The work is ok.. When will Doddballapura be pothole free..?

ನಾಳೆಯಿಂದ ಕಾಮಗಾರಿ ಓಕೆ.. ಗುಂಡಿ ಮುಕ್ತ ದೊಡ್ಡಬಳ್ಳಾಪುರ ಯಾವಾಗ‌‌..?

ಕೆ.ಎಂ.ಸಂತೋಷ್, ಆರೂಢಿ: ನಾಳೆಯಿಂದ (ನ.13) ದೊಡ್ಡಬಳ್ಳಾಪುರ (Doddaballapura) ನಗರದ ರಂಗಪ್ಪ ವೃತ್ತದಿಂದ ಡಾ. ರಾಜಕುಮಾರ್ ವೃತ್ತದವರೆಗೆ ಒಳಚರಂಡಿ ಕಾಮಗಾರಿ ನಡೆಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ನಗರಸಭೆಯಿಂದ ಜನರಿಗೆ ತಲುಪುತ್ತಿಲ್ಲ ಎಂಬ ದಿನ ಪತ್ರಿಕೆಗಳಿಗೆ ಮಾತ್ರ ಜಾಹೀರಾತು ನೀಡಿ, ಸಾವಿರಾರು ರೂ ಹಣ ಲಪಟಾಯಿಸುತ್ತಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿದೆ.

ಈ ಕಾಮಗಾರಿ ಕುರಿತಂತೆ ಹರಿತಲೇಖನಿ ಓದುಗರ ಮಾಹಿತಿ ಮೇರೆಗೆ ಗಮನಿಸಿದಾಗ, ನಾಳೆಯಿಂದ (ನ.13) ಎನ್.ಜಿ.ಟಿ ಪರಿಸರ ಪರಿಹಾರ ನಿಧಿಯಡಿ ಭಜನೆಹಟ್ಟಿರಂಗಪ್ಪ (ರಂಗಪ್ಪ ಸರ್ಕಲ್) ವೃತ್ತದಿಂದ ಡಿ-ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೂ ಒಳಚರಂಡಿ ಪೈಪ್ ಲೈನ್ ಕಾಮಗಾರಿಯ ಜಾಹೀರಾತಿನ ಪ್ರತಿಯನ್ನು ಪೊಲೀಸ್ ಇಲಾಖೆ ಪೊಸ್ಟ್ ಮಾಡಿದೆ.

ಈ ಕಾಮಗಾರಿ ಹಿನ್ನೆಲೆ ದೊಡ್ಡಬಳ್ಳಾಪುರ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ದೊಡ್ಡಬಳ್ಳಾಪುರ ನಗರಕ್ಕೆ ಬಂದು ಹೋಗುವ ಬಸ್, ಲಾರಿ, ಕಾರು ಮತ್ತು ಆಟೋಗಳು (ದ್ವಿಚಕ್ರ ವಾಹನ ಹೊರತುಪಡಿಸಿ) ಡಿ ಕ್ರಾಸ್ ಮುಖಾಂತರ ಸಂಚರಿಸಬೇಕಿದೆ.

ನೆಲಮಂಗಲ ಕಡೆ ತೆರಳುವ ವಾಹನಗಳು ಡಿ ಕ್ರಾಸ್, ಐಬಿ ಸರ್ಕಲ್, ತಾಲೂಕು ಕಚೇರಿ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಮುಖಾಂತರ ಸಂಚರಿಸುವುದು.

ಯಾವುದೇ ರೀತಿಯಾದ ಸಂಚಾರಕ್ಕೆ ಅಡೆತಡೆಯಾಗದೆ ಕಾರ್ಯಚರಣೆ ಮಾಡುವಂತೆ ಈ ಮೂಲಕ ವಿನಂತಿಸಲಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ದೊಡ್ಡಬಳ್ಳಾಪುರದ ಚಿಂತಕನ ಪ್ರಶ್ನೆ

ಈ ಕುರಿತಂತೆ ದೊಡ್ಡಬಳ್ಳಾಪುರದ ಚಿಂತಕ, ದೊಡ್ಡಬಳ್ಳಾಪುರದ ಸಾರಿಗೆ ಅವ್ಯವಸ್ಥೆ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ದೂರು ನೀಡಿ, ದೊಡ್ಡಬಳ್ಳಾಪುರಕ್ಕೆ ಅಶ್ವಮೇಧ ಬಸ್‌ಗಳನ್ನು ನೀಡುವಂತೆ ಪಟ್ಟುಹಿಡಿದು, ಸಾಧಿಸಿದ ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ನಾಗ್ ಅವರು ಈ ಕಾಮಗಾರಿಗೆ ಬೆಂಬಲ ನೀಡಿದ್ದರೂ, ರಸ್ತೆ ಗುಂಡಿಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ರಸ್ತೆ ಅವ್ಯವಸ್ಥೆ, ಗುಂಡಿಗಳ ಸಮಸ್ಯೆ ಕುರಿತು ಪರೋಕ್ಷವಾಗಿ ಪ್ರಶ್ನೆ ಮಾಡಿದ್ದಾರೆ.

ಆರೋಪ

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ ಎಂಬುದು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಆರೋಪ.

ಇದರ ನಡುವೆಯೂ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಅವರ ಅವಧಿಯಲ್ಲಿ ಕೆಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.

ಶಾಸಕರ ಭಾವಚಿತ್ರಕ್ಕೆ ಗೌರವ ನೀಡಿ

ವಿಪರ್ಯಾಸವೆಂದರೆ ಕಾಮಗಾರಿ ಗುತ್ತಿಗೆ ಪಡೆದವರು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರ ಫೋಟೋವನ್ನ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದು ಫ್ಲೆಕ್ಸ್ ಮುದ್ರಿಸಿ, ಸಾರ್ವಜನಿಕರಿಗೆ ಮುಜುಗರ ತರುವಂತೆ ಬೇಕಾಬಿಟ್ಟಿಯಾಗಿ ಬಳಸುತ್ತಿದ್ದಾರೆ.

ಈ ರೀತಿ ದೊಡ್ಡಬಳ್ಳಾಪುರ ಶಾಸಕರ ಫೋಟೋ ಬಳಸಿ ಓಲೈಕೆಗೆ ಸೀಮಿತವಾಗದೇ, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಗುಂಡಿ ಮುಕ್ತ ದೊಡ್ಡಬಳ್ಳಾಪುರ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!