕಲಾಂ ಓದುತ್ತಿದ್ದರು. ಅದು ಅವರ ಜ್ಞಾನದ ವಿಕಾಸಕ್ಕೆ ಅಡಿಪಾಯವಾಯಿತು ಎಂದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ದಿನಪತ್ರಿಕೆಗಳನ್ನು‌ ಓದುವ ಹವ್ಯಾಸ ರೂಢಿಕೊಳ್ಳಬೇಕು. ಪತ್ರಿಕೆಗಳ ಭಾಷೆ ಸರಳವಾಗಿರುತ್ತದೆ. ವಿಷಯಗಳ ನಿಖರತೆ ಇರುತ್ತದೆ. ಓದುವ ಹವ್ಯಾಸ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಸಾಮಾನ್ಯ ಜ್ಞಾನದೊಂದಿಗೆ ಲೋಕ ಜ್ಞಾನವು ಪಡೆಯುವ ಮೂಲಕ ವ್ಯಕ್ತಿತ್ವದ  ಸರ್ವಾಂಗೀಣ ಬೆಳೆವಣಿಗೆಗೆ ಅನುಕೂಲವಾಗುತ್ತದೆ.

ಕನ್ನಡ ದಿನಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯಬಹುದು, ಸಾಮಾನ್ಯ ಜ್ಞಾನ ಹೆಚ್ಚಿಸಬಹುದು, ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬಹುದು ಎಂದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ಅಧ್ಯಕ್ಷ. ಡಾ.ಹುಲಿಕಲ್ ನಟರಾಜು ಮಾತನಾಡಿ, ಇಂದು ವಿಜ್ಞಾನ ಸಾಕಷ್ಟು ಬೆಳೆದಿದೆ. ಆದರೆ ಮಾನವೀಯತೆ ಬೆಳೆಯಬೇಕಾಗಿದೆ.    ಮಾನವೀಯ ಸಂವಹನವನ್ನು ವಿಜ್ಞಾನ ಬೆಳೆಸದಿದ್ದರೆ ಅದಕ್ಕೆ ಬೆಲೆ ಇಲ್ಲದಾಗುತ್ತದೆ.

ವಿದ್ಯಾರ್ಥಿಗಳು ಸಕಾರಾತ್ಮಕವಾದ  ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಆಲೋಚನೆ, ಚಿಂತನೆ, ಪ್ರಶ್ನೆ ಮಾಡುವ ಮನೋಭಾವದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯಲ್ಕೂ ಅಗಾಧವಾದ ಚೈತನ್ಯ, ನೈಪುಣ್ಯ ಇರುತ್ತದೆ. ಅದನ್ನು ಸಕಾಲದಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮೌಢ್ಯತೆಯಿಂದ ದೂರ ಉಳಿಯಬೇಕಾದವರು ಪಂಚಾಂಗ ನೋಡುವುದನ್ನು ಬಿಟ್ಟು, ಪಂಚ ಅಂಗಗಳ ಕಡೆಗೆ ಗಮನ‌ಕೊಡಬೇಕೆಂದರು.
ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ  ಡಾ.ಎಚ್.ಎಸ್.ದಾಕ್ಷಾಯಿಣಿ, ಹಿರಿಯ ಶಿಕ್ಷಕರಾದ ಪೂರ್ಣಿಮ, ನಾಗಭೂಷಣ್, ಚಿಕ್ಕೇಗೌಡ,  ಎನ್.ಆನಂದಮ್ಮ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು,  ಡಿ.ಪಿ.ಆಂಜನೇಯ, ಮಂಜುನಾಥ್ ಬಾಶೆಟ್ಟಿಹಳ್ಳಿ, ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವರಾಜ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!